AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Jyothi Scheme: ಗೃಹಜ್ಯೋತಿ ಯೋಜನೆಗೆ ಸಾರ್ವಜನಿಕರಿಂದ ಭಾರೀ ಸ್ಪಂದನೆ: 4 ದಿನಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ

ಗೃಹ ಜ್ಯೋತಿ ಯೋಜನೆಗೆ ನೋಂದಣಿ ಪ್ರಕ್ರಿಯೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಬುಧವಾರ ಸಂಜೆ ವೇಳೆಗೆ ಒಟ್ಟು 10,85,320 ಗ್ರಾಹಕರು ಸೇವಾ ಸಿಂಧು ಪೋರ್ಟಲ್​ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

Gruha Jyothi Scheme: ಗೃಹಜ್ಯೋತಿ ಯೋಜನೆಗೆ ಸಾರ್ವಜನಿಕರಿಂದ ಭಾರೀ ಸ್ಪಂದನೆ: 4 ದಿನಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Jun 21, 2023 | 9:21 PM

Share

ಬೆಂಗಳೂರು: ಗೃಹ ಜ್ಯೋತಿ ಯೋಜನೆಗೆ (Gruha Jyothi Scheme) ನೋಂದಣಿ ಪ್ರಕ್ರಿಯೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಬುಧವಾರ ಸಂಜೆ ವೇಳೆಗೆ ಒಟ್ಟು 10,85,320 ಗ್ರಾಹಕರು ಸೇವಾ ಸಿಂಧು ಪೋರ್ಟಲ್​ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಗೃಹ ಜ್ಯೋತಿ ಯೋಜನೆಗೆ ನೋಂದಣಿ ಪ್ರಕ್ರಿಯೆಯು ಜೂನ್‌ 18 ರಂದು ಆರಂಭಗೊಂಡಿತ್ತು. ಮೊದಲ ದಿನ 96,305, ಎರಡನೆಯ ದಿನ 3,34,845, ಮೂರನೇ ದಿನ ರಾತ್ರಿ ವೇಳೆಗೆ 4,64,225 ಹಾಗೂ ನಾಲ್ಕನೇ ದಿನಿವಾದ ಇಂದು 1,89,945 ಗ್ರಾಹಕರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ರಾತ್ರಿ ವೇಳೆಗೆ ಈ ಸಂಖ್ಯೆ ಇನ್ನಷ್ಟು ಹೆಚ್ಚಳಗೊಳ್ಳಲಿದೆ ಎಂದು ತಿಳಿಸಿದೆ.

ಗುರುವಾರದಿಂದ ರಾಜ್ಯದ ಎಲ್ಲಾ ವಿದ್ಯುತ್ ಕಚೇರಿಗಳಲ್ಲಿ ಸಾರ್ವಜನಿಕರಿಗೆ ನೋಂದಣಿ ಮಾಡಲು ಪ್ರತ್ಯೇಕ ಲಾಗಿನ್ ಐಡಿ ಹಾಗೂ ಪ್ರತ್ಯೇಕ ಲಿಂಕ್ ಅನ್ನು ನೀಡಲು ನಿರ್ಧರಿಸಲಾಗಿದೆ. ಹಾಗಾಗಿ ನಾಳೆಯಿಂದ ರಾಜ್ಯದ 2000 ವಿದ್ಯುಚ್ಛಕ್ತಿ ಕಚೇರಿಗಳಲ್ಲಿ ಗೃಹ ಜ್ಯೋತಿ ನೋಂದಣಿ ಪ್ರಕ್ರಿಯೆ ಸರಾಗವಾಗಿ ನಡೆಯಲಿದ್ದು, ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

200 ಯೂನಿಟ್​​ವರೆಗಿನ ಉಚಿತ ವಿದ್ಯುತ್‌ ಪಡೆಯುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯ ನೋಂದಣಿ ಪ್ರಕ್ರಿಯೆಯಲ್ಲಿ ದಿನೇ ದಿನೇ ಏರಿಕೆ ಕಂಡುಬರುತ್ತಿದ್ದು, ಸಾರ್ವಜನಿಕರು ಯೋಜನೆಯ ಪ್ರಯೋಜನ ಪಡೆಯಲು ಭಾರೀ ಉತ್ಸುಕತೆ ತೋರುತ್ತಿದ್ದಾರೆ.

ಇದನ್ನೂ ಓದಿ: Gruha Jyothi Scheme: ರೀಚ್​ ಆಗದ ಇಂಧನ ಇಲಾಖೆಯ ಅರ್ಜಿ ಸ್ವೀಕಾರ ಟಾರ್ಗೆಟ್​, 2ನೇ ದಿನ ಸಲ್ಲಿಕೆಯಾದ ಅರ್ಜಿ ಎಷ್ಟು ಗೊತ್ತಾ?

ಕರ್ನಾಟಕ ಒನ್‌, ಬೆಂಗಳೂರು ಒನ್‌ ಹಾಗೂ ಗ್ರಾಮ ಒನ್‌ ಜೊತೆಗೆ, ಸಾರ್ವಜನಿಕರು ತಮ್ಮ ಕಂಪ್ಯೂಟರ್‌, ಲ್ಯಾಪ್​ಟಾಪ್‌, ಮೊಬೈಲ್‌ ಫೋನ್​ಗಳಲ್ಲಿ ಹಾಗೂ ಕೆಲವು ವಿದ್ಯುತ್ ಕಚೇರಿಗಳಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ.

ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಯಾವುದೇ ಗಡುವನ್ನು ನಿಗದಿಪಡಿಸದ ಕಾರಣ ಗ್ರಾಹಕರು ಗಡಿಬಿಡಿ ಮಾಡಕೊಳ್ಳದೇ, ಜೊತೆಗೆ ಆತಂಕ ಪಡದೇ ಸೇವಾ ಸಿಂಧು ಪೋರ್ಟಲ್‌ sevasindhugs.karnataka.gov.in ಮೂಲಕ ನೋಂದಾಯಿಸಬಹುದು ಎಂದು ರಾಜ್ಯ ಸರಕಾರ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: Gruha Jyothi Scheme: ಗೃಹಜ್ಯೋತಿ ಯೋಜನೆ ಅಡಿ ಅರ್ಜಿ ಸಲ್ಲಿಕೆಗೆ ಆರಂಭಿಕ ವಿಘ್ನ, ಸರ್ವರ್ ಫುಲ್ ಬ್ಯುಸಿ

ಸೇವಾಸಿಂಧು ಪೋರ್ಟಲ್​ ಸರ್ವರ್​ ಡೌನ್​

ಗೃಹ ಜ್ಯೋತಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಶುರುವಾದಾಗಿನಿಂದಲೂ ಸರ್ವರ್​ ಸಮಸ್ಯೆ ತಪ್ಪಿರಲಿಲ್ಲ. ನಾಡ ಕಚೇರಿ, ಬೆಂಗಳೂರು ಓನ್, ಗ್ರಾಮ ಓನ್ ಹಾಗೂ ಬೆಸ್ಕಾಂ ಕಚೇರಿಗಳ ಮುಂದೆ ನೂರಾರು ಜನ ತಮ್ಮ ಕೆಲಸ-ಕಾರ್ಯಗಳನ್ನು ಬಿಟ್ಟು ಕಾಯುವಂತಹ ಪರಿಸ್ಥಿತಿ ಉಂಟಾಗಿತ್ತು. ಜೂನ್ 20ರಂದು ಕೂಡ  ಸೇವಾಸಿಂಧು ಪೋರ್ಟಲ್ ಸಮಸ್ಯೆ ಕಾಣಿಸಿಕೊಂಡಿತ್ತು.

ಅಷ್ಟೇ ಅಲ್ಲದೇ ನಾಲ್ಕನೇ ದಿನವಾದ ಇಂದು ಕೂಡ ಸರ್ವರ್​ ಸಮಸ್ಯೆ ಉಂಟಾಗಿತ್ತು. ಬಳಿಕ ಸರ್ವರ್ ಸಮಸ್ಯೆ ಬಗೆಹರಿಸಲು ಸರ್ಕಾರ ಹೊಸ ಲಿಂಕ್ ಬಿಟ್ಟಿತ್ತು. ಎಲ್ಲಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಹೊಸ ಲಿಂಕ್ ಲಭ್ಯವಿತ್ತು. ಕೇವಲ ಒಂದೇ ನಿಮಿಷದಲ್ಲಿ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:19 pm, Wed, 21 June 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ