AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಮತ್ತೆ ವಿದ್ಯುತ್​ ದರ ಏರಿಕೆಗೆ ಸರ್ಕಾರ ನಿರ್ಧಾರ: ಬೆಂಗಳೂರು ಹೋಟೆಲ್ ಮಾಲೀಕರ ಸಂಘದಿಂದ ವಿರೋಧ

ಅ.1ರಿಂದ ಪರಿಷ್ಕೃತ ವಿದ್ಯುತ್ ದರ ಜಾರಿಗೆ ಬರುತ್ತಿದೆ. ದರ ಏರಿಕೆ ನಿರ್ಧಾರ ಮುಂದಿನ ವರ್ಷ ಏಪ್ರಿಲ್​ವರೆಗೆ ಮುಂದೂಡುವಂತೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘದಿಂದ ಆಗ್ರಹಿಸಿದೆ.

ರಾಜ್ಯದಲ್ಲಿ ಮತ್ತೆ ವಿದ್ಯುತ್​ ದರ ಏರಿಕೆಗೆ ಸರ್ಕಾರ ನಿರ್ಧಾರ: ಬೆಂಗಳೂರು ಹೋಟೆಲ್ ಮಾಲೀಕರ ಸಂಘದಿಂದ ವಿರೋಧ
ವಿದ್ಯುತ್ ದರ ಏರಿಕೆ (ಸಂಗ್ರಹ ಚಿತ್ರ)
TV9 Web
| Edited By: |

Updated on: Sep 25, 2022 | 3:14 PM

Share

ಬೆಂಗಳೂರು: ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ (electricity rates) ಏರಿಕೆಗೆ ಸರ್ಕಾರ ನಿರ್ಧಾರ ಮಾಡಿದ್ದು, ಈ ನಿರ್ಧಾರಕ್ಕೆ ಹೋಟೆಲ್ ಮಾಲೀಕರ ಸಂಘ ವಿರೋಧ ವ್ಯಕ್ತಪಡಿಸಿದೆ. ಪ್ರತಿ ಯೂನಿಟ್​ಗೆ 43 ಪೈಸೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಅ.1ರಿಂದ ಪರಿಷ್ಕೃತ ವಿದ್ಯುತ್ ದರ ಜಾರಿಗೆ ಬರುತ್ತಿದೆ. ದರ ಏರಿಕೆ ನಿರ್ಧಾರ ಮುಂದಿನ ವರ್ಷ ಏಪ್ರಿಲ್​ವರೆಗೆ ಮುಂದೂಡುವಂತೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘದಿಂದ ಆಗ್ರಹಿಸಿದೆ. ಈಗಾಗಲೇ ವಿದ್ಯುತ್ ಮೇಲಿನ ತೆರಿಗೆ ಶೇ‌ಕಡಾ 9ರಷ್ಟು ಇದೆ. ಇದನ್ನು ಶೇಕಡಾ 4ಕ್ಕೆ ಇಳಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುತ್ತಿದೆ. ಈ ಸಂಬಂಧ ಮುಂದಿನ ವಾರ ಇಂಧನ ಸಚಿವರನ್ನು ಭೇಟಿಯಾಗಿ ಮನವಿ ಸಲಿಸುವುದಾಗಿ ಬೆಂಗಳೂರು ಹೋಟೆಲ್ ಮಾಲೀಕರ ಸಂಘದಿಂದ ಮಾಹಿತಿ ನೀಡಲಾಗಿದೆ. ಈ ವರ್ಷ ಏಪ್ರಿಲ್​ನಲ್ಲಿ ಬೆಸ್ಕಾಂ ವಿದ್ಯುತ್ ದರ ಹೆಚ್ಚಿಸಿತ್ತು.

ಪ್ರತಿ ಯೂನಿಟ್​ಗೆ 35 ಪೈಸೆ ಏರಿಕೆ ಮಾಡಿದ್ದ ಬೆಸ್ಕಾಂ, ಕೊರೊನಾ ಬಳಿಕ ಈಗಷ್ಟೇ ಹೋಟೆಲ್​​ ಉದ್ಯಮದಲ್ಲಿ ಚೇತರಿಕೆ ಕಾಣುತ್ತಿದೆ. ವಿದ್ಯುತ್​ ದರ ಮತ್ತೆ ಏರಿಸಿದರೆ ಉದ್ಯಮಕ್ಕೆ ಸಮಸ್ಯೆ ಆಗಲಿದೆ ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿಸಿ ರಾವ್ ತಿಳಿಸಿದರು.

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ಮುಂದಿನ ಆರು ತಿಂಗಳ ಅವಧಿಯಲ್ಲಿ ಬೆಸ್ಕಾಂಗೆ ಪ್ರತಿ ತಿಂಗಳು ಪ್ರತಿ ಯೂನಿಟ್​ಗೆ 43 ಪೈಸೆ, ಮೆಸ್ಕಾಂಗೆ 24 ಪೈಸೆ, ಚಸ್ಕಾಂಗೆ 34 ಪೈಸೆ, ಹೆಸ್ಕಾಂಗೆ 35 ಪೈಸೆಯಂತೆ ಗ್ರಾಹಕರಿಂದ ವಸೂಲಿ ಮಾಡಲು ಅವಕಾಶ ನೀಡಿದೆ. ಅದರಂತೆ ಪ್ರತಿ ನೂರು ಯುನಿಟ್ ವಿದ್ಯುತ್ ಬಳಸುವ ಗ್ರಾಹಕರು ತಮ್ಮ ತಿಂಗಳ ವಿದ್ಯುತ್ ಬಿಲ್​ನಲ್ಲಿ ಹೆಚ್ಚುವರಿಯಾಗಿ 43 ರೂ. ನಿಂದ 24 ರೂ. ವರೆಗೆ ಪಾವತಿಸಬೇಕಾಗಿದೆ. ಈ ಮುಂಚೆ ಜುಲೈ 1, 2022ರಿಂದ ಡಿಸೆಂಬರ್ 31, 2022ರ ವರೆಗೆ ಇಂಧನ ವೆಚ್ಚ ಹೊಂದಾಣಿಕೆ (FAC) ವಸೂಲಿ ಮಾಡಲು ಅವಕಾಶ ನೀಡಲಾಗಿತ್ತು. ಆಗ ಪ್ರತಿ ನೂರು ಯುನಿಟ್ ವಿದ್ಯುತ್ ಬಳಸುವ ಗ್ರಾಹಕರು ತಮ್ಮ ತಿಂಗಳ ವಿದ್ಯುತ್ ಬಿಲ್​ನಲ್ಲಿ ಹೆಚ್ಚುವರಿಯಾಗಿ 19 ರೂ. ನಿಂದ 31 ರೂ. ಏರಿಕೆಯಾಗಿತ್ತು.‌ ಇದೀಗ ಮತ್ತೆ ಬೆಲೆ ಏರಿಕೆ ಬರೆ ಬಿದ್ದಿದೆ.

ವಿದ್ಯುತ್ ದರ ಹೆಚ್ಚಳ ಏಕೆ?

ಕಲ್ಲಿದ್ದಲು ದರ ಗಣನೀಯ ಹೆಚ್ಚಳವಾಗಿದ್ದು, ವಿದ್ಯುತ್ ಖರೀದಿ ವೆಚ್ಚದಲ್ಲಿ ಏರಿಕೆಯಾಗಿದೆ. ಹೀಗಾಗಿ, ಈ ವೆಚ್ಚ ಹೆಚ್ಚಳವನ್ನು ಗ್ರಾಹಕರಿಂದ ಪಡೆಯಲು ಅವಕಾಶ ಕಲ್ಪಿಸುವಂತೆ ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ) ಎಸ್ಕಾಂಗಳು ಪ್ರಸ್ತಾವ ಸಲ್ಲಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ