AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hacker Shreeki: ಬರಿಗಾಲಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಗೆ ಬಂದ ಹ್ಯಾಕರ್ ಶ್ರೀಕಿ

ತನ್ನ ಮೇಲೆ ಬಂದಿರುವ ಆರೋಪಗಳನ್ನು ಅಲ್ಲಗೆಳೆದಿರುವ ಶ್ರೀಕೃಷ್ಣ ಜೈಲಿನಿಂದ ಬರಿಗಾಲಿನಲ್ಲೇ ಹೊರ ಬಂದಿದ್ದಾನೆ

Hacker Shreeki: ಬರಿಗಾಲಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಗೆ ಬಂದ ಹ್ಯಾಕರ್ ಶ್ರೀಕಿ
ಶ್ರೀಕೃಷ್ಣ ಅಲಿಯಾಸ್​ ಶ್ರೀಕಿ
TV9 Web
| Edited By: |

Updated on:Nov 10, 2021 | 3:58 PM

Share

ಬೆಂಗಳೂರು: ಬಿಟ್ ಕಾಯಿಲ್ ದಂಧೆಯ ಆರೋಪ ಹೊತ್ತಿರುವ ಅಂತರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ (ಶ್ರೀಕಿ) ಬುಧವಾರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ತನ್ನ ಮೇಲೆ ಬಂದಿರುವ ಆರೋಪಗಳನ್ನು ಅಲ್ಲಗೆಳೆದಿರುವ ಶ್ರೀಕೃಷ್ಣ ಜೈಲಿನಿಂದ ಬರಿಗಾಲಿನಲ್ಲೇ ಹೊರ ಬಂದಿದ್ದಾನೆ. ಕರೆದುಕೊಂಡು ಹೋಗಲು ಯಾರು ಬಾರದ ಕಾರಣ ಆಟೊ ಹತ್ತಿದ. ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶ್ರೀಕಿ, ‘ನನಗೆ ಜಾಮೀನು ಕೊಟ್ಟವರು ಯಾರು ಎಂಬುದು ಗೊತ್ತಿಲ್ಲ. ನಾನು ಅಂತಹ ಯಾವ ಕೆಲಸವನ್ನೂ ಮಾಡಿಲ್ಲ’ ಎಂದು ಹೇಳಿಕೆ ನೀಡಿದ್ದಾನೆ.

ಹೋಟೆಲ್‌ನಲ್ಲಿ ಗಲಾಟೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕಿಯನ್ನು ಪೊಲೀಸರು ಬಂಧಿಸಿದ್ದರು. ಬಿಟ್ ಕಾಯಿನ್ ಪ್ರಕರಣದ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಜಾಮೀನು ಕೊಡಿಸಿದವರು ಯಾರು ಎಂಬುದೂ ತಿಳಿದಿಲ್ಲ. ದೊಡ್ಡವರು ದೊಡ್ಡ ದೊಡ್ಡವರ ಹೆಸರು ಹೇಳುತ್ತಾರೆ ಎಂದು ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ. ಮಾಧ್ಯಮಗಳಲ್ಲಿ ಸುಮ್ಮನೆ ಹೈಪ್ ಕ್ರಿಯೇಟ್ ಆಗಿದೆ. ನನಗೆ ಏನೂ ಗೊತ್ತಿಲ್ಲ. ದಯವಿಟ್ಟು ನನ್ನನ್ನು ಹಿಂಬಾಲಿಸಬೇಡಿ ಎಂದು ವಿನಂತಿಸಿದ.

4ನೇ ತರಗತಿಯಿಂದಲೂ ಕಂಪ್ಯೂಟರ್ ಆಸಕ್ತಿ ಹ್ಯಾಕರ್ ಶ್ರೀಕಿ ಮೂಲತಃ ಬೆಂಗಳೂರಿನ ಜಯನಗರ ನಿವಾಸಿ. ಗೋಪಾಲ್ ರಮೇಶ್ ಮತ್ತು ಕೌಸಲ್ಯ ದಂಪತಿ ಪುತ್ರ. ಶ್ರೀಕಿ ಬಾಲ್ಯದಲ್ಲೇ ಕಂಪ್ಯೂಟರ್ ಟೆಕ್ನಾಲಜಿ ಕುರಿತು ಆಸಕ್ತಿ ಬೆಳೆಸಿಕೊಂಡಿದ್ದ. 4 ನೇ ತರಗತಿ ಓದುವಾಗಲೇ ವೆಬ್ ಟೆಕ್ನಾಲಜಿ ಬಗೆಗೆ ಒಲವು ಮೂಡಿತ್ತು. ಗೇಮ್ ಸೃಷ್ಟಿ ಮಾಡುವುದು ಮತ್ತು ರಿವರ್ಸ್ ಇಂಜಿನಿಯರಿಂಗ್ ಬಗ್ಗೆ ತಿಳಿದಿದ್ದ. ಈ ನಿಟ್ಟಿನಲ್ಲಿ ಬಾಲ್ಯದಿಂದ ಕಂಪ್ಯೂಟರ್ ಟೆಕ್ನಾಲಜಿ ಬಗೆಗೆ ನೈಪುಣ್ಯತೆ ಗಳಿಸಲು ಇಚ್ಚಿಸಿದ್ದ ಎಂದು ಪೊಲೀಸರ ತನಿಖೆ ಮೇಳೆ ಶ್ರೀಕಿ ಮಾಹಿತಿ ನೀಡಿದ್ದಾನೆ.

ಶ್ರೀಕಿ ಇಂಟರ್ನ್ಯಾಷನಲ್ ಹ್ಯಾಕರ್ ಆಗಿದ್ದೇಗೆ? ಶ್ರೀಕಿ ತಾನೊಬ್ಬ ಹ್ಯಾಕರ್ ಆಗಬೇಕೆಂದು ಬಾಲ್ಯದಲ್ಲೇ ತೀರ್ಮಾನಿಸಿದ್ದ. ಈ ನಿಟ್ಟಿನಲ್ಲಿ ಬಾಲ್ಯದಲ್ಲೇ IRS(ಇಂಟರ್ ನೆಟ್ ರೆಲೇ ಚಾಟ್)ಮೂಲಕ ಹ್ಯಾಕರ್ ಸಂಪರ್ಕ ಸಾಧಿಸಿದ್ದ. 4 ನೇ ತರಗತಿಯಲ್ಲಿ ಓದುವಾಗ್ಲೆ ‘ಬ್ಲಾಕ್ ಹ್ಯಾಟ್’ ಎಂಬ ಹ್ಯಾಕರ್ಸ್ ತಂಡದ ಸದಸ್ಯನಾಗಿದ್ದ. 6 ವರ್ಷಗಳ ಕಾಲ ಅಂದ್ರೆ 10 ನೇ ತರಗತಿ ವರೆಗೂ ಅದೇ ತಂಡದಲ್ಲಿದ್ದ. 8 ನೇ ತರಗತಿ ವೇಳೆಗೆ ಬ್ಲಾಕ್ ಹ್ಯಾಟ್ ತಂಡದ ಅಡ್ಮಿನಿಸ್ಟ್ರೇಟರ್ ಆಗಿ ಪ್ರಮೋಷನ್ ಕೂಡ ಪಡ್ತೆದಿದ್ದ. ರೋಸ್/ ಬಿಗ್ ಬಾಸ್ ಅನ್ನೋ ನಿಗೂಢ ಹೆಸರಿನ ಮೂಲಕ ಟೀಂ ಲೀಡ್ ಮಾಡ್ತಿದ್ದ. ಸದಸ್ಯರ ವೈಮನಸ್ಸಿನಿಂದ ಬ್ಲಾಕ್ ಹ್ಯಾಟ್ ವಿಭಾಗವಾಯ್ತು. ನಂತರ ಬೇರೊಂದು ತಂಡದೊಂದಿಗೆ ಶ್ರೀಕಿ ಹ್ಯಾಂಕಿಂಗ್ ಮುಂದುವರೆಸಿದ್ದ. ಶಾಲೆಯ ಪುಪಿಲ್ ಪಾಡ್ ವೆಬ್ ಸೈಟ್ ಹ್ಯಾಕ್ ಮಾಡಿ ಸ್ನೇಹಿತರಿಗೆ ಅಟೆಂಡೆನ್ಸ್, ಮಾರ್ಕ್ಸ್ ಕೊಡಿಸಿದ್ನಂತೆ.

ಶ್ರೀಕಿ ವಿವಿ ಪುರಂನ ಖಾಸಗಿ ಕಾಲೇಜಿನಲ್ಲಿ ಪಿಯುಸಿ ಮಾಡಿದ್ದಾನೆ. ಪಿಯುಸಿಯಲ್ಲಿ ಪಿಸಿಎಂಸಿ ವಿಷಯಗಳನ್ನ ಅಭ್ಯಾಸ ಮಾಡಿದ್ದಾನೆ. ಈ ವೇಳೆ ಸ್ನೇಹಿತರ ಜತೆ ಸೇರಿ ಡ್ರಗ್ಸ್, ಡ್ರಿಂಕ್ಸ್, ಸ್ಮೋಕಿಂಗ್ ಚಟಕ್ಕೆ ದಾಸನಾಗಿದ್ದ. ಅಲ್ಲದೆ ಈ ಕೃತ್ಯಗಳಿಗೆ ಹಣ ಗಳಿಸಲು ಹ್ಯಾಂಕಿಂಗ್ ಮಾಡ್ತಿದ್ದ. ಹ್ಯಾಕಿಂಗ್ ಕೃತ್ಯದ ಮೂಲಕ ಹಣ ಗಳಿಸಲು ದುಶ್ಚಟಗಳೇ ಶ್ರೀಕಿಗೆ ಪ್ರೇರಣೆಯಾಗಿದ್ದವು.

ಇದನ್ನೂ ಓದಿ: ಬಿಟ್​​ಕಾಯಿನ್​ ಕಿಂಗ್​ಪಿನ್​ ಜಾಗತಿಕ ಹ್ಯಾಕರ್​ ಶ್ರೀಕಿ ಪೊಲೀಸರಿಗೆ ಲಾಕ್​ ಆಗ್ತಿದ್ದಂತೆ ತನ್ನ ಬಗ್ಗೆ ಹೇಳಿದ್ದೇನು? ಇನ್​ಸೈಡ್​​ ಡಿಟೆಲ್ಸ್​​ ಇದನ್ನೂ ಓದಿ: ಹಳೇ ಚಾಳಿ ಮುಂದುವರಿಸಿದ್ದಾನಾ ಹ್ಯಾಕರ್ ಶ್ರೀಕಿ? ನ್ಯಾಯಾಲಯದ ಅನುಮತಿ ಪಡೆದು ಲ್ಯಾಪ್‌ಟಾಪ್ ರಿಟ್ರೀವ್​ಗೆ ಮುಂದಾದ ಪೊಲೀಸ್

Published On - 3:46 pm, Wed, 10 November 21

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು