AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಗ್ರಾ.ಪಂ. ನೌಕರರ ಪ್ರತಿಭಟನೆ

ಗ್ರಾಮ ಪಂಚಾಯಿತಿ ನೌಕರರಿಗೆ 10 ರಿಂದ 15 ತಿಂಗಳುಗಳಿಂದ ಸರ್ಕಾರ ವೇತನ ನೀಡಿಲ್ಲ. 10 ರಿಂದ 15 ತಿಂಗಳುಗಳಿಂದ ವೇತನ ಇಲ್ಲದೇ ಕೆಲಸ ಮಾಡುತ್ತಿದ್ದೇವೆ. 2021 ಸೆಪ್ಟೆಂಬರ್ ತಿಂಗಳಲ್ಲಿ ಸರ್ಕಾರದ ನಿಧಿಯಿಂದ ಇಎಫ್ಎಂಎಸ್ ಮೂಲಕ ವೇತನ ನೀಡಲು ರಾಜ್ಯ ಸರ್ಕಾರ ಆದೇಶ ಮಾಡಿತ್ತು.

ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಗ್ರಾ.ಪಂ. ನೌಕರರ ಪ್ರತಿಭಟನೆ
ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಗ್ರಾ.ಪಂ. ನೌಕರರ ಪ್ರತಿಭಟನೆ
TV9 Web
| Edited By: |

Updated on:Sep 15, 2021 | 2:48 PM

Share

ಬೆಂಗಳೂರು: ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾ.ಪಂ. ನೌಕರರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಸಿದ್ಧರಾಗಿದ್ದಾರೆ. ಬೆಂಗಳೂರಿನ ಕೆಎಸ್ಆರ್ ರೈಲ್ವೆ ನಿಲ್ದಾಣದಿಂದ ಗ್ರಾಮ ಪಂಚಾಯಿತಿ ನೌಕರರ ಸಂಘ ಱಲಿ ಆರಂಭ ಮಾಡಿದ್ದು ಸಚಿವ ಈಶ್ವರಪ್ಪನ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ಸದ್ಯ ಈಗ ಫ್ರೀಡಂ ಪಾರ್ಕ್ ಪಕ್ಕದ ಕಾಳಿದಾಸ ರೋಡ್ನಲ್ಲಿ ಪ್ರತಿಭಟನಾ ಸಮಾವೇಶ ಶುರುವಾಗಿದೆ. ಸಚಿವ ಈಶ್ವರಪ್ಪ ಸ್ಥಳಕ್ಕೆ ಬರುವವರೆಗೆ ಪ್ರತಿಭಟನೆ ಕೈಬಿಡದಿರಲು ನೌಕರರು ತೀರ್ಮಾನ ಮಾಡಿದ್ದಾರೆ.

ಗ್ರಾ.ಪಂ. ನೌಕರರ ಬೇಡಿಕೆ -ಪ್ರತಿ ತಿಂಗಳು ಸರಿಯಾಗಿ‌ ವೇತನ ಬಿಡುಗಡೆ ಮಾಡಬೇಕು -ವೇತನಕ್ಕಾಗಿ 700 ಕೋಟಿ ರೂ. ಬಿಡುಗಡೆ ಮಾಡಬೇಕು -10 ವರ್ಷ ಮೇಲ್ಪಟ್ಟವರ ಬಡ್ತಿಗೆ ಅರ್ಹತಾ ಪರೀಕ್ಷೆ ರದ್ದು ಮಾಡಿ -ಪಿಂಚಣಿ ಫೈಲ್ ರೆಡಿ ಇದ್ದು ಪಿಂಚಣಿ‌ ನೀಡುವ ಆದೇಶ ಆಗಬೇಕು ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಗ್ರಾಮ ಪಂಚಾಯಿತಿ ನೌಕರರಿಗೆ 10 ರಿಂದ 15 ತಿಂಗಳುಗಳಿಂದ ಸರ್ಕಾರ ವೇತನ ನೀಡಿಲ್ಲ. 10 ರಿಂದ 15 ತಿಂಗಳುಗಳಿಂದ ವೇತನ ಇಲ್ಲದೇ ಕೆಲಸ ಮಾಡುತ್ತಿದ್ದೇವೆ. 2021 ಸೆಪ್ಟೆಂಬರ್ ತಿಂಗಳಲ್ಲಿ ಸರ್ಕಾರದ ನಿಧಿಯಿಂದ ಇಎಫ್ಎಂಎಸ್ ಮೂಲಕ ವೇತನ ನೀಡಲು ರಾಜ್ಯ ಸರ್ಕಾರ ಆದೇಶ ಮಾಡಿತ್ತು. ಆದ್ರೆ ಗ್ರಾಮಪಂಚಾಯಿತಿ ನೌಕರರಿಗೆ ಇಲ್ಲಿಯವರೆಗೆ ವೇತನ ಬಿಡುಗಡೆ ಸರಿಯಾಗಿ ಆಗುತ್ತಿಲ್ಲ ಎಂದು ನೌಕರರು ಅಸಮಾಧಾನ ಹೊರ ಹಾಕಿದ್ದಾರೆ.

ಸಂಗೊಳ್ಳಿ ರಾಯಣ್ಣ ಫ್ಲೈ ಓವರ್ ಸಂಪೂರ್ಣ ಬಂದ್ ಸಾವಿರಾರು ಸಂಖ್ಯೆಯಲ್ಲಿ ಗ್ರಾಮ ಪಂಚಾಯತಿ ನೌಕರರ ರ್ಯಾಲಿ ಮಾಡುತ್ತಿರುವ ಹಿನ್ನೆಲೆ ಸಂಗೊಳ್ಳಿ ರಾಯಣ್ಣ ಫ್ಲೈ ಓವರ್ ಸಂಪೂರ್ಣ ಬಂದ್ ಆಗಿದೆ. ಪೊಲೀಸ್ ಸರ್ಪಗಾವಲಿನಲ್ಲಿ ಪ್ರತಿಭಟನೆ ನಡೆಯುತ್ತಿದೆ. ಮೆಜೆಸ್ಟಿಕ್ ನಿಂದ ಫ್ರೀಡಂ ಪಾರ್ಕ್ ವರೆಗೆ ಮಾತ್ರ ರ್ಯಾಲಿಗೆ ಅವಕಾಶ ನೀಡಲಾಗಿದೆ. ಭದ್ರತೆಗಾಗಿ 500 ರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: ಕಾಬೂಲ್‌ನಲ್ಲಿ ಬಂದೂಕು ತೋರಿಸಿ ಭಾರತ ಮೂಲದ ವ್ಯಕ್ತಿಯ ಅಪಹರಣ

Published On - 2:41 pm, Wed, 15 September 21

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ