AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಟ್ರಾಫಿಕ್ ತಲೆಬಿಸಿ ಕಡಿಮೆ ಮಾಡಲು ಸೃಷ್ಟಿಸಿರುವ ವಿಶೇಷ ಕಮಿಷನರ್ ಹುದ್ದೆಗೆ ಎಂಎ ಸಲೀಂ ನೇಮಕ: 11 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ಟ್ರಾಫಿಕ್ ನಿರ್ವಹಣೆಗಾಗಿ ನಗರ ಪೊಲೀಸ್ ವಿಭಾಗದಲ್ಲಿ ‘ವಿಶೇಷ ಕಮಿಷನರ್’ ಹುದ್ದೆ ಸೃಷ್ಟಿಸಿ ವಾಹನಗಳ ಸುಗಮ ಸಂಚಾರ ಹಾಗೂ ಸಂಚಾರ ನಿಯಮಗಳ ಜಾರಿ ಹೊಣೆ ಹೊರಿಸಲು ನಿರ್ಧರಿಸಿತ್ತು

ಬೆಂಗಳೂರು ಟ್ರಾಫಿಕ್ ತಲೆಬಿಸಿ ಕಡಿಮೆ ಮಾಡಲು ಸೃಷ್ಟಿಸಿರುವ ವಿಶೇಷ ಕಮಿಷನರ್ ಹುದ್ದೆಗೆ ಎಂಎ ಸಲೀಂ ನೇಮಕ: 11 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಟ್ರಾಫಿಕ್ ವಿಭಾಗದ ವಿಶೇಷ ಕಮಿಷನರ್ ಎಂ.ಎ.ಸಲೀಂ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Nov 15, 2022 | 7:48 AM

ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ಟ್ರಾಫಿಕ್ ಸಮಸ್ಯೆ ಮೇರೆಮೀರುತ್ತಿದೆ. ಬೆಂಗಳೂರಿನಲ್ಲಿ ವಾಸಿಸುತ್ತಿರುವ ಜನಸಂಖ್ಯೆಗಿಂತಲೂ ವಾಹನಗಳ ಸಂಖ್ಯೆ ಹೆಚ್ಚಾಗಿರುವ ಬಗ್ಗೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಲವು ಬಾರಿ ಆತಂಕ ವ್ಯಕ್ತಪಡಿಸಿದ್ದರು. ನಗರದ ಹಲವೆಡೆ ಮೆಟ್ರೋ ಕಾಮಗಾರಿಯೂ ನಡೆಯುತ್ತಿರುವುದರಿಂದ ಟ್ರಾಫಿಕ್ ಕುಂಟುತ್ತಿದೆ. ಜಾಗತಿಕ ಮಟ್ಟದಲ್ಲಿ ಬೆಂಗಳೂರು ಟ್ರಾಫಿಕ್ ಹಾಸ್ಯದ ವಸ್ತುವಾದ ಹಿನ್ನೆಲೆಯಲ್ಲಿ ‘ಬ್ರ್ಯಾಂಡ್​ ಬೆಂಗಳೂರು’ ಗೌರವಕ್ಕೆ ಧಕ್ಕೆಯಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ಟ್ರಾಫಿಕ್ ನಿರ್ವಹಣೆಗಾಗಿ ನಗರ ಪೊಲೀಸ್ ವಿಭಾಗದಲ್ಲಿ ‘ವಿಶೇಷ ಕಮಿಷನರ್’ ಹುದ್ದೆ ಸೃಷ್ಟಿಸಿ ವಾಹನಗಳ ಸುಗಮ ಸಂಚಾರ ಹಾಗೂ ಸಂಚಾರ ನಿಯಮಗಳ ಜಾರಿ ಹೊಣೆ ಹೊರಿಸಲು ನಿರ್ಧರಿಸಿತ್ತು. ಈ ಹುದ್ದೆಗೆ ಮೊದಲ ಅಧಿಕಾರಿಯಾಗಿ ಎಡಿಜಿಪಿ ಎಂ.ಎ.ಸಲೀಂ ಅವರನ್ನು ನೇಮಿಸಲಾಗಿದೆ. ಈ ಆದೇಶವು ಸೋಮವಾರ (ನ 14) ಹೊರಬಿದ್ದಿದೆ.

ಇಷ್ಟು ದಿನ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅಧೀನದಲ್ಲಿ ಡಿಐಜಿ ದರ್ಜೆಯ ಐಪಿಎಸ್ ಅಧಿಕಾರಿ ಟ್ರಾಫಿಕ್​ ವಿಭಾಗದ ಹೊಣೆ ಹೊತ್ತುಕೊಂಡಿದ್ದರು. ಈವರೆಗೆ ಈ ಹುದ್ದೆ ನಿರ್ವಹಿಸುತ್ತಿದ್ದ ಜಂಟಿ ಪೊಲೀಸ್ ಕಮಿಷನರ್ ಬಿ.ಆರ್.ರವಿಕಾಂತೇಗೌಡ ಅವರನ್ನು ಇದೀಗ ಸಿಐಡಿಯ ಡಿಐಜಿ ಆಗಿ ವರ್ಗಾಯಿಸಲಾಗಿದೆ.

ಟ್ರಾಫಿಕ್ ವಿಭಾಗದ ವಿಶೇಷ ಕಮಿಷನರ್ ಆಗಿರುವ ಎಂ.ಎ.ಸಲೀಂ ಅವರು ಈ ಹಿಂದೆ ಸಂಚಾರ ವಿಭಾಗದ ಜಂಟಿ ಕಮಿಷನರ್ ಆಗಿ ಕೆಲಸ ಮಾಡಿದ್ದ ಸಂದರ್ಭದಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಿದ್ದರು. ಅವರ ಸಾಧನೆ ಮತ್ತು ಪರಿಣಾಮಕಾರಿ ಕಾರ್ಯವೈಖರಿಯನ್ನು ಗಮನಿಸಿರುವ ರಾಜ್ಯ ಸರ್ಕಾರವು ನಗರದ ಟ್ರಾಫಿಕ್ ಸವಾಲು ನಿರ್ವಹಣೆಗೆ ಅವರೇ ಸೂಕ್ತ ವ್ಯಕ್ತಿ ಎಂದು ಮನಗಂಡು, ವಿಶೇಷ ಕಮಿಷನರ್ ಆಗಿ ವರ್ಗಾವಣೆ ಮಾಡಿದೆ ಎಂದು ಪೊಲೀಸ್ ಇಲಾಖೆಯ ಉನ್ನತ ಮೂಲಗಳು ಹೇಳಿವೆ.

ಈವರೆಗೆ ಸಂಚಾರ ವಿಭಾಗದ ಜಂಟಿ ಕಮಿನಷರ್ ಆಗಿ ಕಾರ್ಯನಿರ್ವಹಿಸಿದ್ದ ಡಾ ವಿ.ಆರ್.ರವಿಕಾಂತೇಗೌಡ ಅವರು ಸಹ ಹಲವು ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಿದ್ದರು. ಪೊಲೀಸರು ರಸ್ತೆಗಳಲ್ಲಿ ವಾಹನ ಅಡ್ಡಕಟ್ಟಿ ದಾಖಲೆ ತಪಾಸಣೆಗೆ ಮುಂದಾಗುವುದು ಸಹ ಟ್ರಾಫಿಕ್ ಜಾಮ್​ಗೆ ಕಾರಣ ಎಂಬುದನ್ನು ಅರಿತು, ರಸ್ತೆಗಳಲ್ಲಿ ಅನಗತ್ಯವಾಗಿ ವಾಹನಗಳನ್ನು ಅಡ್ಡಗಟ್ಟಬಾರದು ಎಂದು ಸೂಚನೆ ನೀಡಿದ್ದರು.

11 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಕರ್ನಾಟಕ ಪೊಲೀಸ್​ ಇಲಾಖೆಯ 11 ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರವು ಸೋಮವಾರ ಆದೇಶ ಹೊರಡಿಸಿದೆ. ಎಂ.ಅಬ್ದುಲ್‌ ಸಲೀಂ (ವಿಶೇಷ ಕಮಿಷನರ್‌, ಸಂಚಾರ ವಿಭಾಗ, ಬೆಂಗಳೂರು ನಗರ), ಉಮೇಶ್‌ ಕುಮಾರ್‌ (ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಆಡಳಿತ ವಿಭಾಗ), ದೇವಜ್ಯೋತಿ ರೇ (ಐಜಿಪಿ, ಕುಂದುಕೊರತೆ ಮತ್ತು ಮಾನವ ಹಕ್ಕುಗಳ ವಿಭಾಗ), ರಮಣ ಗುಪ್ತ (ಜಂಟಿ ಪೊಲೀಸ್‌ ಕಮಿಷನರ್‌, ಗುಪ್ತಚರ ವಿಭಾಗ, ಬೆಂಗಳೂರು ನಗರ), ಬಿ.ಆರ್‌. ರವಿಕಾಂತೇಗೌಡ (ಡಿಐಜಿ, ಸಿಐಡಿ).

ಬಿ.ಎಸ್‌. ಲೋಕೇಶ್‌ ಕುಮಾರ್‌ (ಡಿಐಜಿ, ಬಳ್ಳಾರಿ ವಲಯ), ಚಂದ್ರಗುಪ್ತ– ಡಿಐಜಿ (ಪಶ್ಚಿಮ ವಲಯ, ಮಂಗಳೂರು), ಶರಣಪ್ಪ ಎಸ್‌.ಡಿ. (ಜಂಟಿ ಕಮಿಷನರ್‌, ಅಪರಾಧ ವಿಭಾಗ, ಬೆಂಗಳೂರು ನಗರ), ಎಂ.ಎನ್‌. ಅನುಚೇತ್‌ (ಜಂಟಿ ಕಮಿಷನರ್‌, ಸಂಚಾರ ವಿಭಾಗ, ಬೆಂಗಳೂರು ನಗರ), ರವಿ ಡಿ. ಚನ್ನಣ್ಣನವರ್‌ (ವ್ಯವಸ್ಥಾಪಕ ನಿರ್ದೇಶಕ, ಕಿಯೋನಿಕ್ಸ್‌), ಬಿ.ರಮೇಶ್‌ (ಪೊಲೀಸ್‌ ಕಮಿಷನರ್‌, ಮೈಸೂರು ನಗರ).

Published On - 7:48 am, Tue, 15 November 22

ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ