AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಮೂರು ಕಡೆ ಎನ್​ಐಎ ದಾಳಿ: ಏನೇನು ಸಿಕ್ತು ಗೊತ್ತಾ?

ಲಷ್ಕರೆ ತಯ್ಬಾ ಉಗ್ರ, ಸಂಘಟನೆಯ ಕಿಂಗ್‌ಪಿನ್‌ ಆಗಿರುವ ಟಿ ನಾಸೀರ್‌ ಎಂಬಾತನು ಬೆಂಗಳೂರು ಸೆಂಟ್ರಲ್‌ ಜೈಲಿನಲ್ಲಿದ್ದುಕೊಂಡು ಹಲವು ಕೈದಿಗಳು ಉಗ್ರವಾದದಲ್ಲಿ ತೊಡಗುವಂತೆ ಪ್ರಚೋದನೆ ನೀಡಿದ್ದಾನೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ತನಿಖೆ ನಡೆಸುತ್ತಿದ್ದು, ಅದರ ಭಾಗವಾಗಿ ಇಂದು ಕರ್ನಾಟಕ ಸೇರಿ 7 ರಾಜ್ಯಗಳಲ್ಲಿ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕರ್ನಾಟಕದ ಮೂರು ಕಡೆ ಎನ್​ಐಎ ದಾಳಿ: ಏನೇನು ಸಿಕ್ತು ಗೊತ್ತಾ?
ಸಾಂದರ್ಭಿಕ ಚಿತ್ರ
Shivaprasad B
| Edited By: |

Updated on:Mar 05, 2024 | 8:47 PM

Share

ಬೆಂಗಳೂರು, ಮಾ.05: ಬೆಂಗಳೂರಿನಲ್ಲಿ ಗ್ರೆನೇಡ್ ಪತ್ತೆ ಹಿನ್ನೆಲೆ ಕರ್ನಾಟಕ ಸೇರಿ 7 ರಾಜ್ಯಗಳಲ್ಲಿ ಎನ್​ಐಎ(NIA) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕರ್ನಾಟಕ, ತಮಿಳುನಾಡು, ತೆಲಂಗಾಣ, ಪಂಜಾಬ್, ಗುಜರಾತ್ ಹಾಗೂ ಪಶ್ಚಿಮ ಬಂಗಾಳದಲ್ಲಿ ದಾಳಿ ನಡೆಸಲಾಗಿ, ಈ  ವೇಳೆ 25 ಮೊಬೈಲ್ ಫೋನ್, 6 ಲ್ಯಾಪ್ ಟ್ಯಾಪ್, ಕೆಲ ಡಿವೈಸ್​ಗಳು ಹಾಗೂ ಕೆಲ ದಾಖಲೆಗಳು ಸೀಜ್ ಮಾಡಲಾಗಿದೆ. ಇನ್ನು ಸಿಸಿಬಿ ಪೊಲೀಸರು ದಾಳಿ ವೇಳೆ ಏಳು ಪಿಸ್ತೂಲ್, ನಾಲ್ಕು ಹ್ಯಾಂಡ್ ಗ್ರೆನೈಡ್, 45 ಜೀವಂತ ಗುಂಡುಗಳು ಹಾಗೂ ನಾಲ್ಕು ವಾಕಿಟಾಕಿಗಳು ಪತ್ತೆಯಾಗಿತ್ತು. ಈ ತನಿಖೆ ಭಾಗವಾಗಿ ಇಂದು ನಡೆದ ದಾಳಿಯಲ್ಲಿ ಕರ್ನಾಟಕದಲ್ಲಿ ಮೂವರನ್ನು ಮನೆಗಳ ಮೇಲೆ ಎನ್​ಐಎ ದಾಳಿ ಮಾಡಿದೆ.

ಕರ್ನಾಟಕದಲ್ಲಿ ಮೂವರನ್ನು ಮನೆಗಳ ಮೇಲೆ ಎನ್​ಐಎ ದಾಳಿ

ಬೆಂಗಳೂರು ಪರಪ್ಪನ ಆಗ್ರಹಾರ ಜೈಲಿನಲ್ಲಿ ಉಗ್ರವಾದಕ್ಕೆ ಪರಿವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸೇರಿ 7 ರಾಜ್ಯಗಳಲ್ಲಿ ಎನ್​ಐಎ ದಾಳಿ ಮಾಡಿದ್ದು, ತನಿಖೆ ಭಾಗವಾಗಿ ಇಂದು ನಡೆದ ದಾಳಿಯಲ್ಲಿ ಕರ್ನಾಟಕದಲ್ಲಿ ಮೂವರ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಮಂಗಳೂರಿನಲ್ಲಿ ನವೀದ್, ಬೆಂಗಳೂರಿನಲ್ಲಿ ಸೈಯದ್ ಖಾಲಿ ಹಾಗೂ ದಕ್ಷಿಣ ಕನ್ನಡದಲ್ಲಿ ಬಿಜ್ಜಿ ಎಂಬಾತನ ಮನೆಗಳನ್ನು ಪರಿಶೀಲನೆ ನಡೆಸಲಾಗಿದೆ. ಸದ್ಯ ದಾಳಿ ವೇಳೆ ಬೆಂಗಳೂರು ರಾಮೇಶ್ವರಂ ಬ್ಲಾಸ್ಟ್​ಗೂ ಸಂಬಂಧ ಇದೆಯಾ ಎನ್ನುವುದರ ಕುರಿತು ತನಿಖೆ ನಡೆಯುತ್ತಿದೆ.

ಇದನ್ನೂ ಓದಿ:ರಾಮೇಶ್ವರಂ ಕೆಫೆ ಸ್ಫೋಟ: ಎನ್​ಐಎ ತನಿಖೆ ಆರಂಭ, ಕೆಫೆಯಲ್ಲಿ ಅಧಿಕಾರಿಗಳ ತಲಾಶ್

ಇನ್ನು ಬೆಂಗಳೂರು ಜೈಲಿನಲ್ಲಿರುವ ಕೈದಿಗಳಲ್ಲಿ ಉಗ್ರವಾದ ಬೆಳೆಸುವುದು, ಆತ್ಮಾಹುತಿ ದಾಳಿಗೆ ಪ್ರಚೋದನೆ ನೀಡುವುದು ಸೇರಿ ಹಲವು ಉಗ್ರ ಚಟುವಟಿಕೆಗಳಿಗೆ ಪಿತೂರಿ ನಡೆಸಿರುವ ಕುರಿತು ಮೂಲಗಳಿಂದ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಎನ್‌ಐಎ ದಾಳಿ ನಡೆಸಿದೆ ಎನ್ನಲಾಗಿದೆ. ಹಲವು ಶಂಕಿತ ಉಗ್ರರು ಪಾಲ್ಗೊಂಡಿರುವ ಕುರಿತು ಈಗಾಗಲೇ ಮಾಹಿತಿ ಲಭ್ಯವಾಗಿದೆ ಎಂದು ಕೂಡ ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:33 pm, Tue, 5 March 24

Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು