AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Lakshmi Scheme: ಗೃಹ ಲಕ್ಷ್ಮಿ ಯೋಜನೆ ಜಾರಿ ಯಾವಾಗ? ಯಾರು ಅರ್ಜಿ ಸಲ್ಲಿಸಬಹುದು? ಅರ್ಹತೆ ಮತ್ತು ಇತರ ವಿವರ ಇಲ್ಲಿದೆ

ರಾಜ್ಯದ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡುದಾರರ ಪ್ರತಿಯೊಂದು ಕುಟುಂಬದ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ.ವನ್ನು ಸರ್ಕಾರ ಹಾಕಲಿದೆ. ಯಾವಾಗದಿಂದ? ಅರ್ಹತೆಗಳು ಏನು? ಇಲ್ಲಿದೆ ಮಾಹಿತಿ.

Gruha Lakshmi Scheme: ಗೃಹ ಲಕ್ಷ್ಮಿ ಯೋಜನೆ ಜಾರಿ ಯಾವಾಗ? ಯಾರು ಅರ್ಜಿ ಸಲ್ಲಿಸಬಹುದು? ಅರ್ಹತೆ ಮತ್ತು ಇತರ ವಿವರ ಇಲ್ಲಿದೆ
ಗೃಹ ಲಕ್ಷ್ಮಿ ಯೋಜನೆ
Rakesh Nayak Manchi
|

Updated on: Jun 02, 2023 | 5:38 PM

Share

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಘೋಷಿಸಿದ ಬಹು ನಿರೀಕ್ಷಿತ ಐದು ಗ್ಯಾರಂಟಿಗಳನ್ನು (Congress Garantees) ಅನುಷ್ಠಾನಗೊಳಿಸುವುದಾಗಿ ಮುಖ್ಯಮಂತ್ರಿ ಸಿದರಾಮಯ್ಯ (Siddaramaiah) ಅವರು ಇಂದು (ಜೂನ್ 2) ಘೋಷಿಸಿದ್ದಾರೆ. ಮಹಿಳಾ ಮತದಾರರನ್ನು ಕಾಂಗ್ರೆಸ್‌ನತ್ತ ಸೆಳೆದ ಯೋಜನೆಗಳಲ್ಲಿ ಒಂದು ಗೃಹ ಲಕ್ಷ್ಮಿ ಯೋಜನೆ (Gruha Lakshmi Scheme) ಕೂಡ ಒಂದು. ಈ ಯೋಜನೆಯಡಿ ಪ್ರತಿ ಮನೆಯ ಯಜಮಾನ್ತಿಗೆ ತಿಂಗಳಿಗೆ 2,000 ರೂಪಾಯಿ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಹಾಗಿದ್ದರೆ ಈ ಯೋಜನೆ ಯಾವಾಗದಿಂದ ಜಾರಿಯಾಗಲಿದೆ? ಅರ್ಹತೆಗಳೇನು? ಇಲ್ಲಿದೆ ಮಾಹಿತಿ.

ಗೃಹ ಲಕ್ಷ್ಮಿ ಯೋಜನೆಗೆ ಯಾರು ಅರ್ಹರು?

ಮಹಿಳಾ ಮುಖ್ಯಸ್ಥರನ್ನು ಸರ್ಕಾರ ಹೇಗೆ ನಿರ್ಧರಿಸುತ್ತದೆ ಎಂಬುದರ ಕುರಿತು ಸಾಕಷ್ಟು ಚರ್ಚೆಗಳು ನಡೆದಿವೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ಹಿಂದೆ ಜೇಷ್ಠತೆಯ ಆಧಾರದ ಮೇಲೆ ಯೋಜನೆಯ ಲಾಭವನ್ನು ಅತ್ತೆಗೆ ಪಡೆಯುತ್ತಾರೆ ಎಂದು ಹೇಳಿದ್ದರು. ಆದರೆ, ಕುಟುಂಬದ ಮಹಿಳೆ ಯಾರು ಎಂಬುದನ್ನು ಕುಟುಂಬದವರೇ ನಿರ್ಧರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

18 ವರ್ಷ ಮೇಲ್ಪಟ್ಟ ಯಾವುದೇ ಮಹಿಳೆಯನ್ನು ಕುಟುಂಬದ ಮುಖ್ಯಸ್ಥೆ ಎಂದು ಪರಿಗಣಿಸಬಹುದು ಎಂದು ಮುಖ್ಯಮಂತ್ರಿಯವರು ತಿಳಿಸಿದ್ದಾರೆ. ಈ ಯೋಜನೆಯು ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಮತ್ತು ಎಪಿಎಲ್ ಎರಡಕ್ಕೂ ಅನ್ವಯಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ: Yuva Nidhi Scheme: 2022-23ನೇ ಸಾಲಿನಲ್ಲಿ ಪದವಿ ಪಡೆದವರಿಗೆ ‘ಯುವನಿಧಿ’, ತೃತೀಯ ಲಿಂಗಿಗಳಿಗೂ ಯೋಜನೆ ಭಾಗ್ಯ

ಗೃಹಲಕ್ಷ್ಮಿ ಯೋಜನೆಗೆ ಯಾವಾಗ ಅರ್ಜಿ ಸಲ್ಲಿಸಬಹುದು?

ಅರ್ಜಿಗಳನ್ನು ಸಲ್ಲಿಸಲು ಮತ್ತು ಆಧಾರ್ ಮತ್ತು ಬ್ಯಾಂಕ್ ವಿವರಗಳಂತಹ ದಾಖಲೆಗಳನ್ನು ಸಲ್ಲಿಸಲು ಜೂನ್ 15 ರಿಂದ ಜುಲೈ 15 ರ ನಡುವೆ ಒಂದು ತಿಂಗಳ ಗಡುವನ್ನು ನೀಡುವುದಾಗಿ ರಾಜ್ಯ ಸರ್ಕಾರ ಹೇಳಿದೆ.

‘ಗೃಹ ಲಕ್ಷ್ಮಿ’ ಯಾವಾಗ ಜಾರಿಯಾಗಲಿದೆ?

ಅರ್ಜಿಗಳನ್ನು ಸ್ವೀಕರಿಸಿದ ನಂತರ ಸರ್ಕಾರವು ಅದನ್ನು ಪರಿಶೀಲಿಸುತ್ತದೆ. ಈ ಕಾರ್ಯ ಮುಕ್ತಾಯದ ನಂತರ ಆಗಸ್ಟ್ 15 ರಂದು ಅಂದರೆ ಸ್ವಾತಂತ್ರ್ಯ ದಿನಾಚರಣೆಯಂದು ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕುಟುಂಬದ ಮಹಿಳಾ ಮುಖ್ಯಸ್ಥರು ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ವಿವರಗಳಂತಹ ವಿವರಗಳನ್ನು ಒದಗಿಸಬೇಕು. ನಾವು ಜೂನ್ 15 ರಿಂದ ಜುಲೈ 15 ರ ನಡುವೆ ಆನ್‌ಲೈನ್‌ನಲ್ಲಿ ಮಹಿಳೆಯರಿಂದ ಅರ್ಜಿಗಳನ್ನು ಸ್ವೀಕರಿಸಲಿದ್ದೇವೆ. ನಾವು ಈ ಅರ್ಜಿಗಳನ್ನು ಪರಿಶೀಲಿಸಿ ಅಂತಹವರಿಗೆ ಆಗಸ್ಟ್ 15ರಿಂದ ಪ್ರತಿ ತಿಂಗಳು 2,000 ರೂ.ಗಳನ್ನು ವರ್ಗಾಯಿಸುವುದಾಗಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಅರ್ಜಿಗಳನ್ನು ಅಂತಿಮಗೊಳಿಸುವ ಮೊದಲು ಸರ್ಕಾರವು ಕುಟುಂಬಗಳ ಡೇಟಾವನ್ನು ದೃಢೀಕರಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ವೃದ್ಧಾಪ್ಯ ಮತ್ತು ವಿಧವೆಯರು ಸೇರಿದಂತೆ ವಿವಿಧ ಪಿಂಚಣಿದಾರರಿಗೆ ಈ ಯೋಜನೆ ಅನ್ವಯವಾಗಲಿದೆ ಎಂದು ಮುಖ್ಯಮಂತ್ರಿಯವರು ಸ್ಪಷ್ಟಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು