AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬೇಡ್ಕರ್​ ಸಂವಿಧಾನ ಬರೆಯದಿದ್ದರೆ ಎಮ್ಮೆ ಕಾಯುತ್ತಿರುತ್ತಿದ್ದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಹಡಪದ ಅಪ್ಪಣ್ಣ ಜಯಂತಿ ಆಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ, ಬಸವಣ್ಣ ಮತ್ತು ಅಂಬೇಡ್ಕರ್ ಅವರನ್ನು ಸ್ಮರಿಸಿದರು.

ಅಂಬೇಡ್ಕರ್​ ಸಂವಿಧಾನ ಬರೆಯದಿದ್ದರೆ ಎಮ್ಮೆ ಕಾಯುತ್ತಿರುತ್ತಿದ್ದೆ: ಸಿಎಂ ಸಿದ್ದರಾಮಯ್ಯ
ಇತರೆ 1,09,639 ಲಕ್ಷ ಕೋಟಿ ರೂಪಾಯಿ ಮೀಸಲು
Anil Kalkere
| Edited By: Rakesh Nayak Manchi|

Updated on: Jul 03, 2023 | 8:34 PM

Share

ಬೆಂಗಳೂರು: ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ಬರೆದಿದ್ದರೆ ನಾನು ಇಂದು ಮುಖ್ಯಮಂತ್ರಿ ಆಗುತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದರು. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಹಡಪದ ಅಪ್ಪಣ್ಣ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ಇಲ್ಲದಿದ್ದರೆ ನಾನು ಎಮ್ಮೆ ಕಾಯುತ್ತಿರುತ್ತಿದೆ. ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಅವರು ಕಲ್ಲು ಒಡೆಯುತ್ತಿದ್ದರು ಎಂದರು.

ಸ್ವಾರ್ಥಕ್ಕಾಗಿ ಜಾತಿ ವ್ಯವಸ್ಥೆ ಮಾಡಿದ್ದಾರೆ ಎಂದು ಹೇಳಿದ ಸಿದ್ದರಾಮಯ್ಯ, ಜಾತಿ ವ್ಯವಸ್ಥೆ ವಿರುದ್ಧ ಬುದ್ಧ, ಬಸವಣ್ಣ ಹೋರಾಟ ಮಾಡಿದ್ದರು. ನಾವು ಮನುಷ್ಯರಾಗಿ ಬದುಕಿ ಸಮಾಜದಲ್ಲಿ ಪರಿವರ್ತನೆ ತರಬೇಕು. ಬಸವಣ್ಣನವರು ಕೆಳವರ್ಗದ ಜನರ ಪರವಾಗಿ‌‌ ಕೆಲಸ ಮಾಡಿದ್ದರು. ಅಸಮಾನತೆ ಇದ್ದರೆ ಸಮಾಜದಲ್ಲಿ ಸಾಮರಸ್ಯ ಇರುವುದಿಲ್ಲ. ಹೀಗಾಗಿ ಬಸವಣ್ಣ ಅನುಭವ ಮಂಟಪ ನಿರ್ಮಾಣ ಮಾಡಿದರು ಎಂದರು.

ಇದನ್ನೂ ಓದಿ: ಈಶ್ವರಪ್ಪಗೆ ಸನ್ಮಾನಿಸಲು ನಿರಾಕರಿಸಿದ ಸಿದ್ದರಾಮಯ್ಯ: ಸಮುದಾಯದ ಕಾರ್ಯಕ್ರಮದಲ್ಲಿ ಉಭಯ ನಾಯಕರ ಮುನಿಸು ಬಹಿರಂಗ

ಕರ್ನಾಟಕ ಸರ್ಕಾರ ಬಹಳಷ್ಟು ಮಹಾಪುರುಷರ ಜಯಂತಿ ಆಚರಣೆ ಮಾಡುತ್ತಿದ್ದೇವೆ. ಯಾಕೆಂದರೆ ಅಪ್ಪಣ್ಣ ಅವರು ಆಕಸ್ಮಿಕವಾಗಿ ಹಡಪದ ಜಾತಿಗೆ ಹುಟ್ಟಿದವರು. ಆದರೆ ಅವರ ಬದುಕು ನೋಡಿದರೆ ಕಡಪದ ಜಾತಿಗೆ ಮೀಸಲಾಗಿಲ್ಲ. ಇಡೀ ಮನುಕುಲಕ್ಕೆ ಮೀಸಲಾದವರು ಎಂದು ಸಿದ್ದರಾಮಯ್ಯ ಹೇಳಿದರು.

ತಮ್ಮ ಕಾರಿನ ಮೇಲೆ ಕಾಗೆ ಕುಳಿತ ಪ್ರಸಂಗ ಸ್ಮರಿಸಿದ ಸಿದ್ದರಾಮಯ್ಯ

ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಕಾಗೆ ಕುಳಿತುಕೊಂಡಿದ್ದು ಭಾರೀ ಚರ್ಚೆಯಾಗಿತ್ತು. ಈ ಬಗ್ಗೆ ಕಾರ್ಯಕ್ರಮದಲ್ಲಿ ಸ್ಮರಿಸಿದ ಅವರು, ನನ್ನ ಕಾರಿನ ಮೇಲೆ ಕಾಗೆ ಕುಳಿತಿದ್ದಕ್ಕೆ ಭಯಂಕರ ಚರ್ಚೆ ನಡೆಯಿತು. ಒಬ್ಬರು ನಾನು ಬಜೆಟ್ ಮಂಡಿಸಲ್ಲ, ಕುರ್ಚಿ ಕಳೆದುಕೊಳ್ಳುತ್ತೇನೆ ಎಂದಿದ್ದರು. ಇನ್ನೊಬ್ಬರು ಬಜೆಟ್ ಮಂಡಿಸಿದ ಮೇಲೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದಿದ್ದರು. ಆದರೆ ಮೌಢ್ಯದ ಕಾಗೆ ಹಾರಿಸಿದವರು ನಾಪತ್ತೆಯಾದರು. ಕಾಗೆ ಕುಳಿತ ಬಳಿಕವೂ 2 ಬಜೆಟ್ ಮಂಡಿಸಿ ಅಧಿಕಾರ ನಿರ್ವಹಿಸಿದೆ. ಆದ್ದರಿಂದ ಮೌಢ್ಯವನ್ನು ನಂಬಬೇಡಿ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ