AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಜಿಮ್​ಗಳಿಗೆ ಮಾರ್ಗಸೂಚಿ ನೀಡಲಾಗುವುದು: ಸಚಿವ ಕೆ ಸುಧಾಕರ್ ಹೇಳಿಕೆ

Gym Guidelines: ಜಿಮ್​​ ಮಾಡುವುದು ಸರಿ, ತಪ್ಪು ಎಂಬ ಆತಂಕಗಳು ಬೇಡ. ಹೃದಯರೋಗ ತಜ್ಞರಿಂದ ಅಭಿಪ್ರಾಯ ಪಡೆದು ಗೈಡ್​ಲೈನ್ಸ್ ಬಿಡುಗಡೆ ಮಾಡಲಾಗುವುದು. ಸಂಪೂರ್ಣ ಮಾಹಿತಿಯೊಂದಿಗೆ ಗೈಡ್​ಲೈನ್ಸ್ ಸಿದ್ಧಪಡಿಸ್ತೇವೆ ಎಂದು ಸುಧಾಕರ್ ತಿಳಿಸಿದ್ದಾರೆ.

ಕರ್ನಾಟಕದ ಜಿಮ್​ಗಳಿಗೆ ಮಾರ್ಗಸೂಚಿ ನೀಡಲಾಗುವುದು: ಸಚಿವ ಕೆ ಸುಧಾಕರ್ ಹೇಳಿಕೆ
ಡಾ. ಕೆ. ಸುಧಾಕರ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 31, 2021 | 4:57 PM

Share

ಚಿಕ್ಕಬಳ್ಳಾಪುರ: ಜಿಮ್​ ಮಾಡುವ ಯುವಕರಿಗೆ ಕರ್ನಾಟಕ ಆರೋಗ್ಯ ಸಚಿವ ಸುಧಾಕರ್ ಕಿವಿಮಾತು ಹೇಳಿದ್ದಾರೆ. ಕರ್ನಾಟಕ ರಾಜ್ಯದ ಜಿಮ್​ಗಳಿಗೆ ಮಾರ್ಗಸೂಚಿಯನ್ನ ನೀಡಲಾಗುತ್ತದೆ. ಪುನೀತ್​ ರಾಜ್​ಕುಮಾರ್ ನಿಧನದ ಬಳಿಕ ಕೆಲವರು ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಆದರೆ, ಒಂದೆರಡು ಘಟನೆಗಳಿಂದ ಆತಂಕಕ್ಕೊಳಗಾಗುವುದು ಬೇಡ. ಜಿಮ್​​ ಮಾಡುವುದು ಸರಿ, ತಪ್ಪು ಎಂಬ ಆತಂಕಗಳು ಬೇಡ. ಹೃದಯರೋಗ ತಜ್ಞರಿಂದ ಅಭಿಪ್ರಾಯ ಪಡೆದು ಗೈಡ್​ಲೈನ್ಸ್ ಬಿಡುಗಡೆ ಮಾಡಲಾಗುವುದು. ಸಂಪೂರ್ಣ ಮಾಹಿತಿಯೊಂದಿಗೆ ಗೈಡ್​ಲೈನ್ಸ್ ಸಿದ್ಧಪಡಿಸ್ತೇವೆ ಎಂದು ಸುಧಾಕರ್ ತಿಳಿಸಿದ್ದಾರೆ.

ಪರಿಣಿತ ತರಬೇತಿದಾರರು, ಸಾಮಗ್ರಿಗಳ ಬಗ್ಗೆ ಗೈಡ್​​ಲೈನ್ಸ್​ ಬಿಡುಗಡೆ ಮಾಡಲಾಗುವುದು. ದೇಶ ವಿದೇಶದ ಖ್ಯಾತ ವೈದ್ಯರ ಬಳಿ ಮಾಹಿತಿ ಪಡೆಯುತ್ತೇವೆ ಎಂದು ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿಕೆ ನೀಡಿದ್ದಾರೆ. ಪುನೀತ್ ರಾಜ್​ಕುಮಾರ್ ನಿಧನದ ಬಳಿಕ ಜಿಮ್ ಮಾಡುವ ಬಗ್ಗೆ ಹಲವು ಪ್ರಶ್ನೆಗಳು ಕೇಳಿಬಂದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಕೂಡ ಜಿಮ್ ಬಗ್ಗೆ ವಿವಿಧ ಅಭಿಪ್ರಾಯಗಳು ವ್ಯಕ್ತವಾಗಿತ್ತು.

ಪುನೀತ್​ ರಾಜ್​ಕುಮಾರ್ ನನ್ನ ಜಿಮ್​ ಮೇಟ್​ ಆಗಿದ್ದರು: ಸುಧಾಕರ್ ಪುನೀತ್ ರಾಜ್​ಕುಮಾರ್​ ಸಾವು ಅರಗಿಸಿಕೊಳ್ಳಲು ಆಗುತ್ತಿಲ್ಲ. ಪುನೀತ್​ ರಾಜ್​ಕುಮಾರ್ ನನ್ನ ಜಿಮ್​ ಮೇಟ್​ ಆಗಿದ್ದರು. ಪುನೀತ್​ ಅವರ ವರ್ಕೌಟ್​ ನೋಡ್ತಿದ್ರೆ ಆಶ್ಚರ್ಯವಾಗ್ತಿತ್ತು. ನಟ ಪುನೀತ್​​ ಅವರ ಜೀವನ ಶೈಲಿ ಎಲ್ಲವೂ ಚೆನ್ನಾಗಿತ್ತು. ಪುನೀತ್ ಅವರಿಗೆ ಯಾವುದೆ ದುರಭ್ಯಾಸಗಳು ಇರಲಿಲ್ಲ. ಕುಟಂಬಸ್ಥರಿಗೆ ಆ ಭಗವಂತನೇ ಆತ್ಮಸ್ಥೈರ್ಯ ನೀಡಬೇಕು ಎಂದು ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ‘ಪುನೀತ್ ಜಿಮ್​ಗೆ ತೆರಳಿರಲಿಲ್ಲ’; ಮೃತಪಡುವುದಕ್ಕೂ ಮೊದಲು ನಡೆದಿದ್ದೇನು? ಕಣ್ಣೀರಿಡುತ್ತಲೇ ವಿವರಿಸಿದ ಅಪ್ಪು ಅಂಗರಕ್ಷಕ

ಇದನ್ನೂ ಓದಿ: ಜಿಮ್​ನಲ್ಲಿ ಪುನೀತ್ ರಾಜ್​ಕುಮಾರ್ ವರ್ಕೌಟ್​​: ಹೇಗಿರುತ್ತಿತ್ತು ಗೊತ್ತಾ ಅಪ್ಪು ಕಸರತ್ತು​? ಇಲ್ಲಿದೆ ವಿಡಿಯೋ​

ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ