AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನೆ ರೋಹಿಣಿ ಸಿಂಧೂರಿ, ಇಂದು ಡಿ ರೂಪಾಗೆ ಸ್ಥಳ ನಿಯೋಜನೆ: 7 ತಿಂಗಳ ಬಳಿಕ ನೇಮಕ: ಸರ್ಕಾರ ಆದೇಶ

7 ತಿಂಗಳ ಬಳಿಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಜೊತೆಗೆ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್​ಗೆ ಸರ್ಕಾರ ಹುದ್ದೆ ನಿಯೋಜನೆ ಮಾಡಲಾಗಿದೆ. ರೂಪಾ ಮೌದ್ಗಿಲ್​ರನ್ನು ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ಮತ್ತು ಕರ್ನಾಟಕ ಗೆಜೆಟಿಯರ್ ಇಲಾಖೆಯ ಮುಖ್ಯ ಸಂಪಾದಕರನ್ನಾಗಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯನ್ನು ನೇಮಕ ಮಾಡಲಾಗಿದೆ.

ನಿನ್ನೆ ರೋಹಿಣಿ ಸಿಂಧೂರಿ, ಇಂದು ಡಿ ರೂಪಾಗೆ ಸ್ಥಳ ನಿಯೋಜನೆ: 7 ತಿಂಗಳ ಬಳಿಕ ನೇಮಕ: ಸರ್ಕಾರ ಆದೇಶ
ಐಪಿಎಸ್ ಅಧಿಕಾರಿ ಡಿ.ರೂಪಾ, ಐಎಎಸ್ ರೋಹಿಣಿ ಸಿಂಧೂರಿ
ಕಿರಣ್​ ಹನಿಯಡ್ಕ
| Edited By: |

Updated on:Sep 14, 2023 | 6:46 PM

Share

ಬೆಂಗಳೂರು, ಸೆಪ್ಟೆಂಬರ್​ 13: 7 ತಿಂಗಳ ಬಳಿಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಜೊತೆಗೆ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್​ಗೆ (Roopa Divakar Moudgil) ಸರ್ಕಾರ ಹುದ್ದೆ ನಿಯೋಜನೆ ಮಾಡಲಾಗಿದೆ. ರೂಪಾ ಮೌದ್ಗಿಲ್​ರನ್ನು ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ಮತ್ತು ಕರ್ನಾಟಕ ಗೆಜೆಟಿಯರ್ ಇಲಾಖೆಯ ಮುಖ್ಯ ಸಂಪಾದಕರನ್ನಾಗಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅನ್ನು ನೇಮಕ ಮಾಡಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ರೂಪಾ ಮೌದ್ಗಿಲ್ ಮತ್ತು ರೋಹಿಣಿ ಸಿಂಧೂರಿ ನಡುವಿನ ಹಿಂದಿನ ಜಗಳದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ವರ್ಗಾವಣೆ ಪರ್ವ ಮತ್ತೆ ಶುರು ಮಾಡಿದೆ. ಇತ್ತೀಚಿನ ದಿನಗಳಲ್ಲಿ ಹಲವಾರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ರೋಹಿಣಿ ಸಿಂಧೂರಿ ಈಗ ಹೊಸ ನೇಮಕಾತಿ ಪಡೆದ ಅಧಿಕಾರಿಗಳಲ್ಲಿ ಒಬ್ಬರಾಗಿದ್ದಾರೆ.

ಇದನ್ನೂ ಓದಿ: 99 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ: ಗ್ರಾಮೀಣಾಭಿವೃದ್ಧಿ ಇಲಾಖೆ ಆದೇಶ

ಏಳು ತಿಂಗಳ ನಂತರ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಅವರಿಗೆ ಸರ್ಕಾರಿ ಜವಾಬ್ದಾರಿಗಳನ್ನು ನೀಡಲಾಗಿದೆ. ಡಿ.ರೂಪಾ ಅವರನ್ನು ಆಂತರಿಕ ಭದ್ರತಾ ವಿಭಾಗದ ಇನ್ಸ್ಪೆಕ್ಟರ್ ಜನರಲ್ ಆಗಿ ನೇಮಿಸಲಾಗಿದೆ.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ನಡುವೆ ಈ ಹಿಂದೆ ಜಗಳ ನಡೆದಿತ್ತು. ಐಎಎಸ್ ಅಧಿಕಾರಿ ಮಣಿವಣ್ಣನ್ ಮತ್ತು ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಅವರೊಂದಿಗೆ ಸಿಂಧೂರಿ ಇರುವ ಚಿತ್ರಗಳನ್ನು ರೂಪಾ ಹಂಚಿಕೊಂಡಿದ್ದರು.

ಇಬ್ಬರು ಐಎಎಸ್‌ ಅಧಿಕಾರಿಗಳ ವರ್ಗಾವಣೆ

  • ಸುರಾಲ್ಕರ್ ವಿಕಾಸ್ ಕಿಶೋರ್-ಬಿಬಿಎಂಪಿ ರಾಜರಾಜೇಶ್ವರಿ ನಗರ ವಲಯ ಆಯುಕ್ತ
  • ಶ್ರೀರೂಪಾ-ಇಡಿ, ಕೆಎಸ್‌ಎಂಸಿ
  • ​ಪ್ರದೀಪ್.ಪಿ-ನಿರ್ದೇಶಕ, ಆರ್‌ಡಿಪಿಆರ್ (ಸೋಷಿಯಲ್ ಆಡಿಟ್)
  • ಲತಾಕುಮಾರಿ.ಕೆ.ಎಸ್-ಕೆಪಿಎಸ್‌ಸಿ ಕಾರ್ಯದರ್ಶಿ
  • ಸಿ.ಎನ್.ಶ್ರೀಧರ-ಜವಳಿ ಇಲಾಖೆ ಆಯುಕ್ತ
  • ಸಂಗಪ್ಪ-ಕಿಯೋನಿಕ್ಸ್ ಎಂಡಿ

ಐಪಿಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜನೆ

  • ಕುಲದೀಪ್ ಕುಮಾರ್ ಜೈನ್-ಡಿಸಿಪಿ, ಬೆಂಗಳೂರು ಪೂರ್ವ ಸಂಚಾರ ವಿಭಾಗ
  • ಎಸ್.ಪಿ.ದೇವರಾಜು-ಡಿಸಿಪಿ, ಬೆಂಗಳೂರು ದಕ್ಷಿಣ ಸಂಚಾರ ವಿಭಾಗ

ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ವರ್ಗಾವಣೆ ಪರ್ವ ನಡೆಯುತ್ತಿದ್ದು, ಕಳೆದ ಜೂನ್​ನಲ್ಲಿ 11 ಐಎಎಸ್​ ಅಧಿಕಾರಿಗಳನ್ನು ಹಾಗೂ ಜುಲೈ 1 ರಂದು 14 ಐಎಫ್​ಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಅದೇ ರೀತಿಯಾಗಿ ಇತ್ತೀಚೆಗೆ ಬರೊಬ್ಬರಿ 10 ಜನ ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:51 pm, Wed, 13 September 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?