ಮಾರಕಾಸ್ತ್ರ ಹಿಡಿದು ಹಲ್ಲೆಗೆ ಸಿದ್ದವಿದ್ದ ದುಷ್ಕರ್ಮಿಗಳು, ಸಿನಿಮೀಯ ರೀತಿಯಲ್ಲಿ ಜೀವ ಉಳಿಸಿಕೊಂಡ ರೌಡಿಶೀಟರ್ ಜೆಸಿಬಿ ನಾರಾಯಣ

ಬೆಂಗಳೂರಿನ ಹುಳಿಮಾವು ಡಿಎಲ್ಎಫ್ ರಸ್ತೆಯಲ್ಲಿ ಜೆಸಿಬಿ ನಾರಾಯಣ ಬರುವ ಮಾಹಿತಿ ಅರಿತ ದುಷ್ಕರ್ಮಿಗಳು ಹಾಡಹಗಲೇ ಮಾರಕಾಸ್ತ್ರಗಳನ್ನು ಹಿಡಿದು ಜೆಸಿಬಿ ನಾರಾಯಣನ ಮೇಲೆ ದಾಳಿ ನಡೆಸಲು ಹೊಂಚು ಹಾಕಿ ಕಾಯುತ್ತಿದ್ದರು. ಜೆಸಿಬಿ ನಾರಾಯಣನ ಕಾರು ಬರುತ್ತಿದ್ದಂತೆ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದ್ದಾರೆ.

ಮಾರಕಾಸ್ತ್ರ ಹಿಡಿದು ಹಲ್ಲೆಗೆ ಸಿದ್ದವಿದ್ದ ದುಷ್ಕರ್ಮಿಗಳು, ಸಿನಿಮೀಯ ರೀತಿಯಲ್ಲಿ ಜೀವ ಉಳಿಸಿಕೊಂಡ ರೌಡಿಶೀಟರ್ ಜೆಸಿಬಿ ನಾರಾಯಣ
ರೌಡಿಶೀಟರ್ ಜೆಸಿಬಿ ನಾರಾಯಣ (ಸಂಗ್ರಹ ಚಿತ್ರ)
Edited By: ಸಾಧು ಶ್ರೀನಾಥ್​

Updated on: Dec 08, 2021 | 9:36 AM

ಬೆಂಗಳೂರು: ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ನಟೋರಿಯಸ್ ರೌಡಿಶೀಟರ್ ಜೆಸಿಬಿ ನಾರಾಯಣನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲು ಯತ್ನಿಸಿದ್ದು ಕೂದಲೆಳೆ ಅಂತರದಲ್ಲಿ ರೌಡಿಶೀಟರ್ ಜೆಸಿಬಿ ನಾರಾಯಣ ಪಾರಾದ ಘಟನೆ ನಡೆದಿದೆ.

ಬೆಂಗಳೂರಿನ ಹುಳಿಮಾವು ಡಿಎಲ್ಎಫ್ ರಸ್ತೆಯಲ್ಲಿ ಜೆಸಿಬಿ ನಾರಾಯಣ ಬರುವ ಮಾಹಿತಿ ಅರಿತ ದುಷ್ಕರ್ಮಿಗಳು ಹಾಡಹಗಲೇ ಮಾರಕಾಸ್ತ್ರಗಳನ್ನು ಹಿಡಿದು ಜೆಸಿಬಿ ನಾರಾಯಣನ ಮೇಲೆ ದಾಳಿ ನಡೆಸಲು ಹೊಂಚು ಹಾಕಿ ಕಾಯುತ್ತಿದ್ದರು. ಜೆಸಿಬಿ ನಾರಾಯಣನ ಕಾರು ಬರುತ್ತಿದ್ದಂತೆ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಜೆಸಿಬಿ ನಾರಾಯಣ ಅಪಾಯದ ಮುನ್ಸೂಚನೆ ಅರಿತು ಕೂಡಲೇ ಸಿನಿಮೀಯ ರೀತಿಯಲ್ಲಿ ಕಾರು ರಿವರ್ಸ್ ತೆಗೆದುಕೊಂಡು ಎಸ್ಪೇಪ್ ಆಗಿದ್ದಾನೆ. ಕೂದಲೆಳೆ ಅಂತರದಲ್ಲಿ ಜೀವ ಉಳಿದಿದೆ. ನಾಲ್ಕೈದು ಜನ ದುಷ್ಕರ್ಮಿಗಳ ಚಲನವಲನ, ದುಷ್ಕರ್ಮಿಗಳು ಮಾರಕಾಸ್ತ್ರ ಹಿಡಿದು ಅಟ್ಯಾಕ್‌ಗೆ ಯತ್ನಿಸುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಹಾಕಿದ್ದ ಸ್ಕೆಚ್ ಮಿಸ್ ಆಕ್ತಿದ್ದಂತೆ ದುಷ್ಕರ್ಮಿಗಳ ಗ್ಯಾಂಗ್ ಸ್ಥಳದಿಂದ ಕಾಲ್ಕಿತ್ತಿದೆ. ಘಟನೆ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿ ಕ್ಯಾಮರಾ ದೃಶ್ಯವಾಳಿ ಹಾಗೂ ದೂರನ್ನ ಆಧರಿಸಿ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಶುರು ಮಾಡಿದ್ದಾರೆ.

ಇದನ್ನೂ ಓದಿ: ಆ್ಯಕ್ಸಿಡೆಂಟ್​ ಬಳಿಕ ಥಿಯೇಟರ್​ನಲ್ಲಿ ಸೋತು ಓಟಿಟಿಯಲ್ಲಿ ದಾಖಲೆ ಮಾಡಿದ ಸಾಯಿ ಧರಮ್​ ತೇಜ್​ ಚಿತ್ರ ‘ರಿಪಬ್ಲಿಕ್​’

Published On - 9:23 am, Wed, 8 December 21

Loading...
Unable to load recommendations.
Follow Us