AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರಿಂದ ಅಧಿಕ ವಿದ್ಯುತ್​ ಬಿಲ್​ ವಸೂಲಿ, ಆದ್ರೆ ಸರ್ಕಾರಿ ಇಲಾಖೆ-ಸಂಸ್ಥೆಗಳ ಸಾವಿರಾರು ಕೋಟಿ ಬಿಲ್​​ ಬಾಕಿ, ಮೌನವಹಿಸಿದ ಸರ್ಕಾರ

ಎಸ್ಕಾಂ ಅಧಿಕಾರಿಗಳು ಜನರಿಗೊಂದು, ಸರ್ಕಾರಿ ಇಲಾಖೆ ಮತ್ತು ಸಂಸ್ಥೆಗಳಿಗೊಂದು ನಿಯಮ ಮಾಡಲು ಹೊರಟಿದ್ದಾರಾ ಎಂಬ ಅನುಮಾನ ವ್ಯಕ್ತವಾಗಿದೆ. ಹೌದು ಸರ್ಕಾರಿ ಇಲಾಖೆ ಮತ್ತು ಸಂಸ್ಥೆಗಳು ಎಸ್ಕಾಂಗಳಿಗೆ ಕಟ್ಟಬೇಕಾದ ಕೋಟಿ ಕೋಟಿ ಬಿಲ್​​ ಅನ್ನು ಬಾಕಿ ಉಳಿಸಿಕೊಂಡರೂ, ಅಧಿಕಾರಿಗಳು ಮಾತ್ರ ಧ್ವನಿ ಎತ್ತದೆ ಶಾಂತರೂಪಿಗಳಾಗಿದ್ದಾರೆ.

ಜನರಿಂದ ಅಧಿಕ ವಿದ್ಯುತ್​ ಬಿಲ್​ ವಸೂಲಿ, ಆದ್ರೆ ಸರ್ಕಾರಿ ಇಲಾಖೆ-ಸಂಸ್ಥೆಗಳ ಸಾವಿರಾರು ಕೋಟಿ ಬಿಲ್​​ ಬಾಕಿ, ಮೌನವಹಿಸಿದ ಸರ್ಕಾರ
ಕೆಪಿಟಿಸಿಎಲ್​​​​
ವಿವೇಕ ಬಿರಾದಾರ
|

Updated on:Jun 12, 2023 | 12:08 PM

Share

ಬೆಂಗಳೂರು: ಗೃಹ ಜ್ಯೋತಿ (Gruha Jyoti) ಯೋಜನೆ ಅಡಿ ರಾಜ್ಯ ಸರ್ಕಾರ 200 ಯುನಿಟ್​​ವರೆಗು ಪ್ರತಿ ಮನೆಗೆ ಉಚಿತ ವಿದ್ಯುತ್​​ (Free Electricity) ಅಂತ ಘೋಷಿಸಿದೆ. ಆದರೆ ಇದಕ್ಕೂ ಮುನ್ನ ಜನರು ಏರಿಕೆಯಾದ ವಿದ್ಯುತ್​ ಬಿಲ್ (Electricity Bill)​​ ದರದಿಂದ ಪರದಾಡುತ್ತಿದ್ದಾರೆ. ಈ ಬಿಲ್​​​ ಗ್ರಾಹಕರು ಕಡ್ಡಾಯವಾಗಿ ಕಟ್ಟಬೇಕಾಗಿದ್ದು, ಇಲ್ಲವಾದಲ್ಲಿ 200 ಯುನಿಟ್​ ಉಚಿತ ವಿದ್ಯುತ್​ ಸಿಗುವುದಿಲ್ಲ ಎಂದು ಎಸ್ಕಾಂ ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ ಎಸ್ಕಾಂ ಅಧಿಕಾರಿಗಳು ಜನರಿಗೊಂದು, ಸರ್ಕಾರಿ ಇಲಾಖೆ ಮತ್ತು ಸಂಸ್ಥೆಗಳಿಗೊಂದು ನಿಯಮ ಮಾಡಲು ಹೊರಟಿದ್ದಾರಾ ಎಂಬ ಅನುಮಾನ ವ್ಯಕ್ತವಾಗಿದೆ. ಹೌದು ಸರ್ಕಾರಿ ಇಲಾಖೆ ಮತ್ತು ಸಂಸ್ಥೆಗಳು ಎಸ್ಕಾಂಗಳಿಗೆ ಕಟ್ಟಬೇಕಾದ ಕೋಟಿ ಕೋಟಿ ಬಿಲ್​​ ಅನ್ನು ಬಾಕಿ ಉಳಿಸಿಕೊಂಡರೂ, ಅಧಿಕಾರಿಗಳು ಮಾತ್ರ ಧ್ವನಿ ಎತ್ತದೆ ಶಾಂತರೂಪಿಗಳಾಗಿದ್ದಾರೆ.

ಸರ್ಕಾರಿ ಇಲಾಖೆ ಮತ್ತು ಸಂಸ್ಥೆಗಳು ಕರೆಂಟ್ ಬಳಸಿ ಬೆಸ್ಕಾಂಗೆ ಬಿಲ್‌ಕಟ್ಟದೆ ನಿರ್ಲಕ್ಷ್ಯ ವಹಿಸಿದ್ದು, ವಿವಿಧ ಸರ್ಕಾರಿ ಇಲಾಖೆ ಮತ್ತು ಸಂಸ್ಥೆಗಳಿಗೆ 5 ಸಾವಿರ ಕೋಟಿಗೂ ಹೆಚ್ಚು ಬಿಲ್ ಬಾಕಿ ಇದೆ. ಪ್ರತಿ ವರ್ಷ ಕರೆಂಟ್ ಬಿಲ್ ಬಾಕಿ ಹೆಚ್ಚುತ್ತಲೇ ಇದ್ದು, ಜೊತೆಗೆ ಬಡ್ಡಿಯೂ ಏರುತ್ತಿದೆ. ಆದರೂ ಸರ್ಕಾರಿ ಇಲಾಖೆ ಮತ್ತು ಸಂಸ್ಥೆಗಳು ಬಿಲ್ ಕಟ್ಟಲು ಮೀನಾಮೇಷ ಎಣಿಸುತ್ತಿವೆ.

ಇದನ್ನೂ ಓದಿ: ವಿದ್ಯುತ್ ದರ ಏರಿಕೆ ಬಗ್ಗೆ ಟೀಕೆ: ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಸ್ಪಷ್ಟನೆ

ಕಳೆದ ವರ್ಷ ಮಾರ್ಚ್ ತಿಂಗಳಿಂದ 2023ವರೆಗೆ ಬರಬೇಕಾದ ಬಿಲ್ ಬಾಕಿ ಇದ್ದು, ಇದೀಗ ಗೃಹಜ್ಯೋತಿ ಉಚಿತ ವಿದ್ಯುತ್​ ಹಿನ್ನೆಲೆ ಬಾಕಿ ಉಳಿಸಿಕೊಂಡ ಬಿಲ್​​ಗಳನ್ನು ಕ್ಲಿಯರ್ ಮಾಡುವಂತೆ ಬೆಸ್ಕಾಂ ಸರ್ಕಾರಿ ಇಲಾಖೆ ಮತ್ತು ಸಂಸ್ಥೆಗಳಿಗೆ ನೋಟೀಸ್ ನೀಡಿದೆ.

ಸರ್ಕಾರಿ ಇಲಾಖೆ ಮತ್ತು ಸಂಸ್ಥೆಗಳಿಂದ ಬರಬೇಕಾದ ಬಾಕಿ

  1. BBMP (ವಾರ್ಡ್​​ಗಳ ಬೀದಿ ದೀಪಗಳು) – 640 ಕೋಟಿ
  2. BBMP (ಬೀದಿ ದೀಪ) – 52.56 ಕೋಟಿ
  3. BWSSB ಬೋರ್ ವೆಲ್ – 468.25 ಕೋಟಿ
  4. ನೀರಾವರಿ ಇಲಾಖೆ – 46.91 ಕೋಟಿ
  5. ಸ್ಲಮ್ ಬೋರ್ಡ್ – 16.69 ಕೋಟಿ
  6. ಪವರ್ ಲೂಮ್ ಕಚೇರಿ – 4.52 ಕೋಟಿ
  7. ಸ್ಥಳೀಯ ಗ್ರಾಮೀಣ ಸಂಸ್ಥೆಗಳು – 3,785.87 ಕೋಟಿ
  8. ಸ್ಥಳೀಯ ನಗರ ಸಂಸ್ಥೆಗಳು – 113.16 ಕೋಟಿ
  9. ಇತರೆ ಸರ್ಕಾರಿ ಇಲಾಖೆ ಕಚೇರಿ – 43.49 ಕೋಟಿ
  10. ಕೇಂದ್ರ ಸರ್ಕಾರ – 33.02 ಕೋಟಿ

ಒಟ್ಟು 5,246.64 ಕೋಟಿ ಬಾಕಿ ಇದೆ

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:27 am, Mon, 12 June 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?