AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಸಾಲಗಾರರ ಕಾಟ ತಾಳಲಾರದೆ ಜಿಮ್​ ಮಾಲೀಕ ಆತ್ಮಹತ್ಯೆ

ಕಮ್ಮಗೊಂಡನಹಳ್ಳಿ ಮುಖ್ಯರಸ್ತೆಯಲ್ಲಿ ಜಿಮ್ ನಡೆಸ್ತಿದ್ದ ಮನೋಹರ್, ಕೊವಿಡ್ ಸಂದರ್ಭದಲ್ಲಿ ಆರ್ಥಿಕ ನಷ್ಟಕ್ಕೊಳಗಾಗಿದ್ದರು. ಹರೀಶ್, ಮಂಜುನಾಥ್ ಪ್ರಸಾದ್, ರಾಜು ಎಂಬುವವರ ಬಳಿ ಸಾಲ ಪಡೆದಿದ್ದರು.

Crime News: ಸಾಲಗಾರರ ಕಾಟ ತಾಳಲಾರದೆ ಜಿಮ್​ ಮಾಲೀಕ ಆತ್ಮಹತ್ಯೆ
ಮನೋಹರ್
TV9 Web
| Edited By: |

Updated on:Aug 31, 2022 | 9:39 AM

Share

ಬೆಂಗಳೂರು: ಸಾಲಗಾರರ ಕಾಟ ತಾಳಲಾರದೆ ಜಿಮ್​ ಮಾಲೀಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಅಬ್ಬಿಗೆರೆ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮನೆಯಲ್ಲಿ ನೇಣುಬಿಗಿದುಕೊಂಡು ಮನೋಹರ್(31) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಮ್ಮಗೊಂಡನಹಳ್ಳಿ ಮುಖ್ಯರಸ್ತೆಯಲ್ಲಿ ಜಿಮ್ ನಡೆಸ್ತಿದ್ದ ಮನೋಹರ್, ಕೊವಿಡ್ ಸಂದರ್ಭದಲ್ಲಿ ಆರ್ಥಿಕ ನಷ್ಟಕ್ಕೊಳಗಾಗಿದ್ದರು. ಹರೀಶ್, ಮಂಜುನಾಥ್ ಪ್ರಸಾದ್, ರಾಜು ಎಂಬುವವರ ಬಳಿ ಸಾಲ ಪಡೆದಿದ್ದರು. ಹೀಗಾಗಿ ಬಡ್ಡಿ ಜೊತೆಗೆ ಅಸಲನ್ನು ಹಿಂತಿರುಗಿಸುವಂತೆ ಸಾಲಗಾರರು ಒತ್ತಡ ಹಾಕಿದ್ದಾರೆ. ಜಿಮ್ ಹಾಗೂ ಮನೆ ಬಳಿ ಹೋಗಿ ಗಲಾಟೆ ಮಾಡಿದ್ದಾರೆ. ಸಾಲಗಾರರ ಕಾಟ ತಾಳಲಾರದೆ ಮನೋಹರ್ ಡೆತ್​ನೋಟ್ ಬರೆದಿಟ್ಟು ಬಳಿಕ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಗಮ್ಮನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ 306 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ಗಂಗಮ್ಮನಗುಡಿ ಪೊಲೀಸರಿಂದ ತನಿಖೆ ಮುಂದುವರೆದಿದೆ.

ವಕೀಲರ ಮನೆಯಲ್ಲಿ ಕಳ್ಳತನ

ರಾಯಚೂರು: ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಸಹಕಾರಿ ಬ್ಯಾಂಕ್​ಗಳ ಕಾನೂನು ಸಲಹೆಗಾರ ಶಂಶುದ್ದೀನ್ ಮನೆಯಲ್ಲಿ ಕಳ್ಳತನವಾಗಿದೆ. ನಿನ್ನೆ ಮನೆಯಲ್ಲಿ ಯಾರೂ ಇಲ್ಲದ ವೇಳೆ 7 ಲಕ್ಷ ನಗದು, 200 ಗ್ರಾಂ ಚಿನ್ನ, 400 ಗ್ರಾಂ ಬೆಳ್ಳಿ, ಕೆಲ ದಾಖಲೆಗಳನ್ನೂ ಖದೀಮರು ಕದ್ದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮವಾಗಿ ಸಾಗಿಸುತ್ತಿದ್ದ 85 ಲಕ್ಷ ರೂಪಾಯಿ ನಗದು ಜಪ್ತಿ

ಹಾವೇರಿ ಜಿಲ್ಲೆ ಹಾನಗಲ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಸಿನಿಮಾ ಸ್ಟೈಲ್‌ನಲ್ಲಿ ಕಾರು ಚೇಸ್ ಮಾಡಿ ಕಾರಿನಲ್ಲಿ ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಆರೋಪಿಗಳು ಮತ್ತು 85 ಲಕ್ಷ ನಗದು ಜಪ್ತಿ ಮಾಡಿದ್ದಾರೆ. ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು ಆರೋಪಿಗಳು ಹುಬ್ಬಳ್ಳಿಯಿಂದ ಶಿವಮೊಗ್ಗ ಜಿಲ್ಲೆ ಸಾಗರದ ಕಡೆ ಹಣ ಸಾಗಿಸುತ್ತಿದ್ರು ಎಂದು ತಿಳಿದು ಬಂದಿದೆ.

ಫಯಾಜಖಾನ್ (31 ವರ್ಷ), ಇಮ್ರಾನ್ ಖಾನ್ (27 ವರ್ಷ) ಮತ್ತು ಶಿವಮೊಗ್ಗ ಜಿಲ್ಲೆ ಸಾಗರದ ಸದ್ಧಾಂಖಾನ್ (23 ವರ್ಷ) ಮತ್ತು ಸಯ್ಯದ ಅಮೀನ್ (29 ವರ್ಷ) ಬಂಧಿತರು. ಎಸ್ಪಿ ಹನುಮಂತರಾಯ ನೀಡಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆದಿದೆ. ಹಾನಗಲ್ ಸಿಪಿಐ ಶಿವಶಂಕರ ಗಣಾಚಾರಿ ಹಾಗೂ ಪಿಎಸ್ಐ ಶ್ರೀಶೈಲ ಪಟ್ಟಣಶೆಟ್ಟಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:39 am, Wed, 31 August 22

ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ