AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಮಕ್ಕಳಿಗಿನ್ನು ಚಪ್ಪಲಿ ಭಾಗ್ಯ!: ಮಕ್ಕಳ ಆರೋಗ್ಯ ಗಮನದಲ್ಲಿರಿಸಿ ಶಿಕ್ಷಣ ಇಲಾಖೆಯಿಂದ ಹೊಸ ಚಿಂತನೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ ಅಥವಾ ಚಪ್ಪಲಿ ವಿತರಿಸಲು ಶಿಕ್ಷಣ ಇಲಾಖೆ ಹೊಸ ಚಿಂತನೆ ನಡೆಸಿದ್ದು, ಈ ಬಗ್ಗೆ ಜಿಲ್ಲಾ ಉಪನಿರ್ದೇಶಕರಿಂದ ಮಾಹಿತಿ ಕೋರಿದೆ. ಮಕ್ಕಳ ಆರೋಗ್ಯ ಸೇರಿ ಕೆಲ ಅಂಶಗಳನ್ನು ಪರಿಗಣಿಸಿ ಇಲಾಖೆ ಈ ಬಗ್ಗೆ ಯೋಚನೆ ರೂಪಿಸಿದ್ದು, ಮಳೆ ಮತ್ತು ಬೇಸಿಗೆ ಕಾಲಗಳೆರಡರಲ್ಲೂ ಚಪ್ಪಲಿಯನ್ನು ಧರಿಸೋದು ವಿದ್ಯಾರ್ಥಿಗಳಿಗೆ ಸುಲಭವಾಗಲಿದೆ ಎಂಬ ಲೆಕ್ಕಾಚಾರವೂ ಇದೆ ಎನ್ನಲಾಗಿದೆ.

ಶಾಲಾ ಮಕ್ಕಳಿಗಿನ್ನು ಚಪ್ಪಲಿ ಭಾಗ್ಯ!: ಮಕ್ಕಳ ಆರೋಗ್ಯ ಗಮನದಲ್ಲಿರಿಸಿ ಶಿಕ್ಷಣ ಇಲಾಖೆಯಿಂದ ಹೊಸ ಚಿಂತನೆ
ಸಾಂದರ್ಭಿಕ ಚಿತ್ರImage Credit source: newindianexpress.com
ವಿನಯ್​ ಕಾಶಪ್ಪನವರ್​
| Edited By: |

Updated on:Jun 14, 2026 | 8:13 AM

Share

ಬೆಂಗಳೂರು, ಜೂನ್​​ 14: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಶೂ-ಸಾಕ್ಸ್ ಯೋಜನೆಯಲ್ಲಿ ಕೊಂಚ ಬದಲಾವಣೆ ತರಲು ಶಿಕ್ಷಣ ಇಲಾಖೆ ಮುಂದಾದಗಿದ್ದು, ವಾತಾವರಣಕ್ಕೆ ತಕ್ಕಂತೆ ಮಕ್ಕಳಿಗೆ ಶೂ ಅಥವಾ ಚಪ್ಪಲಿ ನೀಡಲು ಚಿಂತನೆ ನಡೆಸಿದೆ. ದೀರ್ಘ ಕಾಲ ಶೂ ಧರಿಸುವುದರಿಂದ ಕೆಲ ವಿದ್ಯಾರ್ಥಿಗಳಲ್ಲಿ ಕಾಲಿನಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವ ಪ್ರಕರಗಳು ವರದಿಯಾದ ಬೆನ್ನಲ್ಲೇ ಮಹತ್ವದ ನಿರ್ಧಾರಕ್ಕೆ ಇಲಾಖೆ ಮುಂದಾಗಿದೆ. ಯಾವೆಲ್ಲ ಪ್ರದೇಶಗಳಲ್ಲಿ ಮಕ್ಕಳಿಗೆ ಶೂ ಅಥವಾ ಚಪ್ಪಲಿ ಸೂಕ್ತ ಎಂಬ ಬಗ್ಗೆ ಜಿಲ್ಲಾ ಉಪನಿರ್ದೇಶಕರಿಂದ ಮಾಹಿತಿಯನ್ನೂ ಕೇಳಲಾಗಿದೆ.

ಮುಖ್ಯಾಂಶಗಳು

  • ವಿದ್ಯಾರ್ಥಿಗಳಿಗೆ ಶೂ-ಸಾಕ್ಸ್; ಯೋಜನೆಯಲ್ಲಿ ಕೊಂಚ ಬದಲಾವಣೆ
  • ವಾತಾವರಣಕ್ಕೆ ತಕ್ಕಂತೆ ಶೂ ಅಥವಾ ಚಪ್ಪಲಿ ನೀಡಲು ಚಿಂತನೆ
  • ಮಕ್ಕಳ ಆರೋಗ್ಯ ಸೇರಿ ಹಲವು ಅಂಶ ಪರಿಗಣಿಸಿರುವ ಶಿಕ್ಷಣ ಇಲಾಖೆ

ಚಪ್ಪಲಿ ವಿತರಣೆಗೆ ಹೆಚ್ಚಿನ ಒಲವು ಯಾಕೆ?

ಮಳೆ ಮತ್ತು ಬೇಸಿಗೆ ಕಾಲಗಳೆರಡರಲ್ಲೂ ಚಪ್ಪಲಿಯನ್ನು ಧರಿಸೋದು ವಿದ್ಯಾರ್ಥಿಗಳಿಗೆ ಸುಲಭವಾಗಲಿದೆ. ಅಲ್ಲದೆ ದೀರ್ಘ ಕಾಲ ಶೂ ಧರಿಸೋದು ವಿವಿಧ ಸೋಂಕುಗಳಿಗೂ ಕಾರಣವಾಗಬಹುದು. ಜೊತೆಗೆ ಮಳೆಗಾಲದಲ್ಲಿ ಸಾಕ್ಸ್ ಒದ್ದೆಯಾಗಿ ವಾಸನೆ ಬರುವ ಸಾಧ್ಯತೆಯೂ ಹೆಚ್ಚಿರಲಿದೆ. ಈ ಎಲ್ಲ ಕಾರಣಗಳನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಚಪ್ಪಲಿ ವಿತರಿಸುವ ಬಗ್ಗೆ ಇಲಾಖೆ ಚಿಂತನೆ ನಡೆಸಿದೆ ಎನ್ನಲಾಗಿದೆ.

ಇದನ್ನೂ ಓದಿ: ಬಿಇ, ಬಿಟೆಕ್, ಎಂಟೆಕ್ ವಿದ್ಯಾರ್ಥಿಗಳಿಗೆ ಡಿಆರ್‌ಡಿಒದಲ್ಲಿ ಇಂಟರ್ನ್‌ಶಿಪ್ ಅವಕಾಶ; ಸ್ಟೈಫಂಡ್ ಕೂಡ ಲಭ್ಯ!

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಪ್ರತಿ ವರ್ಷ ಶಿಕ್ಷಣ ಇಲಾಖೆಯಿಂದ ಒಂದು ಜೊತೆ ಶೂ ಮತ್ತು ಎರಡು ಜತೆ ಸಾಕ್ಸ್ ವಿತರಣೆ ಮಾಡಲಾಗುತ್ತಿದೆ. ಇದಕ್ಕಾಗಿ ಕಳೆದ ವರ್ಷ ಒಂದರಿಂದ 5 ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ 265 ರೂ., 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ 295 ರೂ., 9ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ 325 ರೂ.ಗಳನ್ನು ಸರ್ಕಾರ ನಿಗದಿ ಮಾಡಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 8:11 am, Sun, 14 June 26

Follow Us
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ