AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಣ್ಣರ ಅಂಗಳ ಅಂಗನವಾಡಿಗಳಿಗೆ ಆಸರೆಯಾಗಲು ಮುಂದಾದ ಗುಂಡೂರಾವ್ ಪುತ್ರಿ ಅನನ್ಯ ರಾವ್

ರಾಜ್ಯದ ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಫೌಂಡೇಶನ್ ವತಿಯಿಂದಲೇ ಅಂಗನವಾಡಿಳಿಗೆ ಕಾಯಕಲ್ಪ ನೀಡಲು ಯೋಜನೆ ರೂಪಿಸಿದ್ದಾರೆ. ಗಾಂಧಿನಗರದ 85 ಅಂಗನವಾಡಿಗಳನ್ನ ಗುರುತಿಸಲಾಗಿದ್ದು, ಪ್ರತಿಯೊಂದು ಅಂಗನವಾಡಿಗಳನ್ನ ಸುವ್ಯವಸ್ಥೆಗೆ ತರಲು ನಿರ್ಧರಿಸಲಾಗಿದೆ.‌

ಚಿಣ್ಣರ ಅಂಗಳ ಅಂಗನವಾಡಿಗಳಿಗೆ ಆಸರೆಯಾಗಲು ಮುಂದಾದ ಗುಂಡೂರಾವ್ ಪುತ್ರಿ ಅನನ್ಯ ರಾವ್
ಸಚಿವ ದಿನೇಶ್ ಗುಂಡೂರಾವ್, ಪುತ್ರಿ ಅನನ್ಯ ರಾವ್
ಗಂಗಾಧರ​ ಬ. ಸಾಬೋಜಿ
|

Updated on:Aug 23, 2023 | 7:20 PM

Share

ಬೆಂಗಳೂರು, ಆಗಸ್ಟ್​ 23: ಬಡ ಮಕ್ಕಳ ನಲಿ ಕಲಿ ತಾಣ. ಚಿಣ್ಣರ ಅಂಗನವಾಡಿಗಳಿಗೆ ಚೆಂದದ ರೂಪ ನೀಡಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರ ಪುತ್ರಿ ಅನನ್ಯ ರಾವ್ ಮಹತ್ವದ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.‌ ರಾಜ್ಯದ ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಫೌಂಡೇಶನ್ ವತಿಯಿಂದಲೇ ಅಂಗನವಾಡಿಳಿಗೆ ಕಾಯಕಲ್ಪ ನೀಡಲು ಯೋಜನೆ ರೂಪಿಸಿದ್ದಾರೆ. ಗಾಂಧಿನಗರದ 85 ಅಂಗನವಾಡಿಗಳನ್ನ ಗುರುತಿಸಲಾಗಿದ್ದು, ಪ್ರತಿಯೊಂದು ಅಂಗನವಾಡಿಗಳನ್ನ ಸುವ್ಯವಸ್ಥೆಗೆ ತರಲು ನಿರ್ಧರಿಸಲಾಗಿದೆ.‌

ದುಸ್ಥಿಯಲ್ಲಿರುವ ಅಂಗನವಾಡಿಗಳನ್ನ ಆದ್ಯತೆಯ ಮೇರೆಗೆ ಮೊದಲು ಪುನಶ್ಚೇತನಗೊಳಿಸಲು ಯೋಜಿಸಲಾಗಿದೆ. ಅದಕ್ಕಾಗಿ ಪ್ರತಿ ಅಂಗನವಾಡಿಗೆ ತಗುಲುವ 2 ಲಕ್ಷ ರೂ. ವರೆಗಿನ ವೆಚ್ಚವನ್ನ ಆರ್ ಗುಂಡೂರಾವ್ ಫೌಂಡೇಶನ್ ವತಿಯಿಂದಲೇ ಭರಿಸಲು ಅನನ್ಯ ರಾವ್ ಮುಂದಾಗಿದ್ದಾರೆ.

ಆರ್. ಗುಂಡೂರಾವ್ ಫೌಂಡೇಶನ್ ಕಾರ್ಯಗಳನ್ನ ನೋಡಿಕೊಳ್ಳುತ್ತಿರುವ ಅನನ್ಯ ರಾವ್, ಅಂಗನವಾಡಿಗಳಿಗೆ ಆಸರೆಯಾಗಬೇಕು ಎಂಬ ಆಲೋಚನೆಯನ್ನ ತಮ್ಮ ತಂದೆ ದಿನೇಶ್ ಗುಂಡೂರಾವ್ ಬಳಿ ವ್ಯಕ್ತಪಡಿಸಿದ್ದರು. ಅಲ್ಲದೇ ಆರ್. ಗುಂಡೂರಾವ್ ಅವರ 30 ನೇ ಪುಣ್ಯ ಸ್ಮರಣೆಯ ಅಂಗವಾಗಿ ಮಾದರಿ ಅಂಗನವಾಡಿಯನ್ನೂ ದಿನೇಶ್ ಗುಂಡೂರಾವ್ ಅವರಿಂದ ಲೋಕಾರ್ಪಣೆಗೊಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಶಾಲೆಗಳಲ್ಲಿಯೂ ಆರಂಭವಾಗಲಿವೆ ಎಲ್​​ಕೆಜಿ, ಯುಕೆಜಿ; 262 ಶಾಲೆಗಳಲ್ಲಿ ಆರಂಭಕ್ಕೆ ಸಿಕ್ತು ಗ್ರೀನ್ ಸಿಗ್ನಲ್

ಚಿಣ್ಣರ ಅಂಗಳ ಅಂಗನವಾಡಿಗಳು ಚೆಂದವಾಗಿರಬೇಕು. ಅಂಗನವಾಡಿಗಳು ಉತ್ತಮಗೊಂಡಷ್ಟೂ, ಮಕ್ಕಳಲ್ಲಿ ಆರಂಭದಲ್ಲಿಯೇ ಕಲಿಕಾ ಮನೋಭಾವ ಬೆಳೆಸಬಹುದು ಎಂಬ ಅಭಿಪ್ರಾಯವನ್ನ ಅನನ್ಯ ಅವರು ದಿನೇಶ್ ಗುಂಡೂರಾವ್ ಅವರ ಬಳಿ ವ್ಯಕ್ತಪಡಿಸಿದ್ದರು.

ಅಲ್ಲದೇ ಈ ಕಾರ್ಯಕ್ಕೆ ರಾಜ್ಯದ ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಕೂಡ ಪ್ರೇರಣೆಯಾಗಿದ್ದಾರೆ. ಸಾಮಾನ್ಯ ಶಿಕ್ಷಕ ಕುಟುಂಬದಲ್ಲಿ ಜನಿಸಿದ್ದ ಆರ್. ಗುಂಡೂರಾವ್ ಶಿಕ್ಷಣದ ವಿಚಾರಗಳಿಗೆ ಹೆಚ್ಚು ಒತ್ತು ನೀಡುತ್ತಿದ್ದರು. ಅವರ ಸ್ಮರಣೆಯಲ್ಲಿ ಅಂಗನವಾಡಿಗಳಿಂದಲೇ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನ ಅವರ ಹೆಸರಿನ ಫೌಂಡೇಷನ್​ನಿಂದ ನೆರವೇರಿಸಬೇಕು ಎಂಬ ಅನನ್ಯ ಅವರ ಆಶಯಕ್ಕೆ ಸಚಿವ ದಿನೇಶ್ ಗುಂಡೂರಾವ್ ಬೆನ್ನುತಟ್ಟಿ ಬೆಂಬಲಿಸಿದ್ದಾರೆ.

ಅಂಗನವಾಡಿಗಳ ದುರಸ್ಥಿ ಕಾರ್ಯ ಕೈಗೆತ್ತಿಕೊಳ್ಳುವುದರ ಜೊತೆಗೆ, ಗೋಡೆಗಳಿಗೆ ಬಣ್ಣದರ್ಪಣ, ಚೆಂದದ ಚಿತ್ತಾರಗಳನ್ನ ಬಿಡಿಸಲು ಸಲಹೆ ನೀಡಿದ್ದಾರೆ.‌ ಪ್ರತಿ ಅಂಗನವಾಡಿಗಳಿಗೂ ಅಗತ್ಯ ಪರಿಕರಗಳು, ಆಟೋಪಕರಣಗಳನ್ನ ಫೌಂಡೇಶನ್ ವತಿಯಿಂದ ನೀಡಲು ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ: ಕೈ ಕೊಟ್ಟ ಮುಂಗಾರು, ನೀರಿಗಾಗಿ ಬೀದಿಗಿಳಿದು ರೈತರ ಹೋರಾಟ

ವಿಶೇಷವಾಗಿ ಸೃಜನಾತ್ಮಕ ಗುಣಮಟ್ಟದ ಶಿಕ್ಷಣ ಅಗತ್ಯ. ಅಂಗನವಾಡಿಗಳಿಗೆ 15 ರಿಂದ 20 ಮಕ್ಕಳು ಬಂದರು, ಅವರು ಬಡ ಕುಟುಂಬಗಳಿಂದ ಬಂದವರಾಗಿದ್ದು, ಗುಣಮಟ್ಟದ ಶಿಕ್ಷಣದಿಂದ ಹಿಂದುಳಿಯಬಾರದು. ವಿಭಿನ್ನ ತಂತ್ರಗಳ ಮೂಲಕ ಹೆಸರಾಂತ ಶಿಕ್ಷಣ ಸಂಸ್ಥೆಗಳಲ್ಲಿ ಸಿಗುವ ಶಿಕ್ಷಣ ಬಡ ಮಕ್ಕಳಿಗೂ ಸಿಗಬೇಕು.

ಈ ನಿಟ್ಟಿನಲ್ಲಿ ಅಗತ್ಯ ಪಾಠೋಪಕರಣಗಳನ್ನ ನೀಡುವುದರ ಜೊತೆಗೆ, ಶಿಕ್ಷಕರಿಗೂ ತರಬೇತಿ ನೀಡುವಂತೆ ದಿನೇಶ್ ಗುಂಡೂರಾವ್ ಫೌಂಡೇಷನ್​ಗೆ ಸಲಹೆ ನೀಡಿದ್ದಾರೆ. ನೂರಿತ ತಜ್ಞರನ್ನ ಕರೆಸಿ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ಕಾರ್ಯಕ್ರಮಗಳನ್ನೂ ಆರ್. ಗುಂಡೂರಾವ್ ಫೌಂಡೇಶನ್ ವತಿಯಿಂದ ಹಮ್ಮಿಕೊಳ್ಳಲು ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:19 pm, Wed, 23 August 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?