AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮ ವೈಫಲ್ಯದ ಬಗ್ಗೆ ವಿಡಿಯೋ ಮಾಡಿ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಯುವಕ!

ಮೃತ ಕಾರ್ತಿಕ್ ಕಳೆದ ಮೂರು ವರ್ಷಗಳಿಂದ ಯುವತಿಯನ್ನು ಪ್ರೀತಿಸುತ್ತಿದ್ದರು. ಇತ್ತೀಚಿಗೆ ಕಾರ್ತಿಕ್​ನಿಂದ ಯುವತಿ ದೂರವಾಗಿದ್ದಳು. ಯುವತಿ ನೆನಪಿನಲ್ಲಿ ಕಾರ್ತಿಕ್ ಕಾಲ ಕಳೆಯುತ್ತಿದ್ದರಂತೆ.

ಪ್ರೇಮ ವೈಫಲ್ಯದ ಬಗ್ಗೆ ವಿಡಿಯೋ ಮಾಡಿ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಯುವಕ!
ಆತ್ಮಹತ್ಯೆಗೆ ಶರಣಾದ ಕಾರ್ತಿಕ್
TV9 Web
| Edited By: sandhya thejappa|

Updated on:Oct 24, 2021 | 12:11 PM

Share

ಬೆಂಗಳೂರು: ರಾಜರಾಜೇಶ್ವರಿ ನಗರದ ಮರಪ್ಪ ಲೇಔಟ್​ನಲ್ಲಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣು ಬಿಗಿದುಕೊಂಡು ಕಾರ್ತಿಕ್(29) ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣ ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ನೇಣಿಗೆ ಶರಣಾದ ಯುವಕ ಜಿಮ್ ಟ್ರೈನಿಯಾಗಿದ್ದರು. ಪ್ರೇಮ ವೈಫಲ್ಯದ ಬಗ್ಗೆ ವಿಡಿಯೋ ಮಾಡಿಟ್ಟು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಕಾರ್ತಿಕ್ ಕಳೆದ ಮೂರು ವರ್ಷಗಳಿಂದ ಯುವತಿಯನ್ನು ಪ್ರೀತಿಸುತ್ತಿದ್ದರು. ಇತ್ತೀಚಿಗೆ ಕಾರ್ತಿಕ್​ನಿಂದ ಯುವತಿ ದೂರವಾಗಿದ್ದಳು. ಯುವತಿ ನೆನಪಿನಲ್ಲಿ ಕಾರ್ತಿಕ್ ಕಾಲ ಕಳೆಯುತ್ತಿದ್ದರಂತೆ. ಪ್ರೇಮ ವೈಫಲ್ಯ ಬಗ್ಗೆ ಆಪ್ತರ ಬಳಿ ಹೇಳಿಕೊಂಡಿದ್ದರು. ಈ ವಿಚಾರ ತಿಳಿದ ಪೋಷಕರು ಮದುವೆ ಮಾಡಲು ಮುಂದಾಗಿದ್ದರು. ಇಂದು ಕಾರ್ತಿಕ್​ಗೆ ಹೆಣ್ಣು ನೋಡುವ ಶಾಸ್ತ್ರಕ್ಕೆ ಪೋಷಕರು ಹೋಗಬೇಕಿತ್ತು. ಅದರೆ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯ ಶೀಟ್ ಹ್ಯಾಂಗಲ್​ಗೆ ನೇಣು ಬಿಗಿದುಕೊಂಡು ಯುವಕ ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೂ ಮುನ್ನ ಪ್ರೇಮ ವೈಫಲ್ಯ ಬಗ್ಗೆ ಕಾರ್ತಿಕ್ ವಿಡಿಯೋ ಮಾಡಿದ್ದಾರೆ. ತನ್ನ ಮೊಬೈಲ್​ನಲ್ಲಿ ವಿಡಿಯೋ ಮಾಡಿ ನಂತರ ಸಾವಿಗೆ ಶರಣಾಗಿದ್ದಾರೆ. ಸದ್ಯ ಮೊಬೈಲ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಡಿಯೋ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಾರೆ.

ಇದನ್ನೂ ಓದಿ: ಹಳೇ ದ್ವೇಷ ಹಿನ್ನೆಲೆ ಗ್ಯಾಂಗ್ ವಾರ್; ಓರ್ವನ ಕೊಲೆ, ಇಬ್ಬರ ಸ್ಥಿತಿ ಗಂಭೀರ

ಇದನ್ನೂ ಓದಿ: Viral Video: ಕ್ಯಾಮೆರಾ ಕಂಡು ಮನುಷ್ಯರಂತೆಯೇ ಪೋಸ್ ಕೊಟ್ಟ ಶ್ವಾನಗಳು; ವಿಡಿಯೋ ನೋಡಿ

Published On - 12:02 pm, Sun, 24 October 21

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ