AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮ ವೈಫಲ್ಯದ ಬಗ್ಗೆ ವಿಡಿಯೋ ಮಾಡಿ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಯುವಕ!

ಮೃತ ಕಾರ್ತಿಕ್ ಕಳೆದ ಮೂರು ವರ್ಷಗಳಿಂದ ಯುವತಿಯನ್ನು ಪ್ರೀತಿಸುತ್ತಿದ್ದರು. ಇತ್ತೀಚಿಗೆ ಕಾರ್ತಿಕ್​ನಿಂದ ಯುವತಿ ದೂರವಾಗಿದ್ದಳು. ಯುವತಿ ನೆನಪಿನಲ್ಲಿ ಕಾರ್ತಿಕ್ ಕಾಲ ಕಳೆಯುತ್ತಿದ್ದರಂತೆ.

ಪ್ರೇಮ ವೈಫಲ್ಯದ ಬಗ್ಗೆ ವಿಡಿಯೋ ಮಾಡಿ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಯುವಕ!
ಆತ್ಮಹತ್ಯೆಗೆ ಶರಣಾದ ಕಾರ್ತಿಕ್
TV9 Web
| Edited By: |

Updated on:Oct 24, 2021 | 12:11 PM

Share

ಬೆಂಗಳೂರು: ರಾಜರಾಜೇಶ್ವರಿ ನಗರದ ಮರಪ್ಪ ಲೇಔಟ್​ನಲ್ಲಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣು ಬಿಗಿದುಕೊಂಡು ಕಾರ್ತಿಕ್(29) ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣ ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ನೇಣಿಗೆ ಶರಣಾದ ಯುವಕ ಜಿಮ್ ಟ್ರೈನಿಯಾಗಿದ್ದರು. ಪ್ರೇಮ ವೈಫಲ್ಯದ ಬಗ್ಗೆ ವಿಡಿಯೋ ಮಾಡಿಟ್ಟು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಕಾರ್ತಿಕ್ ಕಳೆದ ಮೂರು ವರ್ಷಗಳಿಂದ ಯುವತಿಯನ್ನು ಪ್ರೀತಿಸುತ್ತಿದ್ದರು. ಇತ್ತೀಚಿಗೆ ಕಾರ್ತಿಕ್​ನಿಂದ ಯುವತಿ ದೂರವಾಗಿದ್ದಳು. ಯುವತಿ ನೆನಪಿನಲ್ಲಿ ಕಾರ್ತಿಕ್ ಕಾಲ ಕಳೆಯುತ್ತಿದ್ದರಂತೆ. ಪ್ರೇಮ ವೈಫಲ್ಯ ಬಗ್ಗೆ ಆಪ್ತರ ಬಳಿ ಹೇಳಿಕೊಂಡಿದ್ದರು. ಈ ವಿಚಾರ ತಿಳಿದ ಪೋಷಕರು ಮದುವೆ ಮಾಡಲು ಮುಂದಾಗಿದ್ದರು. ಇಂದು ಕಾರ್ತಿಕ್​ಗೆ ಹೆಣ್ಣು ನೋಡುವ ಶಾಸ್ತ್ರಕ್ಕೆ ಪೋಷಕರು ಹೋಗಬೇಕಿತ್ತು. ಅದರೆ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯ ಶೀಟ್ ಹ್ಯಾಂಗಲ್​ಗೆ ನೇಣು ಬಿಗಿದುಕೊಂಡು ಯುವಕ ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೂ ಮುನ್ನ ಪ್ರೇಮ ವೈಫಲ್ಯ ಬಗ್ಗೆ ಕಾರ್ತಿಕ್ ವಿಡಿಯೋ ಮಾಡಿದ್ದಾರೆ. ತನ್ನ ಮೊಬೈಲ್​ನಲ್ಲಿ ವಿಡಿಯೋ ಮಾಡಿ ನಂತರ ಸಾವಿಗೆ ಶರಣಾಗಿದ್ದಾರೆ. ಸದ್ಯ ಮೊಬೈಲ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಡಿಯೋ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಾರೆ.

ಇದನ್ನೂ ಓದಿ: ಹಳೇ ದ್ವೇಷ ಹಿನ್ನೆಲೆ ಗ್ಯಾಂಗ್ ವಾರ್; ಓರ್ವನ ಕೊಲೆ, ಇಬ್ಬರ ಸ್ಥಿತಿ ಗಂಭೀರ

ಇದನ್ನೂ ಓದಿ: Viral Video: ಕ್ಯಾಮೆರಾ ಕಂಡು ಮನುಷ್ಯರಂತೆಯೇ ಪೋಸ್ ಕೊಟ್ಟ ಶ್ವಾನಗಳು; ವಿಡಿಯೋ ನೋಡಿ

Published On - 12:02 pm, Sun, 24 October 21

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ