AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಘಾಟನೆ ಕಾಣದ ಮಲ್ಟಿ ಲೆವೆಲ್ ಪಾರ್ಕಿಂಗ್ ಕಾಂಪ್ಲೆಕ್ಸ್​ಗಳು; ಬೆಂಗಳೂರಿನ ವಾಹನ ಸವಾರರ ಪಾರ್ಕಿಂಗ್ ಸಮಸ್ಯೆಗೆ ಸಿಕ್ಕಿಲ್ಲ ಮುಕ್ತಿ

ಬೆಂಗಳೂರಿನ ಫ್ರೀಡಂ ಪಾರ್ಕ್, ಯಶವಂತಪುರದ ಎಪಿಎಂಸಿ ಯಾರ್ಡ್ ಆವರಣದಲ್ಲಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಪಾರ್ಕಿಂಗ್ ಕಾಂಪ್ಲೆಕ್ಸ್​ಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ ಇವುಗಳನ್ನು ಉದ್ಘಾಟನೆ ಮಾಡದೆ ಇರುವುದರಿಂದ ಸವಾರರು ಆಕ್ರೋಶ ಹೊರ ಹಾಕಿದ್ದಾರೆ.

ಉದ್ಘಾಟನೆ ಕಾಣದ ಮಲ್ಟಿ ಲೆವೆಲ್ ಪಾರ್ಕಿಂಗ್ ಕಾಂಪ್ಲೆಕ್ಸ್​ಗಳು; ಬೆಂಗಳೂರಿನ ವಾಹನ ಸವಾರರ ಪಾರ್ಕಿಂಗ್ ಸಮಸ್ಯೆಗೆ ಸಿಕ್ಕಿಲ್ಲ ಮುಕ್ತಿ
ಪಾರ್ಕಿಂಗ್ ಕಾಂಪ್ಲೆಕ್ಸ್
Kiran Surya
| Updated By: ಆಯೇಷಾ ಬಾನು|

Updated on: May 09, 2024 | 9:17 AM

Share

ಬೆಂಗಳೂರು, ಮೇ.09: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಾಹನ ಸವಾರರ ಗೋಳು ಕೇಳುವವರೇ ಇಲ್ಲ. ಒಂದ್ಕಡೆ ಟ್ರಾಫಿಕ್ ಕಿರಿಕಿರಿ, ಮತ್ತೊಂದ್ಕಡೆ ಪಾರ್ಕಿಂಗ್ ಪ್ಲಾಬಂ (Parking Problem). ಸವಾರರನ್ನು ಒದ್ದಾಡುವಂತೆ ಮಾಡಿದೆ. ಇತ್ತ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ನಿರ್ಮಾಣ ಮಾಡಿದ ಪಾರ್ಕಿಂಗ್ ಕಾಂಪ್ಲೆಕ್ಸ್​ಗಳು (Parking Complex) ಇದ್ದರೂ ಇಲ್ಲದಂತಾಗಿವೆ.

ಫ್ರೀಡಂ ಪಾರ್ಕ್ ಬಳಿ ವಿಶಾಲವಾದ ಹೈ-ಟೆಕ್ ಸೌಲಭ್ಯಗಳಿರುವ ಕಟ್ಟಡವನ್ನು ಪಕ್ಕಾ ಪ್ಲಾನ್ ಮಾಡಿ ಕಾರು, ಬೈಕ್ ಪಾರ್ಕಿಂಗ್ ಮಾಡಲು ಬಿಬಿಎಂಪಿ ನಿರ್ಮಿಸಿದೆ. ಆದರೆ ಕಾಮಗಾರಿ ಮುಗಿದು ಒಂದೂವರೆ ವರ್ಷವಾದ್ರೂ ಈ ಪಾರ್ಕಿಂಗ್ ಕಾಂಪ್ಲೆಕ್ಸ್ ಉದ್ಘಾಟನೆಗೆ ಮುಹೂರ್ತವೇ ಕೂಡಿ ಬಂದಿಲ್ಲ. ಹೀಗಾಗಿ ಜನ ಎಲ್ಲಂದರಲ್ಲಿ ಗಾಡಿ ನಿಲ್ಲಿಸುವ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸಾಮಾಜಿಕ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಮ್ಮ ತೆರಿಗೆ ಹಣದಲ್ಲಿ ಇಷ್ಟು ದೊಡ್ಡ ಕಟ್ಟಡವನ್ನು ನಿರ್ಮಾಣ ಮಾಡಿ ಸುಮ್ಮನೆ ಬಿಟ್ಟಿದ್ದಾರೆ. ಇದು ಪಾಳುಬಿದ್ದ ಕಟ್ಟಡವಾಗ್ತಿದೆ ಕೂಡಲೇ ಇಲ್ಲಿ ವಾಹನಗಳನ್ನು ನಿಲ್ಲಿಸಲು ಅವಕಾಶ ಮಾಡಿಕೊಡಬೇಕು ಎಂದು ಸಾಮಾಜಿಕ ಹೋರಾಟಗಾರ ರವಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ನಾಲ್ಕು ವರ್ಷಗಳ ಪದವಿ ಆದೇಶ ಹಿಂಪಡೆದ ಕರ್ನಾಟಕ ಸರ್ಕಾರ: ಕಾರಣವೇನು?

ಇನ್ನೂ ಯಶವಂತಪುರದ ಎಪಿಎಂಸಿ ಯಾರ್ಡ್ ಆವರಣದಲ್ಲಿರುವ 80 ಕೋಟಿ ಮೌಲ್ಯದ 7 ಅಂತಸ್ತಿನ ಪಾರ್ಕಿಂಗ್ ಕಾಂಪ್ಲೆಕ್ಸ್ ಇದ್ದು ಇಲ್ಲಂದಾಗಿದೆ‌. ಈ ಪಾರ್ಕಿಂಗ್ ಕಾಂಪ್ಲೆಕ್ಸ್​ಗಳ ಸುತ್ತಮುತ್ತ ಪೊಲೀಸರಿಗೆ ಬೆಳಿಗ್ಗೆ ಮತ್ತು ಸಂಜೆ ವಾಹನ ನಿಯಂತ್ರಿಸುವುದೇ ಸವಾಲಿನ ಕೆಲಸವಾಗಿದೆ. ಅಲ್ಲದೆ ಪಾರ್ಕಿಂಗ್​ಗೆ ಸರಿಯಾದ ಜಾಗ ಸಿಗದೆ ಜನರು ರಸ್ತೆ ಬದಿಯಲ್ಲೇ ವಾಹನ ನಿಲ್ಲಿಸುತ್ತಿದ್ದಾರೆ. ವಾಹನ ಸವಾರರು ಇದು ಯಾವಾಗ ಓಪನ್ ಆಗುತ್ತೋ ಗೊತ್ತಿಲ್ಲ ತುಂಬಾ ವರ್ಷಗಳಿಂದ ಇದು ಕ್ಲೋಸ್ ಆಗಿಯೇ ಇದೆ. ಇದರ ಅವಶ್ಯಕತೆ ಇರಲಿಲ್ಲ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಸುಮ್ಮನೆ ಬಿಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಟ್ನಲ್ಲಿ ಸರ್ಕಾರ ನೂರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಇಷ್ಟು ದೊಡ್ಡ ಕಟ್ಟಡ ನಿರ್ಮಾಣ ಮಾಡಿ ಅದನ್ನು ಹಾಗೆ ಬಿಟ್ಟರೆ ಹೇಗೆ ಹೇಳಿ. ಇನ್ನಾದ್ರೂ ಎಚ್ಚೆತ್ತು ಶೀಘ್ರದಲ್ಲಿ ಈ ಬಹು ಮಹಡಿ ಕಟ್ಟಡಗಳ ಲೋಕಾರ್ಪಣೆಗೆ ಮುಂದಾಗತ್ತಾರಾ ಎಂದು ಕಾದು ನೋಡಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್