AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಜಿಮ್​ಗಳಿಗೆ ಮಾರ್ಗಸೂಚಿ ನೀಡಲಾಗುವುದು: ಸಚಿವ ಕೆ ಸುಧಾಕರ್ ಹೇಳಿಕೆ

Gym Guidelines: ಜಿಮ್​​ ಮಾಡುವುದು ಸರಿ, ತಪ್ಪು ಎಂಬ ಆತಂಕಗಳು ಬೇಡ. ಹೃದಯರೋಗ ತಜ್ಞರಿಂದ ಅಭಿಪ್ರಾಯ ಪಡೆದು ಗೈಡ್​ಲೈನ್ಸ್ ಬಿಡುಗಡೆ ಮಾಡಲಾಗುವುದು. ಸಂಪೂರ್ಣ ಮಾಹಿತಿಯೊಂದಿಗೆ ಗೈಡ್​ಲೈನ್ಸ್ ಸಿದ್ಧಪಡಿಸ್ತೇವೆ ಎಂದು ಸುಧಾಕರ್ ತಿಳಿಸಿದ್ದಾರೆ.

ಕರ್ನಾಟಕದ ಜಿಮ್​ಗಳಿಗೆ ಮಾರ್ಗಸೂಚಿ ನೀಡಲಾಗುವುದು: ಸಚಿವ ಕೆ ಸುಧಾಕರ್ ಹೇಳಿಕೆ
ಡಾ. ಕೆ. ಸುಧಾಕರ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 31, 2021 | 4:57 PM

Share

ಚಿಕ್ಕಬಳ್ಳಾಪುರ: ಜಿಮ್​ ಮಾಡುವ ಯುವಕರಿಗೆ ಕರ್ನಾಟಕ ಆರೋಗ್ಯ ಸಚಿವ ಸುಧಾಕರ್ ಕಿವಿಮಾತು ಹೇಳಿದ್ದಾರೆ. ಕರ್ನಾಟಕ ರಾಜ್ಯದ ಜಿಮ್​ಗಳಿಗೆ ಮಾರ್ಗಸೂಚಿಯನ್ನ ನೀಡಲಾಗುತ್ತದೆ. ಪುನೀತ್​ ರಾಜ್​ಕುಮಾರ್ ನಿಧನದ ಬಳಿಕ ಕೆಲವರು ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಆದರೆ, ಒಂದೆರಡು ಘಟನೆಗಳಿಂದ ಆತಂಕಕ್ಕೊಳಗಾಗುವುದು ಬೇಡ. ಜಿಮ್​​ ಮಾಡುವುದು ಸರಿ, ತಪ್ಪು ಎಂಬ ಆತಂಕಗಳು ಬೇಡ. ಹೃದಯರೋಗ ತಜ್ಞರಿಂದ ಅಭಿಪ್ರಾಯ ಪಡೆದು ಗೈಡ್​ಲೈನ್ಸ್ ಬಿಡುಗಡೆ ಮಾಡಲಾಗುವುದು. ಸಂಪೂರ್ಣ ಮಾಹಿತಿಯೊಂದಿಗೆ ಗೈಡ್​ಲೈನ್ಸ್ ಸಿದ್ಧಪಡಿಸ್ತೇವೆ ಎಂದು ಸುಧಾಕರ್ ತಿಳಿಸಿದ್ದಾರೆ.

ಪರಿಣಿತ ತರಬೇತಿದಾರರು, ಸಾಮಗ್ರಿಗಳ ಬಗ್ಗೆ ಗೈಡ್​​ಲೈನ್ಸ್​ ಬಿಡುಗಡೆ ಮಾಡಲಾಗುವುದು. ದೇಶ ವಿದೇಶದ ಖ್ಯಾತ ವೈದ್ಯರ ಬಳಿ ಮಾಹಿತಿ ಪಡೆಯುತ್ತೇವೆ ಎಂದು ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿಕೆ ನೀಡಿದ್ದಾರೆ. ಪುನೀತ್ ರಾಜ್​ಕುಮಾರ್ ನಿಧನದ ಬಳಿಕ ಜಿಮ್ ಮಾಡುವ ಬಗ್ಗೆ ಹಲವು ಪ್ರಶ್ನೆಗಳು ಕೇಳಿಬಂದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಕೂಡ ಜಿಮ್ ಬಗ್ಗೆ ವಿವಿಧ ಅಭಿಪ್ರಾಯಗಳು ವ್ಯಕ್ತವಾಗಿತ್ತು.

ಪುನೀತ್​ ರಾಜ್​ಕುಮಾರ್ ನನ್ನ ಜಿಮ್​ ಮೇಟ್​ ಆಗಿದ್ದರು: ಸುಧಾಕರ್ ಪುನೀತ್ ರಾಜ್​ಕುಮಾರ್​ ಸಾವು ಅರಗಿಸಿಕೊಳ್ಳಲು ಆಗುತ್ತಿಲ್ಲ. ಪುನೀತ್​ ರಾಜ್​ಕುಮಾರ್ ನನ್ನ ಜಿಮ್​ ಮೇಟ್​ ಆಗಿದ್ದರು. ಪುನೀತ್​ ಅವರ ವರ್ಕೌಟ್​ ನೋಡ್ತಿದ್ರೆ ಆಶ್ಚರ್ಯವಾಗ್ತಿತ್ತು. ನಟ ಪುನೀತ್​​ ಅವರ ಜೀವನ ಶೈಲಿ ಎಲ್ಲವೂ ಚೆನ್ನಾಗಿತ್ತು. ಪುನೀತ್ ಅವರಿಗೆ ಯಾವುದೆ ದುರಭ್ಯಾಸಗಳು ಇರಲಿಲ್ಲ. ಕುಟಂಬಸ್ಥರಿಗೆ ಆ ಭಗವಂತನೇ ಆತ್ಮಸ್ಥೈರ್ಯ ನೀಡಬೇಕು ಎಂದು ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ‘ಪುನೀತ್ ಜಿಮ್​ಗೆ ತೆರಳಿರಲಿಲ್ಲ’; ಮೃತಪಡುವುದಕ್ಕೂ ಮೊದಲು ನಡೆದಿದ್ದೇನು? ಕಣ್ಣೀರಿಡುತ್ತಲೇ ವಿವರಿಸಿದ ಅಪ್ಪು ಅಂಗರಕ್ಷಕ

ಇದನ್ನೂ ಓದಿ: ಜಿಮ್​ನಲ್ಲಿ ಪುನೀತ್ ರಾಜ್​ಕುಮಾರ್ ವರ್ಕೌಟ್​​: ಹೇಗಿರುತ್ತಿತ್ತು ಗೊತ್ತಾ ಅಪ್ಪು ಕಸರತ್ತು​? ಇಲ್ಲಿದೆ ವಿಡಿಯೋ​

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!