AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬೇಡ್ಕರ್​ ಸಂವಿಧಾನ ಬರೆಯದಿದ್ದರೆ ಎಮ್ಮೆ ಕಾಯುತ್ತಿರುತ್ತಿದ್ದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಹಡಪದ ಅಪ್ಪಣ್ಣ ಜಯಂತಿ ಆಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ, ಬಸವಣ್ಣ ಮತ್ತು ಅಂಬೇಡ್ಕರ್ ಅವರನ್ನು ಸ್ಮರಿಸಿದರು.

ಅಂಬೇಡ್ಕರ್​ ಸಂವಿಧಾನ ಬರೆಯದಿದ್ದರೆ ಎಮ್ಮೆ ಕಾಯುತ್ತಿರುತ್ತಿದ್ದೆ: ಸಿಎಂ ಸಿದ್ದರಾಮಯ್ಯ
ಇತರೆ 1,09,639 ಲಕ್ಷ ಕೋಟಿ ರೂಪಾಯಿ ಮೀಸಲು
Anil Kalkere
| Edited By: Rakesh Nayak Manchi|

Updated on: Jul 03, 2023 | 8:34 PM

Share

ಬೆಂಗಳೂರು: ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ಬರೆದಿದ್ದರೆ ನಾನು ಇಂದು ಮುಖ್ಯಮಂತ್ರಿ ಆಗುತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದರು. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಹಡಪದ ಅಪ್ಪಣ್ಣ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ಇಲ್ಲದಿದ್ದರೆ ನಾನು ಎಮ್ಮೆ ಕಾಯುತ್ತಿರುತ್ತಿದೆ. ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಅವರು ಕಲ್ಲು ಒಡೆಯುತ್ತಿದ್ದರು ಎಂದರು.

ಸ್ವಾರ್ಥಕ್ಕಾಗಿ ಜಾತಿ ವ್ಯವಸ್ಥೆ ಮಾಡಿದ್ದಾರೆ ಎಂದು ಹೇಳಿದ ಸಿದ್ದರಾಮಯ್ಯ, ಜಾತಿ ವ್ಯವಸ್ಥೆ ವಿರುದ್ಧ ಬುದ್ಧ, ಬಸವಣ್ಣ ಹೋರಾಟ ಮಾಡಿದ್ದರು. ನಾವು ಮನುಷ್ಯರಾಗಿ ಬದುಕಿ ಸಮಾಜದಲ್ಲಿ ಪರಿವರ್ತನೆ ತರಬೇಕು. ಬಸವಣ್ಣನವರು ಕೆಳವರ್ಗದ ಜನರ ಪರವಾಗಿ‌‌ ಕೆಲಸ ಮಾಡಿದ್ದರು. ಅಸಮಾನತೆ ಇದ್ದರೆ ಸಮಾಜದಲ್ಲಿ ಸಾಮರಸ್ಯ ಇರುವುದಿಲ್ಲ. ಹೀಗಾಗಿ ಬಸವಣ್ಣ ಅನುಭವ ಮಂಟಪ ನಿರ್ಮಾಣ ಮಾಡಿದರು ಎಂದರು.

ಇದನ್ನೂ ಓದಿ: ಈಶ್ವರಪ್ಪಗೆ ಸನ್ಮಾನಿಸಲು ನಿರಾಕರಿಸಿದ ಸಿದ್ದರಾಮಯ್ಯ: ಸಮುದಾಯದ ಕಾರ್ಯಕ್ರಮದಲ್ಲಿ ಉಭಯ ನಾಯಕರ ಮುನಿಸು ಬಹಿರಂಗ

ಕರ್ನಾಟಕ ಸರ್ಕಾರ ಬಹಳಷ್ಟು ಮಹಾಪುರುಷರ ಜಯಂತಿ ಆಚರಣೆ ಮಾಡುತ್ತಿದ್ದೇವೆ. ಯಾಕೆಂದರೆ ಅಪ್ಪಣ್ಣ ಅವರು ಆಕಸ್ಮಿಕವಾಗಿ ಹಡಪದ ಜಾತಿಗೆ ಹುಟ್ಟಿದವರು. ಆದರೆ ಅವರ ಬದುಕು ನೋಡಿದರೆ ಕಡಪದ ಜಾತಿಗೆ ಮೀಸಲಾಗಿಲ್ಲ. ಇಡೀ ಮನುಕುಲಕ್ಕೆ ಮೀಸಲಾದವರು ಎಂದು ಸಿದ್ದರಾಮಯ್ಯ ಹೇಳಿದರು.

ತಮ್ಮ ಕಾರಿನ ಮೇಲೆ ಕಾಗೆ ಕುಳಿತ ಪ್ರಸಂಗ ಸ್ಮರಿಸಿದ ಸಿದ್ದರಾಮಯ್ಯ

ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಕಾಗೆ ಕುಳಿತುಕೊಂಡಿದ್ದು ಭಾರೀ ಚರ್ಚೆಯಾಗಿತ್ತು. ಈ ಬಗ್ಗೆ ಕಾರ್ಯಕ್ರಮದಲ್ಲಿ ಸ್ಮರಿಸಿದ ಅವರು, ನನ್ನ ಕಾರಿನ ಮೇಲೆ ಕಾಗೆ ಕುಳಿತಿದ್ದಕ್ಕೆ ಭಯಂಕರ ಚರ್ಚೆ ನಡೆಯಿತು. ಒಬ್ಬರು ನಾನು ಬಜೆಟ್ ಮಂಡಿಸಲ್ಲ, ಕುರ್ಚಿ ಕಳೆದುಕೊಳ್ಳುತ್ತೇನೆ ಎಂದಿದ್ದರು. ಇನ್ನೊಬ್ಬರು ಬಜೆಟ್ ಮಂಡಿಸಿದ ಮೇಲೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದಿದ್ದರು. ಆದರೆ ಮೌಢ್ಯದ ಕಾಗೆ ಹಾರಿಸಿದವರು ನಾಪತ್ತೆಯಾದರು. ಕಾಗೆ ಕುಳಿತ ಬಳಿಕವೂ 2 ಬಜೆಟ್ ಮಂಡಿಸಿ ಅಧಿಕಾರ ನಿರ್ವಹಿಸಿದೆ. ಆದ್ದರಿಂದ ಮೌಢ್ಯವನ್ನು ನಂಬಬೇಡಿ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ