AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಗಾಳಿಯೂ ಸುರಕ್ಷಿತವಲ್ಲ: ನಗರದ ನೈಟ್ರೋಜನ್ ಡೈಆಕ್ಸೈಡ್ ಮಟ್ಟ ಡಬ್ಲ್ಯುಎಚ್​ಒ ಮಿತಿಗಿಂತ ದುಪ್ಪಟ್ಟು

ಬೆಂಗಳೂರಿನಲ್ಲಿ ಮಾರಾಟವಾಗುವ ತಿಂಡಿ, ತಿನಿಸುಗಳಲ್ಲಿ ಕಲಬೆರಕೆಯಾಗುತ್ತಿರುವುದರ ವಿರುದ್ಧ ಆಹಾರ ಮತ್ತು ಸುರಕ್ಷತಾ ಇಲಾಖೆ ಹೋರಾಟ ನಡೆಸುತ್ತಿದೆ. ಆದರೆ, ಇದೀಗ ನಗರದಲ್ಲಿ ಜನ ಉಸಿರಾಡುವ ಗಾಳಿಯೂ ಮಾರಕ ಎಂಬ ಆಘಾತಕಾರಿ ವರದಿ ಪ್ರಕಟವಾಗಿದೆ. ಬೆಂಗಳೂರಿನ ಗಾಳಿಯಲ್ಲಿರುವ ನೈಟ್ರೋಜನ್ ಡೈಆಕ್ಸೈಡ್ ಪ್ರಮಾಣ ವಿಶ್ವ ಆರೋಗ್ಯ ಸಂಸ್ಥೆ ನಿಗದಿಪಡಿಸಿದ ಮಾನದಂಡಗಳಿಗಿಂತ ಸುಮಾರು ಎರಡು ಪಟ್ಟು ಹೆಚ್ಚಾಗಿತ್ತು ಎಂಬುದು ಗೊತ್ತಾಗಿದೆ.

ಬೆಂಗಳೂರಿನಲ್ಲಿ ಗಾಳಿಯೂ ಸುರಕ್ಷಿತವಲ್ಲ: ನಗರದ ನೈಟ್ರೋಜನ್ ಡೈಆಕ್ಸೈಡ್ ಮಟ್ಟ ಡಬ್ಲ್ಯುಎಚ್​ಒ ಮಿತಿಗಿಂತ ದುಪ್ಪಟ್ಟು
ವಾಯು ಮಾಲಿನ್ಯ (ಸಾಂದರ್ಭಿಕ ಚಿತ್ರ)
Follow us
Ganapathi Sharma
|

Updated on: Dec 06, 2024 | 8:09 AM

ಬೆಂಗಳೂರು, ಡಿಸೆಂಬರ್ 6: ಬೆಂಗಳೂರಿನ ವಾರ್ಷಿಕ ಸರಾಸರಿ ನೈಟ್ರೋಜನ್ ಡೈಆಕ್ಸೈಡ್ (NO2) ಸಾಂದ್ರತೆಯು 2023 ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ (WHO) ನಿಗದಿಪಡಿಸಿದ ಮಾನದಂಡಗಳಿಗಿಂತ ಸುಮಾರು ಎರಡು ಪಟ್ಟು ಹೆಚ್ಚಾಗಿತ್ತು ಎಂಬುದು ವರದಿಯೊಂದರಿಂದ ತಿಳಿದುಬಂದಿದೆ. ಸಿಟಿ ರೈಲು ನಿಲ್ದಾಣ (ಮೆಜೆಸ್ಟಿಕ್) ಅತಿಹೆಚ್ಚು ಮಾಲಿನ್ಯ ಹೊಂದಿರುವ ಪ್ರದೇಶವಾಗಿ ಹೊರಹೊಮ್ಮಿತ್ತು ಎಂಬುದನ್ನು ‘ಗ್ರೀನ್‌ಪೀಸ್ ಇಂಡಿಯಾ’ದ ಹೊಸ ವರದಿ ಬಹಿರಂಗಪಡಿಸಿದೆ.

‘ಬಿಯಾಂಡ್ ನಾರ್ತ್’ ಎಂಬ ಹೆಸರಿನಲ್ಲಿ ಪ್ರಕಟವಾಗಿರುವ ವರದಿಯಲ್ಲಿ ಜೈಪುರ, ಪುಣೆ, ಮುಂಬೈ, ಕೋಲ್ಕತ್ತಾ, ಹೈದರಾಬಾದ್, ಬೆಂಗಳೂರು ಮತ್ತು ಚೆನ್ನೈ ನಗರಗಳಲ್ಲಿನ ನೈಟ್ರೋಜನ್ ಡೈಆಕ್ಸೈಡ್ ಸಾಂದ್ರತೆಯನ್ನು ಉಲ್ಲೇಖಿಸಲಾಗಿದೆ.

ನೈಟ್ರೋಜನ್ ಡೈಆಕ್ಸೈಡ್ ಉಸಿರಾಟಕ್ಕೆ ಸಂಬಂಧಿಸಿದ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ.

ದಕ್ಷಿಣ ಭಾರತದ ನಗರಗಳಲ್ಲಿ ಹೇಗಿದೆ ಗಾಳಿಯ ಗುಣಮಟ್ಟ?

ಕಂಟಿನ್ಯೂಸ್ ಆಂಬಿಯೆಂಟ್ ಏರ್ ಕ್ವಾಲಿಟಿ ಮಾನಿಟರಿಂಗ್ (CAAQM) ನೆಟ್‌ವರ್ಕ್‌ನ ಡೇಟಾವನ್ನು ಆಧರಿಸಿದ ಸಂಶೋಧನೆಗಳಿಂದ ಈ ವರದಿ ಸಿದ್ಧಪಡಿಸಲಾಗಿದೆ. ಚೆನ್ನೈನ ನೈಟ್ರೋಜನ್ ಡೈಆಕ್ಸೈಡ್ ಮಟ್ಟ 2023 ರಲ್ಲಿ 314 ದಿನಗಳವರೆಗೆ ಪ್ರತಿ ಘನ ಮೀಟರ್‌ಗೆ 10 ಮೈಕ್ರೊಗ್ರಾಂನಷ್ಟಿತ್ತು. ಇದು ವಿಶ್ವ ಆರೋಗ್ಯ ಸಂಸ್ಥೆಯ ವಾರ್ಷಿಕ ಸುರಕ್ಷಿತ ಮಿತಿಗಿಂತ ಶೇ 86ರಷ್ಟು ಹೆಚ್ಚಿತ್ತು ಎಂದು ವರದಿ ತಿಳಿಸಿದೆ. ಪುಣೆ ಮತ್ತು ಹೈದರಾಬಾದ್​ನಲ್ಲಿ ಕ್ರಮವಾಗಿ 312 ಮತ್ತು 307 ದಿನಗಳ ವರೆಗೆ ಪ್ರತಿ ಘನ ಮೀಟರ್‌ಗೆ 10 ಮೈಕ್ರೊಗ್ರಾಂನಷ್ಟು ಪತ್ತೆಯಾಗಿತ್ತು.

ಬೆಂಗಳೂರಿನಲ್ಲಿ 295 ದಿನಗಳಲ್ಲಿ ನೈಟ್ರೋಜನ್ ಡೈಆಕ್ಸೈಡ್ ಮಟ್ಟ ಮಿತಿಗಿಂತ ಹೆಚ್ಚಿತ್ತು. ಜೈಪುರ (277 ದಿನಗಳು), ಮುಂಬೈ (256 ದಿನಗಳು), ಮತ್ತು ಕೋಲ್ಕತ್ತಾ (133 ದಿನಗಳು) ನಂತರದ ಸ್ಥಾನಗಳಲ್ಲಿವೆ.

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅತಿಹೆಚ್ಚು ವಾಯುಮಾಲಿನ್ಯ

ಬೆಂಗಳೂರಿನಲ್ಲಿ, ಸಿಟಿ ರೈಲ್ವೇ ನಿಲ್ದಾಣದಲ್ಲಿ 2023 ರಲ್ಲಿ 295 ದಿನಗಳ ಕಾಲ ವಿಶ್ವ ಆರೋಗ್ಯ ಸಂಸ್ಥೆಯ ಮಾನದಂಡವನ್ನೂ ಮೀರಿದ ಪ್ರಮಾಣದಲ್ಲಿ ನೈಟ್ರೋಜನ್ ಡೈಆಕ್ಸೈಡ್ ಪತ್ತೆಯಾಗಿತ್ತು. ಹೊಂಬೇಗೌಡ ನಗರ (125 ದಿನಗಳು), ಬಾಪೂಜಿ ನಗರ (120 ದಿನಗಳು), ಮತ್ತು ಪೀಣ್ಯ (119 ದಿನಗಳು) ಇತರ ಹೆಚ್ಚು ನೈಟ್ರೋಜನ್ ಡೈಆಕ್ಸೈಡ್ ಪತ್ತೆಯಾದ ಪ್ರದೇಶಗಳಾಗಿವೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮಾರಾಟವಾಗುತ್ತಿದೆ ಕಳಪೆ ಉಪ್ಪು: ಗೋಬಿ, ಕಾಟನ್ ಕ್ಯಾಂಡಿ ಆಯ್ತು ಈಗ ಉಪ್ಪಿನ ಸರದಿ

ನಗರದಲ್ಲಿನ 13 ಮಾನಿಟರಿಂಗ್ ಸ್ಟೇಷನ್‌ಗಳ ಪೈಕಿ ಎಂಟರಲ್ಲಿ ವಾರ್ಷಿಕ ಸರಾಸರಿ ನೈಟ್ರೋಜನ್ ಡೈಆಕ್ಸೈಡ್ ಮಟ್ಟ ಪ್ರತಿ ಘನ ಮೀಟರ್‌ಗೆ 20 ಮೈಕ್ರೋಗ್ರಾಂಗಳಿಗಿಂತಲೂ ಹೆಚ್ಚು ಪತ್ತೆಯಾಗಿದೆ. ಶಿವಪುರ ನಿಲ್ದಾಣದಲ್ಲಿ ಪ್ರತಿ ಘನ ಮೀಟರ್‌ಗೆ 15 ಮೈಕ್ರೋಗ್ರಾಂಗಳಷ್ಟು ನೈಟ್ರೋಜನ್ ಡೈಆಕ್ಸೈಡ್ ಮಟ್ಟ ಕಂಡುಬಂದರೆ, ಉಳಿದ ನಾಲ್ಕು ನಿಲ್ದಾಣಗಳಲ್ಲಿ ಪ್ರತಿ ಘನ ಮೀಟರ್‌ಗೆ 10 ರಿಂದ 13 ಮೈಕ್ರೋಗ್ರಾಂಗಳಷ್ಟು ನೈಟ್ರೋಜನ್ ಡೈಆಕ್ಸೈಡ್ ಮಟ್ಟ ಪತ್ತೆಯಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ