AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಶೂ ಬಾಕ್ಸ್​ ಕ್ಲೀನ್ ಮಾಡುವಾಗ 5ನೇ ಮಹಡಿಯಿಂದ ಬಿದ್ದ ಮಹಿಳೆ, ಚಿಕಿತ್ಸೆ ಫಲಕಾರಿಯಾಗದೇ ಸಾವು

ಮಹಿಳೆಯೋರ್ವರು ಆಯಾತಪ್ಪಿ 5ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶೂ ಬಾಕ್ಸ್​ ಕ್ಲೀನ್ ಮಾಡುವಾಗ ಈ ದುರ್ಘಟನೆ ನಡೆದಿದೆ.

ಬೆಂಗಳೂರು: ಶೂ ಬಾಕ್ಸ್​ ಕ್ಲೀನ್ ಮಾಡುವಾಗ 5ನೇ ಮಹಡಿಯಿಂದ ಬಿದ್ದ ಮಹಿಳೆ, ಚಿಕಿತ್ಸೆ ಫಲಕಾರಿಯಾಗದೇ ಸಾವು
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Dec 10, 2023 | 5:08 PM

Share

ಬೆಂಗಳೂರು, (ಡಿಸೆಂಬರ್ 10): 31 ವರ್ಷದ ಮಹಿಳೆಯೋರ್ವರು (Woman) ಅಪಾರ್ಟ್ಮೆಂಟ್​ನ 5ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನ(Bengaluru) ಕಾಡುಗೋಡಿ ಸಮೀಪದ ದೊಡ್ಡಬನಹಳ್ಳಿಯಲ್ಲಿ ನಡೆದಿದೆ, ಖುಷ್ಬೂ ಅಶೀಷ್ ತ್ರಿವೇದಿ ಎನ್ನುವ ಮಹಿಳೆ ದೊಡ್ಡಬನಹಳ್ಳಿಯ ಬಿಡಿಎ ವಿಂಧ್ಯಗಿರಿ ಅಪಾರ್ಟಮೆಂಟ್ ಬಿದ್ದು ಸಾವನ್ನಪ್ಪಿದ್ದಾಳೆ. ಮನೆ ಸ್ವಚ್ಛಗೊಳಿಸುತ್ತಿರುವ ಸಂದರ್ಭದಲ್ಲಿ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುಜರಾತ್ ಮೂಲದ ಖುಷ್ಬೂ ಹಾಗೂ ಆಶೀಶ್ ಇತ್ತೀಚೆಗಷ್ಟೆ ಮದುವೆಯಾಗಿದ್ದು, ದೊಡ್ಡಬನಹಳ್ಳಿಯ ವಿಂಧ್ಯಗಿರಿ ಅಪಾರ್ಟಮೆಂಟ್​ನ 5ನೇ ಮಹಡಿಯಲ್ಲಿ ವಾಸವಾಗಿದ್ದರು. ಆದ್ರೆ, ಇಂದು ಪ್ಲಾಟ್ ಮುಂಭಾಗ ಶೂ ಬಾಕ್ಸ್ ಕ್ಲೀನ್ ಮಾಡುತ್ತಿದ್ದ ವೇಳೆ ಖುಷ್ಬೂ ಆಯಾತಪ್ಪಿ ಕೆಳಗೆ ಬಿದ್ದಿದ್ದಾಳೆ. ಇದರಿಂದ ಗಂಭೀರ ಗಾಯವಾಗಿ ಗಾಯಗೊಂಡಿದ್ದ ಖುಷ್ಬೂ ಅವರನ್ನು ಕೂಡಲೇ ಅಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಬೆಂಗಳೂರು ಪೂರ್ವ ತಾಲ್ಲೂಕಿನ ದೊಡ್ಡಬನಹಳ್ಳಿಯಲ್ಲಿರುವ ವಿಂಧ್ಯಗಿರಿ ಅಪಾರ್ಟ್‌ಮೆಂಟ್ 18 ಮಹಡಿ ಹೊಂದಿದ್ದು, ಇದರಲ್ಲಿ ಆಶೀಶ್ ತ್ರಿವೇದಿ ದಂಪತಿ 5ನೇ ಮಹಡಿಯಲ್ಲಿ ವಾಸವಾಗಿದ್ದರು. ಇನ್ನು ಘಟನೆ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More