AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಗ್ರೀನ್ ಕಾರಿಡಾರ್ ವ್ಯವಸ್ಥೆಯಡಿ ಜೀವರಕ್ಷಕ ಅಂಬ್ಯೂಲೆನ್ಸ್ ಸಂಚಾರ; ಉಳಿದ ಅಮಾಯಕ ಜೀವಗಳು

ಬೆಂಗಳೂರು ನಗರದಲ್ಲಿರುವ ಆಸ್ಪತ್ರೆಗಳಿಗೆ ಹೊರದೇಶಗಳಿಂದ ಹಾಗೂ ಹೊರರಾಜ್ಯಗಳಿಂದ ತುರ್ತು ಚಿಕಿತ್ಸೆಯ ಸೌಲಭ್ಯವನ್ನು ಪಡೆಯುವ ಸಲುವಾಗಿ, ಅಂದರೆ ಅಂಗಾಂಗ ಕಸಿಯಂತಹ ಶಸ್ತ್ರಿ ಚಿಕಿತ್ಸೆ ಹಾಗೂ ಜೀವಂತ ಹೃದಯಗಳನ್ನು ಕೊಂಡೊಯ್ಯುವ ವಾನಗಳಿಗೆ ಗ್ರೀನ್ ಕಾರಿಡಾರ್ ವ್ಯವಸ್ಥೆ ಮಾಡಲಾಗಿದೆ. ತುರ್ತು ಚಿಕಿತ್ಸೆಗೆ ಕೊಂಡೊಯ್ಯುವ ವೇಳೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಹೆಚ್ಚುವರಿ ಸಂಚಾರಿ ಪೊಲೀಸರ ಮೂಲಕ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡಲಾಗುತ್ತಿದೆ.

ಬೆಂಗಳೂರು: ಗ್ರೀನ್ ಕಾರಿಡಾರ್ ವ್ಯವಸ್ಥೆಯಡಿ ಜೀವರಕ್ಷಕ ಅಂಬ್ಯೂಲೆನ್ಸ್ ಸಂಚಾರ; ಉಳಿದ ಅಮಾಯಕ ಜೀವಗಳು
ಬೆಂಗಳೂರಿನಲ್ಲಿ ತುರ್ತು ಚಿಕಿತ್ಸೆಗಾಗಿ ಗ್ರೀನ್ ಕಾರಿಡಾರ್ ವ್ಯವಸ್ಥೆ ಜಾರಿಯಿಂದಾಗಿ ಅನೇಕ ಜೀವಗಳು ಉಳಿದಿವೆ (ಸಾಂದರ್ಭಿಕ ಚಿತ್ರ)Image Credit source: thestatesman
Shivaprasad B
| Edited By: Rakesh Nayak Manchi|

Updated on: Jan 05, 2024 | 3:03 PM

Share

ಬೆಂಗಳೂರು, ಜ.5: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ರೋಗಿಗಳನ್ನು ಆಸ್ಪತ್ರೆಯಿಂದ ಆಸ್ಪತ್ರೆಗೆ ತುರ್ತಾಗಿ ಸ್ಥಳಾಂತರ ಮಾಡಲು ಅಥವಾ ಅಂಗಾಂಗ ಕಸಿ ಮಾಡಲು ಅಂಗಾಂಗಗಳನ್ನು ಕೊಂಡೊಯ್ಯುವ ಆ್ಯಂಬುಲೆನ್ಸ್​ಗಳಿಗೆ ಗ್ರೀನ್ ಕಾರಿಡಾರ್ (Green Corridor) ವ್ಯವಸ್ಥೆ ಮಾಡಲಾಗಿದೆ. ಟ್ರಾಫಿಕ್ ಪೊಲೀಸರ ಈ ಕಾರ್ಯದಿಂದಾಗಿ ಅನೇಕ ಜೀವಗಳು ಉಳಿದಿವೆ.

  • ಪ್ರಕರಣ 1:- ಜ.12 – ವಿಸ್ಟರ್ ಸಿಎಂ ಆಸ್ಪತ್ರೆ ಹೆಬ್ಬಾಳದಿಂದ ಮಣಿ ಪಾಲ್ ಆಸ್ಪತ್ರೆಗೆ – ಲಿವರ್ ಡ್ರಾನ್ಸಮಿಷನ್ – 11 ಕಿ.ಮೀ ದೂರವನ್ನು ಆ್ಯಂಬುಲೆನ್ಸ್ 29 ನಿಮಿಷದಲ್ಲಿ ತಲುಪಿದೆ.
  • ಪ್ರಕರಣ 2- ಜನವರಿ 19 – ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಿಂದ ಮಣಿಪಾಲ್ ಆಸ್ಪತ್ರೆಗೆ – ಹೃದಯ ಕಸಿ – 22 ಕಿ. ಮೀ ದೂರವನ್ನು ಆ್ಯಂಬುಲೆನ್ಸ್ 39 ನಿಮಿಷದಲ್ಲಿ ತಲುಪಿದೆ.
  • ಪ್ರಕರಣ 3:- ಫೆಬ್ರವರಿ 27 ಮಲ್ಲಿಗೆ ಆಸ್ಪತ್ರೆಯಿಂದ ಮಣಿಪಾಲ್ ಆಸ್ಪತ್ರೆ – ಪೆಷೆಂಟ್ ಶಿಫ್ಟ್ – 10 ಕಿಮೀ ದೂರವನ್ನು ತುರ್ತು ವಾಹನ 15 ನಿಮಷದಲ್ಲಿ ತಲುಪಿದೆ.
  • ಪ್ರಕರಣ 4:- ಮಾರ್ಚ್ 17 ಜಯದೇವ ಆಸ್ಪತ್ರೆಯಿಂದ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆ – ಪೆಷೆಂಟ್ ಶಿಫ್ಟ್ – 11 ಕಿಮೀ ದೂರವನ್ನು ತುರ್ತು ವಾಹನ 15 ನಿಮಿಷದಲ್ಲಿ ತಲುಪಿದೆ.
  • ಪ್ರಕರಣ 5 :- ಏಪ್ರಿಲ್ 30 ಕೆಂಪೇಗೌಡ ವಿಮಾನ ನಿಲ್ದಾಣದಿಂ ಮಣಿಪಾಲ್ ಆಸ್ಪತ್ರೆ – ಪೆಷೆಂಟ್ ಶಿಫ್ಟ್ – 40 ಕಿಮೀ ದೂರವನ್ನು 35 ನಿಮಿಷದಲ್ಲಿ ತಲುಪಲಾಗಿದೆ.
  • ಪ್ರಕರಣ 6 :- ಮೇ 26 ಕೆಂಪೇಗೌಡ ವಿಮಾನ ನಿಲ್ದಾಣದಿಂ ಮಣಿಪಾಲ್ ಆಸ್ಪತ್ರೆ – ಹೃದಯ ಸಂಬಂಧಿ ಖಾಯಿಲೆ – 40 ಕಿಮೀ ದೂರವನ್ನು 35 ನಿಮಿಷದಲ್ಲಿ ತಲುಪಿದೆ.
  • ಪ್ರಕರಣ 7 :- ಮೇ 30 ಚಿನ್ಮಯಿ ಆಸ್ಪತ್ರೆ ಆಶೋಕ್ ನಗರ ಪೋರ್ಟೀಸ್ ಆಸ್ಪತ್ರೆ ಬನ್ನೇರುಘಟ್ಟ – ಹೃದಯ – 40 ಕಿಮೀ ದೂರವನ್ನು 35 ನಿಮಿಷದಲ್ಲಿ ತಲುಪಲಾಗಿದೆ.

ಈ ಪ್ರಕರಣಗಳು ಸೇರಿದಂತೆ 22 ಪ್ರಕರಣಗಳಲ್ಲಿ ಸಂಚಾರಿ ಪೊಲೀಸರು ಜೀವರಕ್ಷಕ ಆಂಬ್ಯೂಲೆನ್ಸ್​​ಗಳಿಗೆ ಗ್ರೀನ್ ಕಾರಿಡಾರ್ ಮೂಲಕ ವೇಗದ ಸಂಚಾರಕ್ಕೆ ಅನುವು ಮಾಡಿಕೊಟ್ಟು ಕಾರ್ಯಕ್ಷಮತೆ ತೋರಿದ್ದಾರೆ.

ಇದನ್ನೂ ಓದಿ: Bengaluru Metro: ಏರ್​ಪೋರ್ಟ್ ಆಯ್ತು, ಬೆಂಗಳೂರು ಮೆಟ್ರೋ ಕಂಡು ಚಕಿತಗೊಂಡ ವಿಶ್ವಖ್ಯಾತ ಹೂಡಿಕೆದಾರ ಮಾರ್ಕ್ ಮೋಬಿಯಸ್

ಪ್ರತಿದಿನ 500ಕ್ಕೂ ಹೆಚ್ಚು ಅಂಬ್ಯೂಲೆನ್ಸ್​ಗಳಿಗೆ ಆದ್ಯತೆ ಮೇರೆಗೆ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಲಾಗುತ್ತಿದೆ. ಅಂಬ್ಯುಲೆನ್ಸ್ ಚಾಲಕರು ತುರ್ತು ಸಮಯದಲ್ಲಿ 112 ಕ್ಕೆ ಮಾಹಿತಿ ನೀಡಿದರೆ ಸಂಚಾರಿ ಪೊಲೀಸರು ಅಂತಹ ಆ್ಯಂಬುಲೆನ್ಸ್​​ಗಳಿಗೆ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Shivaprasad B
Shivaprasad B
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?