AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Jyothi Scheme: ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಚಾಲನೆಗೆ ದಿನಾಂಕ ಫಿಕ್ಸ್, ಎಲ್ಲಿ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಮಾಹಿತಿ

ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್‌ 1 ರಂದು ಹಾಗೂ ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್‌ 17- 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾಗಿ ಮುಖ್ಯಮಂತ್ರಿಯವರ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

Gruha Jyothi Scheme: ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಚಾಲನೆಗೆ ದಿನಾಂಕ ಫಿಕ್ಸ್, ಎಲ್ಲಿ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಮಾಹಿತಿ
ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಚಾಲನೆಗೆ ದಿನಾಂಕ ಫಿಕ್ಸ್
Rakesh Nayak Manchi
Rakesh Nayak Manchi|

Updated on: Jun 08, 2023 | 7:09 PM

Share

ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ (Congress Guarantees) ಯೋಜನೆಗಳಲ್ಲಿ ಗೃಹಜ್ಯೋತಿ (Gruha Jyothi Scheme) ಯೋಜನೆ ಆಗಸ್ಟ್‌ 1 ರಂದು ಹಾಗೂ ಗೃಹ ಲಕ್ಷ್ಮಿ (Gruha Lakshmi Scheme) ಯೋಜನೆಗೆ ಆಗಸ್ಟ್‌ 17- 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ. ಬೆಂಗಳೂರು ಒನ್‌, ಕರ್ನಾಟಕ ಒನ್‌, ಗ್ರಾಮ ಒನ್‌ ಕೇಂದ್ರಗಳ ಮೂಲಕ ಹಾಗೂ ಮನೆಯಲ್ಲಿಯೇ ಕಂಪ್ಯೂಟರ್‌ ಮೂಲಕ ಅಥವಾ ಮೊಬೈಲ್‌ ಆಪ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ.

ಈ ಬಗ್ಗೆ ಮುಖ್ಯಮಂತ್ರಿಯವರ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಲಾಗಿದೆ. “ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್‌ 1 ರಂದು ಹಾಗೂ ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್‌ 17- 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾಗಿ ಟ್ವೀಟ್​ನಲ್ಲಿ ಉಲ್ಲೇಖಿಸಲಾಗಿದೆ.

“ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳಗೊಳಿಸಬೇಕು. ಅನಗತ್ಯ ಮಾಹಿತಿ, ದಾಖಲೆಗಳನ್ನು ಕೇಳಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಜೊತೆಗೆ ಅರ್ಜಿಗಳನ್ನು ತಿರಸ್ಕರಿಸಿದಲ್ಲಿ, ಅದು ಸಕಾರಣವಾಗಿರಬೇಕು. ಕುಂಟು ನೆಪ ನೀಡಿ ತಿರಸ್ಕರಿಸುವಂತಿಲ್ಲ ಎಂದು ಎಚ್ಚರಿಕೆಯನ್ನು ನೀಡಿದ್ದೇನೆ” ಎಂದು ಸಿಎಂ ಹೇಳಿದ್ದಾಗಿ ಟ್ವೀಟ್ ಮಾಡಲಾಗಿದೆ.

“ಎಲ್ಲ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗುವ ಕಾರಣ, ಅಪಾರ ಪ್ರಮಾಣದ ದತ್ತಾಂಶ ಸಲ್ಲಿಕೆಗೆ ಅನುಗುಣವಾಗಿ ಸೇವಾ ಸಿಂಧು ಪೋರ್ಟಲ್‌ ನ ಸಾಮರ್ಥ್ಯ ವೃದ್ಧಿಸುವಂತೆ ಇ-ಆಡಳಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದು ಸಿದ್ದರಾಮಯ್ಯ ಹೇಳಿದ್ದಾಗಿ ಉಲ್ಲೇಖಿಸಲಾಗಿದೆ.

“ಗೃಹ ಜ್ಯೋತಿ ಯೋಜನೆಗೆ ಆಗಸ್ಟ್‌ 1 ರಂದು ಕಲಬುರಗಿಯಲ್ಲಿ ಚಾಲನೆ ನೀಡುವ ಕುರಿತು ಯೋಚಿಸುತ್ತಿದ್ದೇವೆ. ಈ ಯೋಜನೆಯ ಮಾರ್ಗಸೂಚಿಗಳ ಕುರಿತು ಇರುವ ಎಲ್ಲ ಗೊಂದಲಗಳನ್ನು ನಿವಾರಿಸಿ, ನಾಗರಿಕರಿಗೆ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಟ್ವೀಟ್​ನಲ್ಲಿ ಉಲ್ಲೇಖಿಸಲಾಗಿದೆ.

“ಗೃಹ ಜ್ಯೋತಿ ಯೋಜನೆಗೆ ಸೇವಾ ಸಿಂಧು ಪೋರ್ಟಲ್‌ ಮೂಲಕ ನೋಂದಾಯಿಸಲು ಅವಕಾಶವಿದೆ. ಇದಲ್ಲದೆ, ಎಸ್ಕಾಂಗಳ ಎಲ್ಲ ಕಚೇರಿಗಳಲ್ಲಿ ಹೆಲ್ಪ್‌ ಡೆಸ್ಕ್‌ ಸ್ಥಾಪಿಸಲಾಗುವುದು. ಜೂನ್‌ 15 ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಬೆಂಗಳೂರು ಒನ್‌, ಕರ್ನಾಟಕ ಒನ್‌, ಗ್ರಾಮ ಒನ್‌ ಕೇಂದ್ರಗಳ ಮೂಲಕ ಹಾಗೂ ಮನೆಯಲ್ಲಿಯೇ ಕಂಪ್ಯೂಟರ್‌ ಮೂಲಕ ಅಥವಾ ಮೊಬೈಲ್‌ ಆಪ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ಹೊಸ ಮನೆ, ಹೊಸ ಬಾಡಿಗೆದಾರರಿಗೆ ರಾಜ್ಯದ ವಿದ್ಯುತ್‌ ಬಳಕೆಯ ಸರಾಸರಿ ಆಧಾರದಲ್ಲಿ ಉಚಿತ ವಿದ್ಯುತ್‌ ಸೌಲಭ್ಯ ನೀಡಲಾಗುವುದು. ಒಂದು ವರ್ಷದ ಸರಾಸರಿ ಲಭ್ಯವಾದ ನಂತರ, ಈ ದತ್ತಾಂಶವನ್ನು ಆಧರಿಸಿ, ಉಚಿತ ವಿದ್ಯುತ್‌ ಸೌಲಭ್ಯ ನೀಡಲಾಗುವುದು” ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಗೆ ಷರತ್ತು: ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ಗೆ ಪರಿಜ್ಞಾನ ಇರಲಿಲ್ಲವೇ ಎಂದು ಪ್ರಶ್ನಿಸಿದ ಕುಮಾರಸ್ವಾಮಿ

“ಹಳೆ ವಿದ್ಯುತ್‌ ಬಿಲ್‌ ಬಾಕಿ ಪಾವತಿಗೆ ಸೆಪ್ಟೆಂಬರ್‌ 30 ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಗೃಹಜ್ಯೋತಿ ಯೋಜನೆಗೆ ಆಧಾರ್‌, ಆರ್. ಆರ್. ಸಂಖ್ಯೆ, ಬಾಡಿಗೆದಾರರು ಕರಾರು ಪತ್ರ ಹಾಗೂ ಅದೇ ವಿಳಾಸದ ಮತದಾರರ ಗುರುತು ಚೀಟಿ ಮಾಹಿತಿ ಸಲ್ಲಿಸಿ, ಸೌಲಭ್ಯ ಪಡೆಯಬಹುದಾಗಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಗೃಹ ಲಕ್ಷ್ಮಿ ಯೋಜನೆಯನ್ನು ಆಗಸ್ಟ್‌ 17 ಅಥವಾ 18 ರಂದು ಬೆಳಗಾವಿಯಲ್ಲಿ ಚಾಲನೆ ನೀಡುವ ಕುರಿತು ಚರ್ಚಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂನ್‌ 15 ರಿಂದ ಪ್ರಾರಂಭವಾಗಲಿದೆ. ಈ ಯೋಜನೆಗೆ ಆನ್‌ಲೈನ್‌ ನಲ್ಲಿ ಸೇವಾ ಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅಂತೆಯೇ ನಾಡಕಚೇರಿಗಳಲ್ಲಿ ಖುದ್ದಾಗಿ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಪ್ರತ್ಯೇಕ ಕೌಂಟರುಗಳನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಅರ್ಜಿದಾರರು ರೇಷನ್‌ ಕಾರ್ಡ್‌ ಸಂಖ್ಯೆ, ಯಜಮಾನಿಯ ಹಾಗೂ ಪತಿಯ ಆಧಾರ್‌ ಕಾರ್ಡ್‌ ಸಂಖ್ಯೆ, ಆಧಾರ್‌ ಸಂಯೋಜನೆಯಾಗಿರುವ ಬ್ಯಾಂಕ್‌ ಖಾತೆಯ ವಿವರವನ್ನು ಒದಗಿಸಬೇಕು. ಈ ದಾಖಲೆಗಳ ಪ್ರತಿಗಳನ್ನು ಆಫ್‌ಲೈನ್‌ ಅರ್ಜಿಗಳೊಂದಿಗೂ ಸಲ್ಲಿಸಬಹುದು” ಎಂದು ಸಿಎಂ ಆಫ್​ ಕರ್ನಾಟಕ ಟ್ವೀಟ್ ಮಾಡಿದೆ.

“ಅರ್ಹ ಫಲಾನುಭವಿಗಳಿಗೆ ಡಿಬಿಟಿ ಮೂಲಕ ನೇರವಾಗಿ ಬ್ಯಾಂಕ್‌ ಖಾತೆಗೆ ನೆರವಿನ ಮೊತ್ತ ಜಮೆ ಆಗಲಿದೆ. ಗೃಹಲಕ್ಷ್ಮಿ ಯೋಜನೆಯು ರಾಜ್ಯದ ಶೇ. 85 ಕ್ಕೂ ಹೆಚ್ಚು ಕುಟುಂಬಗಳನ್ನು ತಲುಪಲಿದೆ ಎಂದು ಅಂದಾಜಿಸಲಾಗಿದೆ. ತೆರಿಗೆ ಪಾವತಿದಾರರಲ್ಲದ ಎಪಿಎಲ್‌ ಕಾರ್ಡುದಾರರಿಗೂ ಈ ಸೌಲಭ್ಯ ದೊರೆಯಲಿದೆ” ಎಂದು ಟ್ವೀಟ್ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ