AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಶೂ ಬಾಕ್ಸ್​ ಕ್ಲೀನ್ ಮಾಡುವಾಗ 5ನೇ ಮಹಡಿಯಿಂದ ಬಿದ್ದ ಮಹಿಳೆ, ಚಿಕಿತ್ಸೆ ಫಲಕಾರಿಯಾಗದೇ ಸಾವು

ಮಹಿಳೆಯೋರ್ವರು ಆಯಾತಪ್ಪಿ 5ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶೂ ಬಾಕ್ಸ್​ ಕ್ಲೀನ್ ಮಾಡುವಾಗ ಈ ದುರ್ಘಟನೆ ನಡೆದಿದೆ.

ಬೆಂಗಳೂರು: ಶೂ ಬಾಕ್ಸ್​ ಕ್ಲೀನ್ ಮಾಡುವಾಗ 5ನೇ ಮಹಡಿಯಿಂದ ಬಿದ್ದ ಮಹಿಳೆ, ಚಿಕಿತ್ಸೆ ಫಲಕಾರಿಯಾಗದೇ ಸಾವು
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Dec 10, 2023 | 5:08 PM

Share

ಬೆಂಗಳೂರು, (ಡಿಸೆಂಬರ್ 10): 31 ವರ್ಷದ ಮಹಿಳೆಯೋರ್ವರು (Woman) ಅಪಾರ್ಟ್ಮೆಂಟ್​ನ 5ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನ(Bengaluru) ಕಾಡುಗೋಡಿ ಸಮೀಪದ ದೊಡ್ಡಬನಹಳ್ಳಿಯಲ್ಲಿ ನಡೆದಿದೆ, ಖುಷ್ಬೂ ಅಶೀಷ್ ತ್ರಿವೇದಿ ಎನ್ನುವ ಮಹಿಳೆ ದೊಡ್ಡಬನಹಳ್ಳಿಯ ಬಿಡಿಎ ವಿಂಧ್ಯಗಿರಿ ಅಪಾರ್ಟಮೆಂಟ್ ಬಿದ್ದು ಸಾವನ್ನಪ್ಪಿದ್ದಾಳೆ. ಮನೆ ಸ್ವಚ್ಛಗೊಳಿಸುತ್ತಿರುವ ಸಂದರ್ಭದಲ್ಲಿ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುಜರಾತ್ ಮೂಲದ ಖುಷ್ಬೂ ಹಾಗೂ ಆಶೀಶ್ ಇತ್ತೀಚೆಗಷ್ಟೆ ಮದುವೆಯಾಗಿದ್ದು, ದೊಡ್ಡಬನಹಳ್ಳಿಯ ವಿಂಧ್ಯಗಿರಿ ಅಪಾರ್ಟಮೆಂಟ್​ನ 5ನೇ ಮಹಡಿಯಲ್ಲಿ ವಾಸವಾಗಿದ್ದರು. ಆದ್ರೆ, ಇಂದು ಪ್ಲಾಟ್ ಮುಂಭಾಗ ಶೂ ಬಾಕ್ಸ್ ಕ್ಲೀನ್ ಮಾಡುತ್ತಿದ್ದ ವೇಳೆ ಖುಷ್ಬೂ ಆಯಾತಪ್ಪಿ ಕೆಳಗೆ ಬಿದ್ದಿದ್ದಾಳೆ. ಇದರಿಂದ ಗಂಭೀರ ಗಾಯವಾಗಿ ಗಾಯಗೊಂಡಿದ್ದ ಖುಷ್ಬೂ ಅವರನ್ನು ಕೂಡಲೇ ಅಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಬೆಂಗಳೂರು ಪೂರ್ವ ತಾಲ್ಲೂಕಿನ ದೊಡ್ಡಬನಹಳ್ಳಿಯಲ್ಲಿರುವ ವಿಂಧ್ಯಗಿರಿ ಅಪಾರ್ಟ್‌ಮೆಂಟ್ 18 ಮಹಡಿ ಹೊಂದಿದ್ದು, ಇದರಲ್ಲಿ ಆಶೀಶ್ ತ್ರಿವೇದಿ ದಂಪತಿ 5ನೇ ಮಹಡಿಯಲ್ಲಿ ವಾಸವಾಗಿದ್ದರು. ಇನ್ನು ಘಟನೆ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ