AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೇ 30ರಷ್ಟು ಬೆಡ್​ಗಳನ್ನು ಮೀಸಲಿರಿಸಲು ಖಾಸಗಿ ಆಸ್ಪತ್ರೆಗಳಿಗೆ ಕರ್ನಾಟಕ ಸರ್ಕಾರ ಸೂಚನೆ

Coronavirus 3rd Wave: ಜ.10ರ ಒಳಗೆ ವೈದ್ಯಕೀಯ ಶಿಕ್ಷಣ ಸಂಸ್ಥೆಯಲ್ಲಿ ಶೇ 75ರಷ್ಟು ಬೆಡ್​ಗಳನ್ನು ಮೀಸಲಿಡಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ.

ಶೇ 30ರಷ್ಟು ಬೆಡ್​ಗಳನ್ನು ಮೀಸಲಿರಿಸಲು ಖಾಸಗಿ ಆಸ್ಪತ್ರೆಗಳಿಗೆ ಕರ್ನಾಟಕ ಸರ್ಕಾರ ಸೂಚನೆ
ಪ್ರಾತಿನಿಧಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jan 05, 2022 | 9:10 PM

Share

ಬೆಂಗಳೂರು: ಕೊರೊನಾ 3ನೇ ಅಲೆಯ ಭೀತಿ (Coronavirus 3rd Wave) ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಎಲ್ಲ ಖಾಸಗಿ ಆಸ್ಪತ್ರೆ, ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ತಕ್ಷಣದಿಂದ ಶೇ 30ರಷ್ಟು ಬೆಡ್​ಗಳನ್ನು ಸೋಂಕಿತರ ಚಿಕಿತ್ಸೆಗೆ ಮೀಸಲಿಡಬೇಕು ಎಂದು ರಾಜ್ಯ ಸರ್ಕಾರವು ಸೂಚಿಸಿದೆ. ಜ.7ರ ಒಳಗೆ ಖಾಸಗಿ ಆಸ್ಪತ್ರೆಗಳು ಶೇ 50ರಷ್ಟು ಬೆಡ್​ಗಳನ್ನು ಮೀಸಲಿಡಬೇಕು. ಜ.10ರ ಒಳಗೆ ವೈದ್ಯಕೀಯ ಶಿಕ್ಷಣ ಸಂಸ್ಥೆಯಲ್ಲಿ ಶೇ 75ರಷ್ಟು ಬೆಡ್​ಗಳನ್ನು ಮೀಸಲಿಡಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. ಆರೋಗ್ಯ ಇಲಾಖೆಯಿಂದ ಶಿಫಾರಸಾಗುವ ರೋಗಿಗಳ ಚಿಕಿತ್ಸೆಗೆ ಈ ಬೆಡ್​ಗಳು ಮೀಸಲಿರಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕಡ್ಡಾಯ ಲಸಿಕೆಗೆ ಸೂಚನೆ ರಾಜ್ಯದಲ್ಲಿ ಕೊರೊನಾ ಸೊಂಕು ಪ್ರಕರಣಗಳು ಹೆಚ್ಚಳ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆಗೆ ಮಾರ್ಗಸೂಚಿ ನಿಯಮವನ್ನು ರೂಪಿಸಿ, ತಕ್ಷಣದಿಂದ ಜಾರಿಗೆ ತರುವಂತೆ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಆದೇಶ ಮಾಡಿದ್ದಾರೆ. ಕೈಗಾರಿಕೆ, ಮಾಹಿತಿ ತಂತ್ರಜ್ಞಾನ ವಲಯದ ಎಲ್ಲ ಉದ್ಯೋಗಿಗಳು ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು. ಕೆಲಸದ ಸ್ಥಳದಲ್ಲಿ ಕೊವಿಡ್ ಮಾರ್ಗಸೂಚಿ ಪಾಲನೆಯಾಗುವುದನ್ನು. ಸ್ಥಳೀಯ ಕಾರ್ಮಿಕ ಅಧಿಕಾರಿ ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಗಡಿ ಚೆಕ್​ಪೋಸ್ಟ್​ಗಳಿಗೆ ಡಿಸಿ, ಎಸ್​ಪಿ ದಿಢೀರ್ ಭೇಟಿ ಕಾರವಾರ: ಕರ್ನಾಟಕದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಕಠಿಣ ಕ್ರಮಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ. ಇದರ ಭಾಗವಾಗಿ ಬುಧವಾರ ಗೋವಾ ಗಡಿಯ ಚೆಕ್​ಪೋಸ್ಟ್​ಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾಧಿಕಾರಿ ಮುಲೈ ಮುಗಿಲನ್, ಎಸ್ಪಿ ಸುಮನ್ ಪೆನ್ನೆಕರ್ ಕಾರವಾರದ ಮಾಜಾಳಿ ಚೆಕ್​ಪೋಸ್ಟ್​ಗೆ ದಿಢೀರ್ ಭೇಟಿ ನೀಡಿದರು. ನಾಳೆಯಿಂದ (ಜ.6) ಗೋವಾದಿಂದ ಕಾರವಾರಕ್ಕೆ ಬರುವವರಿಗೆ ಡಬಲ್ ಡೋಸ್ ಲಸಿಕೆ ಜತೆಗೆ ಆರ್​ಟಿಪಿಸಿರ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಆರ್​ಟಿಪಿಸಿಆರ್ ಇಲ್ಲದೆ ಬಂದವರಿಗೆ ಕಾರವಾರಕ್ಕೆ ಪ್ರವೇಶ ಇರುವುದಿಲ್ಲ. ಗೋವಾದಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಜಾರಿಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಗಡಿಯಲ್ಲಿ ಇನ್ನಷ್ಟು ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗುತ್ತದೆ. ಪ್ರಯಾಣಿಕರ ಮೇಲೆ ಹದ್ದಿನ ಕಣ್ಣಿಡಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಹೊಸದಾಗಿ 4,246 ಕೊರೊನಾ ಪ್ರಕರಣಗಳು ಪತ್ತೆ; ಬೆಂಗಳೂರಿನಲ್ಲಿ ಮಾತ್ರವೇ 3,605 ಕೊವಿಡ್ ಪಾಸಿಟಿವ್ ಇದನ್ನೂ ಓದಿ: ಕೊವ್ಯಾಕ್ಸಿನ್ ಲಸಿಕೆ ಪಡೆದ ಮಕ್ಕಳಿಗೆ ಪ್ಯಾರಾಸೆಟಮಾಲ್ ಅಥವಾ ನೋವು ನಿವಾರಕ ಅಗತ್ಯವಿಲ್ಲ: ಭಾರತ್ ಬಯೊಟೆಕ್

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ