AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಎಂ ಸ್ಥಾನ ಬಿಟ್ಟು ಹೋಗುವ ಮುನ್ನ ಆ 5,000 ಕೋಟಿ ರೂ. ಎಲ್ಲಿದೆ ಹೇಳಿ!’: ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಸುರೇಶ್ ಕುಮಾರ್

ಬಿಜೆಪಿ ನಾಯಕ ಸುರೇಶ್ ಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಗೃಹಲಕ್ಷ್ಮಿ ಯೋಜನೆಗೆ ಮೀಸಲಿದ್ದ 5,000 ಕೋಟಿ ರೂ. ನಿಧಿ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದ್ದಾರೆ. 1.14 ಕೋಟಿ ಮಹಿಳೆಯರಿಗೆ ತಲುಪಬೇಕಾಗಿದ್ದ ಹಣ ಸಿಕ್ಕಿಲ್ಲ, ಇದು ರಾಜ್ಯದ ತಿಜೋರಿ ಲೂಟಿ ಎಂದು ಆರೋಪಿಸಿದ್ದಾರೆ. ಸಿದ್ದರಾಮಯ್ಯ ಸಿಎಂ ಸ್ಥಾನ ತ್ಯಜಿಸುವ ಮುನ್ನ ಹಣದ ಹಣೆಬರಹದ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಪತ್ರದ ಮೂಲಕ ಆಗ್ರಹಿಸಿದ್ದಾರೆ.

‘ಸಿಎಂ ಸ್ಥಾನ ಬಿಟ್ಟು ಹೋಗುವ ಮುನ್ನ ಆ 5,000 ಕೋಟಿ ರೂ. ಎಲ್ಲಿದೆ ಹೇಳಿ!’: ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಸುರೇಶ್ ಕುಮಾರ್
ಸಿದ್ದರಾಮಯ್ಯ ಬಹಿರಂಗ ಪತ್ರ
ಅಕ್ಷಯ್​ ಪಲ್ಲಮಜಲು​​
| Edited By: |

Updated on:May 30, 2026 | 10:10 AM

Share

ಬೆಂಗಳೂರು, ಮೇ30: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಹೈಡ್ರಾಮಾ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಹೊಸ ನಾಯಕನ ಆಯ್ಕೆಯ ಕಸರತ್ತು ತೀವ್ರಗೊಂಡಿರುವ ಬೆನ್ನಲ್ಲೇ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ತಾವು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಡುವ ಮುನ್ನ, ರಾಜ್ಯದ 1.14 ಕೋಟಿ ಮಹಿಳೆಯರಿಗೆ ತಲುಪಬೇಕಾಗಿದ್ದ 5,000 ಕೋಟಿ ರೂ. ಹಣದ ಹಣೆಬರಹದ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ನಾಯಕ ಸುರೇಶ್​​ ಕುಮಾರ್ ಅವರು ಸಿದ್ದರಾಮಯ್ಯ ಅವರಿಗೆ ಕಟುವಾಗಿ ಸೋಶಿಯಲ್ ಮೀಡಿಯಾದಲ್ಲಿ ಪ್ರಶ್ನೆ ಮಾಡಿದ್ದಾರೆ.

“ಚುನಾವಣೆಯಲ್ಲಿ ಮತ ಗಳಿಸಲು ಸಾಧನವಾಗಿದ್ದ ಗೃಹಲಕ್ಷ್ಮಿ ಯೋಜನೆಯ ಹಣ 1.14 ಕೋಟಿ ಮಹಿಳೆಯರ ಕೈ ಸೇರದಿರುವುದು ಸಣ್ಣ ಪ್ರಮಾದವಲ್ಲ, ಇದು ರಾಜ್ಯದ ತಿಜೋರಿಯನ್ನೇ ಲೂಟಿ ಹೊಡೆದಿರುವ ಸ್ಪಷ್ಟ ಉದಾಹರಣೆ. ಈ ಪ್ರಸ್ತಾವನೆ ನಡೆದು 5 ತಿಂಗಳು ಕಳೆದರೂ ಇಂದಿಗೂ ರಾಜ್ಯದ ಗೃಹಲಕ್ಷ್ಮಿಯರಿಗೆ ಆ ಹಣ ತಲುಪಿಲ್ಲ. ಸಚಿವರು ಹಣ ಪಾವತಿಯಾಗಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ಹಾಗಾದರೆ ಈ ಭಾರಿ ಮೊತ್ತದ ಹಣ ಎಲ್ಲಿ ಹೋಯಿತು? ಯಾರ ಜೇಬು ಸೇರಿತು?” ಎಂದು ಪತ್ರದಲ್ಲಿ ನೇರವಾಗಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Karnataka CM News Live: ಕೆಪಿಸಿಸಿ ಅಧ್ಯಕ್ಷ ಗಾದಿಗೆ ಮತ್ತೊರ್ವರ ಹೆಸರು ಸಪ್ರೈಸ್​ ಎಂಟ್ರಿ!

ಇಲ್ಲಿದೆ ನೋಡಿ ಸುರೇಶ್​ ಕುಮಾರ್​​ ಬಹಿರಂಗ ಪತ್ರ:

“ಇಡೀ ದೇಶದಲ್ಲೇ ದಾಖಲೆ ಸಂಖ್ಯೆಯ ಬಜೆಟ್ ಮಂಡಿಸಿರುವ ನೀವು ರಾಜ್ಯದ ಆರ್ಥಿಕ ತಜ್ಞರು ಹಾಗೂ ತಿಜೋರಿಯ ಸಂಪೂರ್ಣ ನಿಯಂತ್ರಣ ಹೊಂದಿದ್ದವರು. ಸಾರ್ವಜನಿಕರ ತೆರಿಗೆ ಹಣದ ಪಾವಿತ್ರ್ಯತೆಯನ್ನು ಕಾಯುವುದು ಹಾಗೂ ಪ್ರತಿಯೊಂದು ಪೈಸೆಗೂ ಉತ್ತರದಾಯಿತ್ವ ವಹಿಸುವುದು ನಿಮ್ಮ ನೈತಿಕ ಜವಾಬ್ದಾರಿಯಾಗಿದೆ. ಆದ್ದರಿಂದ ಸಿಎಂ ಸ್ಥಾನದಿಂದ ನಿರ್ಗಮಿಸುವ ಮುನ್ನ ಈ 5,000 ಕೋಟಿ ರೂ ಹಣದ ಅಸಲಿ ಸತ್ಯ ಮತ್ತು ಸ್ಥಿತಿಗತಿಯನ್ನು ರಾಜ್ಯದ ನಾಗರಿಕರಿಗೆ ಸ್ಪಷ್ಟಪಡಿಸಬೇಕು” ಎಂದು ಬಹಿರಂಗ ಪತ್ರದ ಮೂಲಕ ಕಟುವಾಗಿ ಆಗ್ರಹಿಸಲಾಗಿದೆ. ಈ ಪತ್ರವು ಸದ್ಯ ಕರ್ನಾಟಕ ರಾಜಕೀಯ ವಲಯದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:29 am, Sat, 30 May 26

Follow Us
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ