AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾದ ಮೊದಲ ದಿನವೇ ನೀ ನನಗೆ ಇಷ್ಟ ಇಲ್ಲ ಎಂದ ಪತಿ: ಪ್ರಭಾವಿ ಸಚಿವರ ಆಪ್ತರಿಂದಲೇ ನಡೆಯಿತಾ ದೋಖಾ?

ಮದುವೆಯಾದ ಮೊದಲ ದಿನವೇ "ನೀ ನನಗೆ ಇಷ್ಟವಿಲ್ಲ" ಎಂದು ಪತ್ನಿಯನ್ನ ದೂರ ತಳ್ಳಿ, 'ತಲಾಕ್' ನಿಷೇಧದ ನಡುವೆಯೂ ತಲಾಕ್ ನೀಡಿ ವರದಕ್ಷಿಣೆ ಹಾಗೂ ದೈಹಿಕ ಹಿಂಸೆ ನೀಡಿದ ಆರೋಪ ಬೆಂಗಳೂರಿನಲ್ಲಿ ಕೇಳಿ ಬಂದಿದೆ. ಪ್ರಕರಣ ಸಂಬಂಧ ದೂರು ನೀಡಿ 8 ತಿಂಗಳಾದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಸಂತ್ರಸ್ತೆ ಅಳಲು ತೋಡಿಕೊಂಡಿದ್ದು, ಆರೋಪಿಗಳು ಪ್ರಭಾವಿ ಸಚಿವರ ಕಡೆಯವರು ಎಂದೂ ದೂರಿದ್ದಾಳೆ.

ಮದುವೆಯಾದ ಮೊದಲ ದಿನವೇ ನೀ ನನಗೆ ಇಷ್ಟ ಇಲ್ಲ ಎಂದ ಪತಿ: ಪ್ರಭಾವಿ ಸಚಿವರ ಆಪ್ತರಿಂದಲೇ ನಡೆಯಿತಾ ದೋಖಾ?
ಆರೋಪಿImage Credit source: Tv9 Kannada
ಪ್ರದೀಪ್​ ಚಿಕ್ಕಾಟಿ
| Edited By: |

Updated on:Aug 11, 2026 | 12:30 PM

Share

ಮುಖ್ಯಾಂಶಗಳು

  • ಮದುವೆಯಾದ ಮೊದಲ ದಿನವೇ ಪತ್ನಿಗೆ ಶಾಕ್​​ ಕೊಟ್ಟ ಪತಿ
  • ನೀ ನನಗೆ ಇಷ್ಟವಿಲ್ಲವೆಂದು ಹೇಳಿ ಪತ್ನಿಗೆ ಪತಿಯಿಂದ ತಲಾಖ್​
  • ದೂರು ನೀಡಿ 8 ತಿಂಗಳಾದರೂ ಕ್ರಮ ಕೈಗೊಳ್ಳದ ಪೊಲೀಸರು?

ಬೆಂಗಳೂರು, ಆಗಸ್ಟ್​​ 11: ಮದುವೆಯಾದ ಮೊದಲ ದಿನವೇ ನೀ ನನಗೆ ಇಷ್ಟ ಇಲ್ಲ ಎಂದು ಪತ್ನಿಗೆ ಪತಿ ತಿಳಿಸಿದ್ದು, ತಲಾಕ್ ಬ್ಯಾನ್ ಆಗಿದ್ರು ತಲಾಕ್ ನೀಡಿ ದೂರ ನಡೆದಿದ್ದಾನೆ. ಸಾಲದ್ದಕ್ಕೆ ಪತಿ ಮತ್ತು ಕುಟುಂಬಸ್ಥರು ಹಿಂಸೆ ನೀಡುತ್ತಿದ್ದಾರೆ ಎಂದು ನವ ವಿವಾಹಿತೆ ದೂರು ನೀಡಿ 8 ತಿಂಗಳಾದರೂ ಪೊಲೀಸರು ಕ್ರಮ ಕೈಗೊಳ್ಳದ ಆರೋಪ ಬೆಂಗಳೂರಲ್ಲಿ (Bengaluru) ಕೇಳಿಬಂದಿದೆ. ದೂರು ನೀಡಿದ್ದಕ್ಕೆ, ಪರಿಹಾರ ಕೇಳಿದ್ದಕ್ಕೆ ಪತಿ ಕಡೆಯಿಂದ ಜೀವ ಬೆದರಿಕೆ ಹಾಕಿರುವ ಬಗ್ಗೆಯೂ ಯುವತಿ ಗಂಭೀರ ಆರೋಪ ಮಾಡಿದ್ದಾಳೆ.

 2025ರ ಜೂನ್​​ನಲ್ಲಿ ನಡೆದಿದ್ದ ವಿವಾಹ

ಶೇಕ್ ಅಫ್ರಾನ್ ಎಂಬಾತನ ವಿರುದ್ಧ ಯುವತಿ ದೂರಿದ್ದು, 2025ರ ಜೂನ್​​ನಲ್ಲಿ ಇವರಿಬ್ಬರ ಮದುವೆ ಆಗಿತ್ತು. ವಿವಾಹದ ವೇಳೆ ಕಾರು ಸೇರಿದಂತೆ ಸಾಕಷ್ಟು ವರದಕ್ಷಿಣೆಯನ್ನು ಯುವತಿ ಕಡೆಯವರು ಶೇಕ್ ಅಫ್ರಾನ್​​ಗೆ ನೀಡಿದ್ದರು. ಹೀಗಿದ್ದರೂ ಬೇರೆ ಯುವತಿ ಜೊತೆಗೆ ಆತ ಸಂಬಂಧ ಹೊಂದಿದ್ದ. ಇದೇ ಕಾರಣಕ್ಕೆ ಯುವತಿಗೆ ಹಿಂಸೆ ನೀಡುತ್ತಿದ್ದ. ಅಲ್ಲದೆ ಆತನ ಜೊತೆಗೆ ಕುಟುಂಬಸ್ಥರೂ ಮಸಾಜ್ ಮಾಡುವಂತೆ ಕಿರುಕುಳ ನೀಡುತ್ತಿದ್ದರು. ಕೈ ಮೇಲೆ ಬಿಸಿನೀರು ಸುರಿದು ಚಿತ್ರಹಿಂಸೆ ಕೊಟ್ಟಿದ್ದರು. ನಿನ್ನನ್ನು ಮದುವೆ ಮಾಡಿಸಿ ಮನೆಗೆ ಕರೆತಂದಿದ್ದು, ಮನೆ ಕೆಲಸ ಮಾಡಲು. ಇಲ್ಲದಿದ್ದರೆ ಮನೆ ಬಿಟ್ಟು ಹೋಗು ಎಂದು ಬೆದರಿಸಿರೋದಾಗಿ ಆರೋಪಿಸಿ ನವೆಂಬರ್​​ನಲ್ಲಿ ಯುವತಿ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು.

ಇದನ್ನೂ ಓದಿ: ನೇಪಾಳಿ ಕುಟುಂಬ ನಂಬಿ ಕೆಟ್ಟ ಮಾಲೀಕ: ಉಂಡ ಮನೆಗೇ ಕನ್ನ ಹಾಕಿದ ಕೆಲಸಗಾರರು

ಕೇಸ್​​ ದಾಖಲಿಸಲು ಲಂಚ ಪಡೆದಿದ್ದ ಪೊಲೀಸ್​​?

ಇನ್ನು ಪತಿ ಮನೆಯವರ ಕಿರುಕುಳ ಸಂಬಂಧ ಪ್ರಕರಣ ದಾಖಲಿಸಲು ಸಂತ್ರಸ್ತ ಯುವತಿ ಬಳಿ ಅಂದಿನ ಆಗ್ನೇಯ ಮಹಿಳಾ ಠಾಣಾ ಇನ್ಸ್ಪೆಕ್ಟರ್ 1.2 ಲಕ್ಷ ರೂ. ಲಂಚ ಪಡೆದಿದ್ದರು ಎಂದೂ ದೂರಲಾಗಿದೆ. ಜೊತೆಗೆ ಆರೋಪಿಗಳು ಪ್ರಭಾವಿ ಸಚಿವರೊಬ್ಬರ ಕಡೆಯವರು ಎಂಬ ಕಾರಣಕ್ಕೆ ಅವರ ಮೇಲೆ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಲಾಗಿದೆ. ಸಚಿವರ ಆಪ್ತ ಸಹಾಯಕನೇ ತಮ್ಮ ಅಣ್ಣನ ಮಗ ಎಂದು ಹೇಳಿಸಿ ಈ ಮದುವೆ ಮಾಡಿಸಿದ್ದರು. ಹೀಗಾಗಿ ನಮಗಾದ ಅನ್ಯಾಯದ ಬಗ್ಗೆ ಕೇಳಲು ಹೋದರೆ ಯಾರೂ ಸಹಕಾರ ನೀಡುತ್ತಿಲ್ಲ ಎಂದು ಯುವತಿ ಕುಟುಂಬ ದೂರಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 11:45 am, Tue, 11 August 26

Follow Us
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?