AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಶೂ ಬಾಕ್ಸ್​ ಕ್ಲೀನ್ ಮಾಡುವಾಗ 5ನೇ ಮಹಡಿಯಿಂದ ಬಿದ್ದ ಮಹಿಳೆ, ಚಿಕಿತ್ಸೆ ಫಲಕಾರಿಯಾಗದೇ ಸಾವು

ಮಹಿಳೆಯೋರ್ವರು ಆಯಾತಪ್ಪಿ 5ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶೂ ಬಾಕ್ಸ್​ ಕ್ಲೀನ್ ಮಾಡುವಾಗ ಈ ದುರ್ಘಟನೆ ನಡೆದಿದೆ.

ಬೆಂಗಳೂರು: ಶೂ ಬಾಕ್ಸ್​ ಕ್ಲೀನ್ ಮಾಡುವಾಗ 5ನೇ ಮಹಡಿಯಿಂದ ಬಿದ್ದ ಮಹಿಳೆ, ಚಿಕಿತ್ಸೆ ಫಲಕಾರಿಯಾಗದೇ ಸಾವು
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Dec 10, 2023 | 5:08 PM

Share

ಬೆಂಗಳೂರು, (ಡಿಸೆಂಬರ್ 10): 31 ವರ್ಷದ ಮಹಿಳೆಯೋರ್ವರು (Woman) ಅಪಾರ್ಟ್ಮೆಂಟ್​ನ 5ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನ(Bengaluru) ಕಾಡುಗೋಡಿ ಸಮೀಪದ ದೊಡ್ಡಬನಹಳ್ಳಿಯಲ್ಲಿ ನಡೆದಿದೆ, ಖುಷ್ಬೂ ಅಶೀಷ್ ತ್ರಿವೇದಿ ಎನ್ನುವ ಮಹಿಳೆ ದೊಡ್ಡಬನಹಳ್ಳಿಯ ಬಿಡಿಎ ವಿಂಧ್ಯಗಿರಿ ಅಪಾರ್ಟಮೆಂಟ್ ಬಿದ್ದು ಸಾವನ್ನಪ್ಪಿದ್ದಾಳೆ. ಮನೆ ಸ್ವಚ್ಛಗೊಳಿಸುತ್ತಿರುವ ಸಂದರ್ಭದಲ್ಲಿ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುಜರಾತ್ ಮೂಲದ ಖುಷ್ಬೂ ಹಾಗೂ ಆಶೀಶ್ ಇತ್ತೀಚೆಗಷ್ಟೆ ಮದುವೆಯಾಗಿದ್ದು, ದೊಡ್ಡಬನಹಳ್ಳಿಯ ವಿಂಧ್ಯಗಿರಿ ಅಪಾರ್ಟಮೆಂಟ್​ನ 5ನೇ ಮಹಡಿಯಲ್ಲಿ ವಾಸವಾಗಿದ್ದರು. ಆದ್ರೆ, ಇಂದು ಪ್ಲಾಟ್ ಮುಂಭಾಗ ಶೂ ಬಾಕ್ಸ್ ಕ್ಲೀನ್ ಮಾಡುತ್ತಿದ್ದ ವೇಳೆ ಖುಷ್ಬೂ ಆಯಾತಪ್ಪಿ ಕೆಳಗೆ ಬಿದ್ದಿದ್ದಾಳೆ. ಇದರಿಂದ ಗಂಭೀರ ಗಾಯವಾಗಿ ಗಾಯಗೊಂಡಿದ್ದ ಖುಷ್ಬೂ ಅವರನ್ನು ಕೂಡಲೇ ಅಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಬೆಂಗಳೂರು ಪೂರ್ವ ತಾಲ್ಲೂಕಿನ ದೊಡ್ಡಬನಹಳ್ಳಿಯಲ್ಲಿರುವ ವಿಂಧ್ಯಗಿರಿ ಅಪಾರ್ಟ್‌ಮೆಂಟ್ 18 ಮಹಡಿ ಹೊಂದಿದ್ದು, ಇದರಲ್ಲಿ ಆಶೀಶ್ ತ್ರಿವೇದಿ ದಂಪತಿ 5ನೇ ಮಹಡಿಯಲ್ಲಿ ವಾಸವಾಗಿದ್ದರು. ಇನ್ನು ಘಟನೆ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ