AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಮತ್ತೆ ವಿದ್ಯುತ್​ ದರ ಏರಿಕೆಗೆ ಸರ್ಕಾರ ನಿರ್ಧಾರ: ಬೆಂಗಳೂರು ಹೋಟೆಲ್ ಮಾಲೀಕರ ಸಂಘದಿಂದ ವಿರೋಧ

ಅ.1ರಿಂದ ಪರಿಷ್ಕೃತ ವಿದ್ಯುತ್ ದರ ಜಾರಿಗೆ ಬರುತ್ತಿದೆ. ದರ ಏರಿಕೆ ನಿರ್ಧಾರ ಮುಂದಿನ ವರ್ಷ ಏಪ್ರಿಲ್​ವರೆಗೆ ಮುಂದೂಡುವಂತೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘದಿಂದ ಆಗ್ರಹಿಸಿದೆ.

ರಾಜ್ಯದಲ್ಲಿ ಮತ್ತೆ ವಿದ್ಯುತ್​ ದರ ಏರಿಕೆಗೆ ಸರ್ಕಾರ ನಿರ್ಧಾರ: ಬೆಂಗಳೂರು ಹೋಟೆಲ್ ಮಾಲೀಕರ ಸಂಘದಿಂದ ವಿರೋಧ
ವಿದ್ಯುತ್ ದರ ಏರಿಕೆ (ಸಂಗ್ರಹ ಚಿತ್ರ)
TV9 Web
| Edited By: |

Updated on: Sep 25, 2022 | 3:14 PM

Share

ಬೆಂಗಳೂರು: ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ (electricity rates) ಏರಿಕೆಗೆ ಸರ್ಕಾರ ನಿರ್ಧಾರ ಮಾಡಿದ್ದು, ಈ ನಿರ್ಧಾರಕ್ಕೆ ಹೋಟೆಲ್ ಮಾಲೀಕರ ಸಂಘ ವಿರೋಧ ವ್ಯಕ್ತಪಡಿಸಿದೆ. ಪ್ರತಿ ಯೂನಿಟ್​ಗೆ 43 ಪೈಸೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಅ.1ರಿಂದ ಪರಿಷ್ಕೃತ ವಿದ್ಯುತ್ ದರ ಜಾರಿಗೆ ಬರುತ್ತಿದೆ. ದರ ಏರಿಕೆ ನಿರ್ಧಾರ ಮುಂದಿನ ವರ್ಷ ಏಪ್ರಿಲ್​ವರೆಗೆ ಮುಂದೂಡುವಂತೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘದಿಂದ ಆಗ್ರಹಿಸಿದೆ. ಈಗಾಗಲೇ ವಿದ್ಯುತ್ ಮೇಲಿನ ತೆರಿಗೆ ಶೇ‌ಕಡಾ 9ರಷ್ಟು ಇದೆ. ಇದನ್ನು ಶೇಕಡಾ 4ಕ್ಕೆ ಇಳಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುತ್ತಿದೆ. ಈ ಸಂಬಂಧ ಮುಂದಿನ ವಾರ ಇಂಧನ ಸಚಿವರನ್ನು ಭೇಟಿಯಾಗಿ ಮನವಿ ಸಲಿಸುವುದಾಗಿ ಬೆಂಗಳೂರು ಹೋಟೆಲ್ ಮಾಲೀಕರ ಸಂಘದಿಂದ ಮಾಹಿತಿ ನೀಡಲಾಗಿದೆ. ಈ ವರ್ಷ ಏಪ್ರಿಲ್​ನಲ್ಲಿ ಬೆಸ್ಕಾಂ ವಿದ್ಯುತ್ ದರ ಹೆಚ್ಚಿಸಿತ್ತು.

ಪ್ರತಿ ಯೂನಿಟ್​ಗೆ 35 ಪೈಸೆ ಏರಿಕೆ ಮಾಡಿದ್ದ ಬೆಸ್ಕಾಂ, ಕೊರೊನಾ ಬಳಿಕ ಈಗಷ್ಟೇ ಹೋಟೆಲ್​​ ಉದ್ಯಮದಲ್ಲಿ ಚೇತರಿಕೆ ಕಾಣುತ್ತಿದೆ. ವಿದ್ಯುತ್​ ದರ ಮತ್ತೆ ಏರಿಸಿದರೆ ಉದ್ಯಮಕ್ಕೆ ಸಮಸ್ಯೆ ಆಗಲಿದೆ ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿಸಿ ರಾವ್ ತಿಳಿಸಿದರು.

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ಮುಂದಿನ ಆರು ತಿಂಗಳ ಅವಧಿಯಲ್ಲಿ ಬೆಸ್ಕಾಂಗೆ ಪ್ರತಿ ತಿಂಗಳು ಪ್ರತಿ ಯೂನಿಟ್​ಗೆ 43 ಪೈಸೆ, ಮೆಸ್ಕಾಂಗೆ 24 ಪೈಸೆ, ಚಸ್ಕಾಂಗೆ 34 ಪೈಸೆ, ಹೆಸ್ಕಾಂಗೆ 35 ಪೈಸೆಯಂತೆ ಗ್ರಾಹಕರಿಂದ ವಸೂಲಿ ಮಾಡಲು ಅವಕಾಶ ನೀಡಿದೆ. ಅದರಂತೆ ಪ್ರತಿ ನೂರು ಯುನಿಟ್ ವಿದ್ಯುತ್ ಬಳಸುವ ಗ್ರಾಹಕರು ತಮ್ಮ ತಿಂಗಳ ವಿದ್ಯುತ್ ಬಿಲ್​ನಲ್ಲಿ ಹೆಚ್ಚುವರಿಯಾಗಿ 43 ರೂ. ನಿಂದ 24 ರೂ. ವರೆಗೆ ಪಾವತಿಸಬೇಕಾಗಿದೆ. ಈ ಮುಂಚೆ ಜುಲೈ 1, 2022ರಿಂದ ಡಿಸೆಂಬರ್ 31, 2022ರ ವರೆಗೆ ಇಂಧನ ವೆಚ್ಚ ಹೊಂದಾಣಿಕೆ (FAC) ವಸೂಲಿ ಮಾಡಲು ಅವಕಾಶ ನೀಡಲಾಗಿತ್ತು. ಆಗ ಪ್ರತಿ ನೂರು ಯುನಿಟ್ ವಿದ್ಯುತ್ ಬಳಸುವ ಗ್ರಾಹಕರು ತಮ್ಮ ತಿಂಗಳ ವಿದ್ಯುತ್ ಬಿಲ್​ನಲ್ಲಿ ಹೆಚ್ಚುವರಿಯಾಗಿ 19 ರೂ. ನಿಂದ 31 ರೂ. ಏರಿಕೆಯಾಗಿತ್ತು.‌ ಇದೀಗ ಮತ್ತೆ ಬೆಲೆ ಏರಿಕೆ ಬರೆ ಬಿದ್ದಿದೆ.

ವಿದ್ಯುತ್ ದರ ಹೆಚ್ಚಳ ಏಕೆ?

ಕಲ್ಲಿದ್ದಲು ದರ ಗಣನೀಯ ಹೆಚ್ಚಳವಾಗಿದ್ದು, ವಿದ್ಯುತ್ ಖರೀದಿ ವೆಚ್ಚದಲ್ಲಿ ಏರಿಕೆಯಾಗಿದೆ. ಹೀಗಾಗಿ, ಈ ವೆಚ್ಚ ಹೆಚ್ಚಳವನ್ನು ಗ್ರಾಹಕರಿಂದ ಪಡೆಯಲು ಅವಕಾಶ ಕಲ್ಪಿಸುವಂತೆ ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ) ಎಸ್ಕಾಂಗಳು ಪ್ರಸ್ತಾವ ಸಲ್ಲಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ