AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೊಚ್ಚಲ ಹೆರಿಗೆ ಆಗಿದೆ, ಮಗುವೂ ಆರೋಗ್ಯವಾಗಿ ಇದೆ ಎಂದು ಬಜೆಟ್ ಮೇಲಿನ ಭಾಷಣ ವೇಳೆ ಹಾಸ್ಯ ಮಾಡಿದ ಹೆಚ್.ವಿಶ್ವನಾಥ್

ಚೊಚ್ಚಲ ಹೆರಿಗೆ ಆಗಿದೆ, ಮಗುವೂ ಆರೋಗ್ಯವಾಗಿ ಇದೆ‌. ಈ ಮಗು ನಮ್ಮ ಬಳಿ ಇದ್ದರೆ ನಗುತ್ತೆ, ಕಾಂಗ್ರೆಸ್ ಬಳಿ ಅಳುತ್ತೆ. ಮರಿತಿಬ್ಬೇಗೌಡರ ಬಳಿ ಹೋದ್ರೆ ಕಿಟಾರ್ ಅಂತ ಕೂಗುತ್ತೆ. ಜೆಡಿಎಸ್ ಈ ಮಗುವನ್ನು ತಮ್ಮದು ಅಂತ ಆಡಿಸುತ್ತಿದೆ ಎಂದು ಬಜೆಟ್ ಮೇಲಿನ ಭಾಷಣ ವೇಳೆ ಹೆಚ್.ವಿಶ್ವನಾಥ್ ಹಾಸ್ಯ ಮಾಡಿದ್ದಾರೆ.

ಚೊಚ್ಚಲ ಹೆರಿಗೆ ಆಗಿದೆ, ಮಗುವೂ ಆರೋಗ್ಯವಾಗಿ ಇದೆ ಎಂದು ಬಜೆಟ್ ಮೇಲಿನ ಭಾಷಣ ವೇಳೆ ಹಾಸ್ಯ ಮಾಡಿದ ಹೆಚ್.ವಿಶ್ವನಾಥ್
ಹೆಚ್.ವಿಶ್ವನಾಥ್
TV9 Web
| Edited By: ಆಯೇಷಾ ಬಾನು|

Updated on: Mar 15, 2022 | 4:43 PM

Share

ಬೆಂಗಳೂರು: ವಿಧಾನಪರಿಷತ್‌ನಲ್ಲಿ ಬಜೆಟ್ ಮೇಲೆ ಹೆಚ್.ವಿಶ್ವನಾಥ್(H Vishwanath) ಚರ್ಚೆ ನಡೆಸಿದ್ದು ಈ ವೇಳೆ ಹಾಸ್ಯ ಮಾಡಿ ಹೆಸರು ಹೇಳದೆ ಸಿದ್ದರಾಮಯ್ಯ(Siddaramaiah) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಅಭಿಮಾನದಿಂದ ಸ್ವಾಗತ ಮಾಡ್ತೀನಿ. ಚೊಚ್ಚಲ ಹೆರಿಗೆ ಆಗಿದೆ, ಮಗುವೂ ಆರೋಗ್ಯವಾಗಿ ಇದೆ‌. ಈ ಮಗು ನಮ್ಮ ಬಳಿ ಇದ್ದರೆ ನಗುತ್ತೆ, ಕಾಂಗ್ರೆಸ್ ಬಳಿ ಅಳುತ್ತೆ. ಮರಿತಿಬ್ಬೇಗೌಡರ ಬಳಿ ಹೋದ್ರೆ ಕಿಟಾರ್ ಅಂತ ಕೂಗುತ್ತೆ. ಜೆಡಿಎಸ್ ಈ ಮಗುವನ್ನು ತಮ್ಮದು ಅಂತ ಆಡಿಸುತ್ತಿದೆ ಎಂದು ಬಜೆಟ್ ಮೇಲಿನ ಭಾಷಣ ವೇಳೆ ಹೆಚ್.ವಿಶ್ವನಾಥ್ ಹಾಸ್ಯ ಮಾಡಿದ್ದಾರೆ.

ಇವತ್ತು ನಾವು ರಾಜಕಾರಣಿಗಳು ಓಟಿನ ಜನ. ಮತ್ತೊಮ್ಮೆ ಸಿಎಂ ಮಾಡಿ 10 ಕೆಜಿ ಅಕ್ಕಿ ಕೊಡ್ತೀನಿ ಅಂತಾರೆ. ಇದೇನಾ ನಿಮ್ ಕನಸ್ಸು. ರಾಜ್ಯದ ಅಭಿವೃದ್ಧಿ ಮಾಡ್ತೀನಿ ಅನ್ನೋದಿಲ್ಲ ಯಾಕೆ ಎಂದು ಹೆಸರು ಹೇಳದೆ ಸಿದ್ದರಾಮಯ್ಯ ವಿರುದ್ದ ಹೆಚ್. ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ ಸೊಂಟದ ಮೇಲೆ ಕೈ ಇಟ್ಟು ಸಿದ್ದರಾಮಯ್ಯ ತರಹ ವಿಶ್ವನಾಥ್ ಆಕ್ಷನ್ ಮಾಡಿದ್ರು. ಕನ್ನಡ ಭಾಷೆ ಇವತ್ತು ಕೊಂದು ಹಾಕಿದ್ದಾರೆ. ಧಮ್ ಇದ್ಯಾ, ಟಗರು ಗುಮ್ಮುತ್ತೆ ಅಂತಾರೆ ಇದು ಭಾಷೆನಾ? ಏಯ್.. ಮೋದಿ ಯೂಸ್ ಲೆಸ್ ಫೆಲೋ ಅಂತಾರೆ. ಒಬ್ಬ ಚುನಾಯಿತ ಪ್ರಧಾನಿಗಳಿಗೆ ಕೊಡೋ ಗೌರವ ಇದೆನಾ? ಪ್ರಧಾನಿ ಮೋದಿ 3 ಬಾರಿ ಸಿಎಂ ಆಗಿದ್ರು, 2 ಪ್ರಧಾನಿ ಆಗಿದ್ದಾರೆ. ಒಂದು ಬಾರಿ ಸಿಎಂ ಆಗಿ 36 ಸಾವಿರ ಓಟ್ ನಿಂದ ಸೋತವರು 3 ಬಾರಿ ಗೆದ್ದವರ ಬಗ್ಗೆ ಮಾತಾಡ್ತಾರೆ. ಪ್ರಧಾನಿ ಆಗಿ ಯಾವತ್ತು ಅವ್ರು ಹಿಂದುತ್ವದ ಬಗ್ಗೆ ಮಾತಾಡಿಲ್ಲ. 2 ಕೋಟಿ ಮುಸ್ಲಿಂ ಮಕ್ಕಳಿಗೆ ವಿದ್ಯಾರ್ಥಿ ವೇತನ ಮೋದಿ ನೀಡಿದ್ದಾರೆ. ಮೋದಿ ಯಾರಿಗೂ ವಿರುದ್ಧ ಮಾತಾಡಿಲ್ಲ ಎಂದು ಹೆಸರು ಹೇಳದೆ ಸಿದ್ದರಾಮಯ್ಯ ವಿರುದ್ದ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.

ಜಲಜೀವನ್ ಮಿಷನ್ ದೊಡ್ಡ ಯೋಜನೆ. ವಿಪರ್ಯಾಸವೆಂದರೆ ವಿಪಕ್ಷಗಳು ಈ ಬಗ್ಗೆ ಚರ್ಚೆ ಮಾಡುತ್ತಿಲ್ಲ. ಜಲಜೀವನ್ ಮಿಷನ್ ಶೇಕಡಾ 40ರಷ್ಟು ಮುಗಿದಿದೆ ಅಂತಾರೆ. ಜಲಜೀವನ್ ಮಿಷನ್ ಯೋಜನೆ ಬಗ್ಗೆ ಸಿಎಂ ಗಮನ ಹರಿಸಲಿ. ಆಡಳಿತ, ಅಭಿವೃದ್ಧಿ, ಹಣಕಾಸು ಇಲಾಖೆ ಬಗ್ಗೆ ಚರ್ಚೆಗೆ ಸಮಯ ನಿಗದಿ ಮಾಡುವಂತೆ ವಿಧಾನಪರಿಷತ್ನಲ್ಲಿ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಮನವಿ ಮಾಡಿದ್ರು.

ಇದನ್ನೂ ಓದಿ: 12-14 ವರ್ಷ ವಯಸ್ಸಿನ ಮಕ್ಕಳಿಗೆ ಕೊವಿಡ್ ಲಸಿಕೆ: ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್​ಗೆ ಹೀನಾಯ ಸೋಲು ಹಿನ್ನೆಲೆ; ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಪರಿಶೀಲನಾ ಸಭೆ

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!