AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 26ರಿಂದ ರಾಜ್ಯಾದ್ಯಂತ ಪದವಿ ಕಾಲೇಜುಗಳು ಪುನರಾರಂಭ; ಮಾರ್ಗಸೂಚಿಗಳು ಹೀಗಿವೆ

ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಆರ್ಟಿಪಿಸಿಆರ್ (RTPCR) ಟೆಸ್ಟ್ ಕಡ್ಡಾಯ ಮಾಡಲಾಗಿದೆ. ಯಾವುದೇ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಿಲ್ಲ.

ಜುಲೈ 26ರಿಂದ ರಾಜ್ಯಾದ್ಯಂತ ಪದವಿ ಕಾಲೇಜುಗಳು ಪುನರಾರಂಭ; ಮಾರ್ಗಸೂಚಿಗಳು ಹೀಗಿವೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jul 25, 2021 | 11:53 AM

Share

ಬೆಂಗಳೂರು: ಜುಲೈ 26 ಅಂದರೆ ನಾಳೆಯಿಂದ ರಾಜ್ಯಾದ್ಯಂತ ಪದವಿ ಕಾಲೇಜುಗಳು ಆರಂಭವಾಗುತಿದ್ದು, ಲಸಿಕೆ ಪಡೆದ ವಿದ್ಯಾರ್ಥಿಗಳಷ್ಟೇ ಕಾಲೇಜಿಗೆ ಬರಲು ಅವಕಾಶವಿರುತ್ತದೆ. ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಆರ್ಟಿಪಿಸಿಆರ್ (RTPCR) ಟೆಸ್ಟ್ ಕಡ್ಡಾಯ ಮಾಡಲಾಗಿದೆ. ಯಾವುದೇ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಿಲ್ಲ. ವಿದ್ಯಾರ್ಥಿಗಳು ಕಾಲೇಜುಗಳಿಗೆ ಬರದಿದ್ದರೂ ಪ್ರಾಧ್ಯಾಪಕರು ಮಾತ್ರ ಕಡ್ಡಾಯವಾಗಿ ಹಾಜರಾಗಬೇಕು.

ಸುಮಾರು ಮೂರು ತಿಂಗಳ ಬಳಿಕ ಕಾಲೇಜುಗಳನ್ನು ತೆರೆಯಲಾಗುತ್ತಿದೆ. ಕಾಲೇಜುಗಳನ್ನ ಕಡ್ಡಾಯವಾಗಿ ತೆರೆಯಲು ವಿವಿಗಳು ಸೂಚನೆ ನೀಡಿವೆ. ಈಗಾಗಲೇ ಶೇ.75ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದ್ದು, ಶೀಘ್ರದಲ್ಲೇ ಬಾಕಿ ಉಳಿದ ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್ ನೀಡಲಾಗುತ್ತದೆ ಎಂದು ತಿಳಿದುಬಂದಿದೆ. ಕೊವಿಡ್ ಮಾರ್ಗಸೂಚಿ ಅನುಸರಿಸಿ ನಾಳೆಯಿಂದ ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್, ಡಿಪ್ಲೊಮಾ ಭೌತಿಕ ತರಗತಿ ಶುರು ಮಾಡಲಾಗುವುದು.

ಪದವಿ ಕಾಲೇಜುಗಳ ಪ್ರಾರಂಭಕ್ಕೆ ಮಾರ್ಗಸೂಚಿಗಳೇನು? * ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಒಂದು ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು. * ಲಸಿಕೆ ಪಡೆಯದ ವಿದ್ಯಾರ್ಥಿಗಳಿಗೆ ಕಾಲೇಜಿಗೆ ಪ್ರವೇಶ ಇಲ್ಲ. * ಸ್ವ ಇಚ್ಛೆಯಿಂದ ವಿದ್ಯಾರ್ಥಿಗಳು ಕಾಲೇಜಿಗೆ ಬರಬೇಕು. * ಕಾಲೇಜು ಪ್ರಾರಂಭವಾದರೂ ಆನ್​ಲೈನ್​ ತರಗತಿಗಳು ಎಂದಿನಂತೆ ನಡೆಯಲಿದೆ. * ಅಧ್ಯಾಪಕರ ವರ್ಗ ಮತ್ತು ಸಿಬ್ಬಂದಿ ವರ್ಗ ಕಡ್ಡಾಯವಾಗಿ ಒಂದು ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು. * ಪ್ರತಿ ಕಾಲೇಜಿನಲ್ಲೂ ಕಡ್ಡಾಯವಾಗಿ ಕೊರೊನಾ ಮಾರ್ಗಸೂಚಿಯನ್ನು ಪಾಲಿಸಬೇಕು. * ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ನಿತ್ಯ ಥರ್ಮಲ್ ಸ್ಕ್ಯಾನಿಂಗ್ ನಡೆಸಬೇಕು. * ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಕಾಲೇಜು, ಕ್ಯಾಂಪಸ್​ನಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. * ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಾಲೇಜು ಆಡಳಿತ ಮಂಡಳಿ ಕ್ರಮವಹಿಸಬೇಕು. * ಕಾಲೇಜು, ವಿವಿ ಆವರಣದಲ್ಲಿ ಆರೋಗ್ಯ ಸಹಾಯವಾಣಿ ಪ್ರಾರಂಭ ಮಾಡಬೇಕು. * ಕಾಲೇಜು, ವಿವಿಗಳಲ್ಲಿ ಈಜುಕೊಳಗಳ ಪ್ರಾರಂಭಕ್ಕೆ ನಿಷೇಧ. * ಗ್ರಂಥಾಲಯಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕ್ರಮವಹಿಸಬೇಕು. * ಕ್ರೀಡಾ ಚಟುವಟಿಕೆಗಳಿಗೆ ಸರ್ಕಾರ ನಿಗದಿ ಮಾಡಿರುವ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು.

ಇದನ್ನೂ ಓದಿ

ರಾಜ್ಯಾದ್ಯಂತ ನಾಳೆಯಿಂದಲೇ ಚಿತ್ರಮಂದಿರಗಳು ಓಪನ್, ಜುಲೈ 26ರಿಂದ ಪದವಿ ಕಾಲೇಜು ತೆರೆಯಲು ಅವಕಾಶ

Degree College Reopen: ಪದವಿ ಕಾಲೇಜು ಆರಂಭಕ್ಕೆ ಯುಜಿಸಿ ಮಾರ್ಗಸೂಚಿ; ಸೆಪ್ಟೆಂಬರ್ 30ರ ಒಳಗೆ ದಾಖಲಾತಿ, ಅಕ್ಟೋಬರ್ 1ರಿಂದ ತರಗತಿ

(Graduate colleges begin July 26 and Only students who are vaccinated are allowed to attend college)

Published On - 11:52 am, Sun, 25 July 21

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?