AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಜಿಮ್​ಗಳಿಗೆ ಮಾರ್ಗಸೂಚಿ ನೀಡಲಾಗುವುದು: ಸಚಿವ ಕೆ ಸುಧಾಕರ್ ಹೇಳಿಕೆ

Gym Guidelines: ಜಿಮ್​​ ಮಾಡುವುದು ಸರಿ, ತಪ್ಪು ಎಂಬ ಆತಂಕಗಳು ಬೇಡ. ಹೃದಯರೋಗ ತಜ್ಞರಿಂದ ಅಭಿಪ್ರಾಯ ಪಡೆದು ಗೈಡ್​ಲೈನ್ಸ್ ಬಿಡುಗಡೆ ಮಾಡಲಾಗುವುದು. ಸಂಪೂರ್ಣ ಮಾಹಿತಿಯೊಂದಿಗೆ ಗೈಡ್​ಲೈನ್ಸ್ ಸಿದ್ಧಪಡಿಸ್ತೇವೆ ಎಂದು ಸುಧಾಕರ್ ತಿಳಿಸಿದ್ದಾರೆ.

ಕರ್ನಾಟಕದ ಜಿಮ್​ಗಳಿಗೆ ಮಾರ್ಗಸೂಚಿ ನೀಡಲಾಗುವುದು: ಸಚಿವ ಕೆ ಸುಧಾಕರ್ ಹೇಳಿಕೆ
ಡಾ. ಕೆ. ಸುಧಾಕರ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 31, 2021 | 4:57 PM

Share

ಚಿಕ್ಕಬಳ್ಳಾಪುರ: ಜಿಮ್​ ಮಾಡುವ ಯುವಕರಿಗೆ ಕರ್ನಾಟಕ ಆರೋಗ್ಯ ಸಚಿವ ಸುಧಾಕರ್ ಕಿವಿಮಾತು ಹೇಳಿದ್ದಾರೆ. ಕರ್ನಾಟಕ ರಾಜ್ಯದ ಜಿಮ್​ಗಳಿಗೆ ಮಾರ್ಗಸೂಚಿಯನ್ನ ನೀಡಲಾಗುತ್ತದೆ. ಪುನೀತ್​ ರಾಜ್​ಕುಮಾರ್ ನಿಧನದ ಬಳಿಕ ಕೆಲವರು ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಆದರೆ, ಒಂದೆರಡು ಘಟನೆಗಳಿಂದ ಆತಂಕಕ್ಕೊಳಗಾಗುವುದು ಬೇಡ. ಜಿಮ್​​ ಮಾಡುವುದು ಸರಿ, ತಪ್ಪು ಎಂಬ ಆತಂಕಗಳು ಬೇಡ. ಹೃದಯರೋಗ ತಜ್ಞರಿಂದ ಅಭಿಪ್ರಾಯ ಪಡೆದು ಗೈಡ್​ಲೈನ್ಸ್ ಬಿಡುಗಡೆ ಮಾಡಲಾಗುವುದು. ಸಂಪೂರ್ಣ ಮಾಹಿತಿಯೊಂದಿಗೆ ಗೈಡ್​ಲೈನ್ಸ್ ಸಿದ್ಧಪಡಿಸ್ತೇವೆ ಎಂದು ಸುಧಾಕರ್ ತಿಳಿಸಿದ್ದಾರೆ.

ಪರಿಣಿತ ತರಬೇತಿದಾರರು, ಸಾಮಗ್ರಿಗಳ ಬಗ್ಗೆ ಗೈಡ್​​ಲೈನ್ಸ್​ ಬಿಡುಗಡೆ ಮಾಡಲಾಗುವುದು. ದೇಶ ವಿದೇಶದ ಖ್ಯಾತ ವೈದ್ಯರ ಬಳಿ ಮಾಹಿತಿ ಪಡೆಯುತ್ತೇವೆ ಎಂದು ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿಕೆ ನೀಡಿದ್ದಾರೆ. ಪುನೀತ್ ರಾಜ್​ಕುಮಾರ್ ನಿಧನದ ಬಳಿಕ ಜಿಮ್ ಮಾಡುವ ಬಗ್ಗೆ ಹಲವು ಪ್ರಶ್ನೆಗಳು ಕೇಳಿಬಂದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಕೂಡ ಜಿಮ್ ಬಗ್ಗೆ ವಿವಿಧ ಅಭಿಪ್ರಾಯಗಳು ವ್ಯಕ್ತವಾಗಿತ್ತು.

ಪುನೀತ್​ ರಾಜ್​ಕುಮಾರ್ ನನ್ನ ಜಿಮ್​ ಮೇಟ್​ ಆಗಿದ್ದರು: ಸುಧಾಕರ್ ಪುನೀತ್ ರಾಜ್​ಕುಮಾರ್​ ಸಾವು ಅರಗಿಸಿಕೊಳ್ಳಲು ಆಗುತ್ತಿಲ್ಲ. ಪುನೀತ್​ ರಾಜ್​ಕುಮಾರ್ ನನ್ನ ಜಿಮ್​ ಮೇಟ್​ ಆಗಿದ್ದರು. ಪುನೀತ್​ ಅವರ ವರ್ಕೌಟ್​ ನೋಡ್ತಿದ್ರೆ ಆಶ್ಚರ್ಯವಾಗ್ತಿತ್ತು. ನಟ ಪುನೀತ್​​ ಅವರ ಜೀವನ ಶೈಲಿ ಎಲ್ಲವೂ ಚೆನ್ನಾಗಿತ್ತು. ಪುನೀತ್ ಅವರಿಗೆ ಯಾವುದೆ ದುರಭ್ಯಾಸಗಳು ಇರಲಿಲ್ಲ. ಕುಟಂಬಸ್ಥರಿಗೆ ಆ ಭಗವಂತನೇ ಆತ್ಮಸ್ಥೈರ್ಯ ನೀಡಬೇಕು ಎಂದು ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ‘ಪುನೀತ್ ಜಿಮ್​ಗೆ ತೆರಳಿರಲಿಲ್ಲ’; ಮೃತಪಡುವುದಕ್ಕೂ ಮೊದಲು ನಡೆದಿದ್ದೇನು? ಕಣ್ಣೀರಿಡುತ್ತಲೇ ವಿವರಿಸಿದ ಅಪ್ಪು ಅಂಗರಕ್ಷಕ

ಇದನ್ನೂ ಓದಿ: ಜಿಮ್​ನಲ್ಲಿ ಪುನೀತ್ ರಾಜ್​ಕುಮಾರ್ ವರ್ಕೌಟ್​​: ಹೇಗಿರುತ್ತಿತ್ತು ಗೊತ್ತಾ ಅಪ್ಪು ಕಸರತ್ತು​? ಇಲ್ಲಿದೆ ವಿಡಿಯೋ​

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು