AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಜಿಮ್​ಗಳಿಗೆ ಮಾರ್ಗಸೂಚಿ ನೀಡಲಾಗುವುದು: ಸಚಿವ ಕೆ ಸುಧಾಕರ್ ಹೇಳಿಕೆ

Gym Guidelines: ಜಿಮ್​​ ಮಾಡುವುದು ಸರಿ, ತಪ್ಪು ಎಂಬ ಆತಂಕಗಳು ಬೇಡ. ಹೃದಯರೋಗ ತಜ್ಞರಿಂದ ಅಭಿಪ್ರಾಯ ಪಡೆದು ಗೈಡ್​ಲೈನ್ಸ್ ಬಿಡುಗಡೆ ಮಾಡಲಾಗುವುದು. ಸಂಪೂರ್ಣ ಮಾಹಿತಿಯೊಂದಿಗೆ ಗೈಡ್​ಲೈನ್ಸ್ ಸಿದ್ಧಪಡಿಸ್ತೇವೆ ಎಂದು ಸುಧಾಕರ್ ತಿಳಿಸಿದ್ದಾರೆ.

ಕರ್ನಾಟಕದ ಜಿಮ್​ಗಳಿಗೆ ಮಾರ್ಗಸೂಚಿ ನೀಡಲಾಗುವುದು: ಸಚಿವ ಕೆ ಸುಧಾಕರ್ ಹೇಳಿಕೆ
ಡಾ. ಕೆ. ಸುಧಾಕರ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 31, 2021 | 4:57 PM

Share

ಚಿಕ್ಕಬಳ್ಳಾಪುರ: ಜಿಮ್​ ಮಾಡುವ ಯುವಕರಿಗೆ ಕರ್ನಾಟಕ ಆರೋಗ್ಯ ಸಚಿವ ಸುಧಾಕರ್ ಕಿವಿಮಾತು ಹೇಳಿದ್ದಾರೆ. ಕರ್ನಾಟಕ ರಾಜ್ಯದ ಜಿಮ್​ಗಳಿಗೆ ಮಾರ್ಗಸೂಚಿಯನ್ನ ನೀಡಲಾಗುತ್ತದೆ. ಪುನೀತ್​ ರಾಜ್​ಕುಮಾರ್ ನಿಧನದ ಬಳಿಕ ಕೆಲವರು ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಆದರೆ, ಒಂದೆರಡು ಘಟನೆಗಳಿಂದ ಆತಂಕಕ್ಕೊಳಗಾಗುವುದು ಬೇಡ. ಜಿಮ್​​ ಮಾಡುವುದು ಸರಿ, ತಪ್ಪು ಎಂಬ ಆತಂಕಗಳು ಬೇಡ. ಹೃದಯರೋಗ ತಜ್ಞರಿಂದ ಅಭಿಪ್ರಾಯ ಪಡೆದು ಗೈಡ್​ಲೈನ್ಸ್ ಬಿಡುಗಡೆ ಮಾಡಲಾಗುವುದು. ಸಂಪೂರ್ಣ ಮಾಹಿತಿಯೊಂದಿಗೆ ಗೈಡ್​ಲೈನ್ಸ್ ಸಿದ್ಧಪಡಿಸ್ತೇವೆ ಎಂದು ಸುಧಾಕರ್ ತಿಳಿಸಿದ್ದಾರೆ.

ಪರಿಣಿತ ತರಬೇತಿದಾರರು, ಸಾಮಗ್ರಿಗಳ ಬಗ್ಗೆ ಗೈಡ್​​ಲೈನ್ಸ್​ ಬಿಡುಗಡೆ ಮಾಡಲಾಗುವುದು. ದೇಶ ವಿದೇಶದ ಖ್ಯಾತ ವೈದ್ಯರ ಬಳಿ ಮಾಹಿತಿ ಪಡೆಯುತ್ತೇವೆ ಎಂದು ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿಕೆ ನೀಡಿದ್ದಾರೆ. ಪುನೀತ್ ರಾಜ್​ಕುಮಾರ್ ನಿಧನದ ಬಳಿಕ ಜಿಮ್ ಮಾಡುವ ಬಗ್ಗೆ ಹಲವು ಪ್ರಶ್ನೆಗಳು ಕೇಳಿಬಂದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಕೂಡ ಜಿಮ್ ಬಗ್ಗೆ ವಿವಿಧ ಅಭಿಪ್ರಾಯಗಳು ವ್ಯಕ್ತವಾಗಿತ್ತು.

ಪುನೀತ್​ ರಾಜ್​ಕುಮಾರ್ ನನ್ನ ಜಿಮ್​ ಮೇಟ್​ ಆಗಿದ್ದರು: ಸುಧಾಕರ್ ಪುನೀತ್ ರಾಜ್​ಕುಮಾರ್​ ಸಾವು ಅರಗಿಸಿಕೊಳ್ಳಲು ಆಗುತ್ತಿಲ್ಲ. ಪುನೀತ್​ ರಾಜ್​ಕುಮಾರ್ ನನ್ನ ಜಿಮ್​ ಮೇಟ್​ ಆಗಿದ್ದರು. ಪುನೀತ್​ ಅವರ ವರ್ಕೌಟ್​ ನೋಡ್ತಿದ್ರೆ ಆಶ್ಚರ್ಯವಾಗ್ತಿತ್ತು. ನಟ ಪುನೀತ್​​ ಅವರ ಜೀವನ ಶೈಲಿ ಎಲ್ಲವೂ ಚೆನ್ನಾಗಿತ್ತು. ಪುನೀತ್ ಅವರಿಗೆ ಯಾವುದೆ ದುರಭ್ಯಾಸಗಳು ಇರಲಿಲ್ಲ. ಕುಟಂಬಸ್ಥರಿಗೆ ಆ ಭಗವಂತನೇ ಆತ್ಮಸ್ಥೈರ್ಯ ನೀಡಬೇಕು ಎಂದು ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ‘ಪುನೀತ್ ಜಿಮ್​ಗೆ ತೆರಳಿರಲಿಲ್ಲ’; ಮೃತಪಡುವುದಕ್ಕೂ ಮೊದಲು ನಡೆದಿದ್ದೇನು? ಕಣ್ಣೀರಿಡುತ್ತಲೇ ವಿವರಿಸಿದ ಅಪ್ಪು ಅಂಗರಕ್ಷಕ

ಇದನ್ನೂ ಓದಿ: ಜಿಮ್​ನಲ್ಲಿ ಪುನೀತ್ ರಾಜ್​ಕುಮಾರ್ ವರ್ಕೌಟ್​​: ಹೇಗಿರುತ್ತಿತ್ತು ಗೊತ್ತಾ ಅಪ್ಪು ಕಸರತ್ತು​? ಇಲ್ಲಿದೆ ವಿಡಿಯೋ​

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ