AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಹಜ್ ಯಾತ್ರೆ  ಪ್ರಾರಂಭ: ಬೆಂಗಳೂರಿನಿಂದ ತೆರಳುವ ಮೊದಲ ವಿಮಾನಕ್ಕೆ ಸಿಎಂ ಚಾಲನೆ

ನಾಳೆಯಿಂದ (ಜೂನ್​ 9) ರಿಂದ ಹಜ್ ಯಾತ್ರೆ ಪ್ರಾರಂಭವಾಗಲಿದ್ದು, ನಾಳೆ ಬೆಂಗಳೂರಿನಿಂದ ತೆರಳುವ ಮೊದಲ ವಿಮಾನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.

ಇಂದಿನಿಂದ ಹಜ್ ಯಾತ್ರೆ  ಪ್ರಾರಂಭ: ಬೆಂಗಳೂರಿನಿಂದ ತೆರಳುವ ಮೊದಲ ವಿಮಾನಕ್ಕೆ ಸಿಎಂ ಚಾಲನೆ
ಹಜ್​​
TV9 Web
| Edited By: |

Updated on:Jun 09, 2022 | 8:09 AM

Share

ಬೆಂಗಳೂರು: ಜೂನ್​ 9 ರಿಂದ ಹಜ್ (Hajj) ಯಾತ್ರೆ ಪ್ರಾರಂಭವಾಗಲಿದ್ದು, ಬೆಂಗಳೂರಿನಿಂದ (Bengaluru) ತೆರಳುವ ಮೊದಲ ವಿಮಾನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಚಾಲನೆ ನೀಡಿದ್ದಾರೆ. ಬೆಂಗಳೂರಿನ ಹೆಗಡೆನಗರದಲ್ಲಿರುವ ಹಜ್​ ಭವನದಲ್ಲಿ ಸಮಾರಂಭ ನಡೆದಿದೆ. ಇಂದು ಮೊದಲ ವಿಮಾನದ ಮೂಲಕ 450 ಜನರ ಹಜ್ ಯಾತ್ರೆಗೆ ತೆರಳಿದ್ದಾರೆ. ಕಾರ್ಯಕ್ರಮದಲ್ಲಿ ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನಾ ಶಾಫಿ ಸಅದಿ, ಹಜ್ ಸಮಿತಿ ಅಧ್ಯಕ್ಷ ರವೂಫುದ್ದೀನ್ ಕಚೇರಿವಾಲೆ, ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್​, ವಿಧಾನಸಭೆಯ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ (UT Khadar)​, ರಾಜ್ಯಸಭೆ ಸದಸ್ಯ ನಾಸೀರ್ ಹುಸೇನ್  ಮತ್ತು ರೋಷನ್ ಬೇಗ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ.  ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಹಜ್‌ಗೆ ಹೋಗಿ ಬಂದ ನಂತರ ಹಾಜಿಯಾಗಿ ಕಟ್ಟುನಿಟ್ಟಿನ ಬದುಕು ನಡೆಸಬೇಕು. ಅತ್ಯಂತ ಶುದ್ಧ ಬದುಕನ್ನು ನಡೆಸಬೇಕು. ಆಗ ಅಲ್ಲಿಗೆ ಹೋಗಿ ಬಂದದ್ದು ಸಾರ್ಥಕವಾಗುತ್ತದೆ. ನಿಮ್ಮ ದುವಾ ಪೂರ್ಣವಾಗಬೇಕಾದರೆ ಒಳ್ಳೆತನದಿಂದ ನಡೆದುಕೊಳ್ಳುವುದು ಅಗತ್ಯ. ಕೆಲವರು ಮಾತ್ರ ಮನುಷ್ಯತ್ವದಿಂದ ನಡೆದುಕೊಂಡು ದೇವಮಾನವರಾಗುತ್ತಾರೆ. ಬದುಕಿನಲ್ಲಿ ಏನಾದರೂ ಪ್ರಾಪ್ತಿಯಾಗಬೇಕಾದರೆ ಒಳ್ಳೆಯ ಗುಣಗಳು ಮತ್ತು ಆಚಾರ ವಿಚಾರಗಳಿಂದ ಮಾತ್ರ ಸಾಧ್ಯ. ಎಲ್ಲಿ ಒಳ್ಳೆತನವಿದೆ ಅಲ್ಲಿ ಭಗವಂತನಿರುತ್ತಾನೆ.

ಪ್ರತಿ ಮನುಷ್ಯನಲ್ಲಿ ಒಳ್ಳೆಯದು ಮತ್ತು ಕೆಟ್ಟದ್ದು ಇರುತ್ತದೆ. ನಮ್ಮಲ್ಲಿರುವ ಯಾವ ಗುಣ ಅಂತಿಮವಾಗಿ ಜಯಶಾಲಿಯಾಗುತ್ತದೆ ಎನ್ನುವುದು ನಮ್ಮ ಇಚ್ಛಾಶಕ್ತಿಯನ್ನು ಅವಲಂಬಿಸಿದೆ. ಮಾನವೀಯತೆಯ ಆಧಾರದ ಮೇಲೆ ನಡೆದುಕೊಂಡಾಗ ಭಗವಂತನಿಗೆ ಅತ್ಯಂತ ಪ್ರಿಯವಾಗುತ್ತದೆ. ಭಗವಂತನಿಗೆ ಪ್ರೀತಿಯಾಗಿರುವ ಬದುಕನ್ನು ನಾವು ಬದುಕಬೇಕು. ಇದೇ ಎಲ್ಲಾ ಧರ್ಮಗಳ ಸಾರವಾಗಿದೆ. ಒಬ್ಬ ಮನುಷ್ಯ ಇನ್ನೊಬ್ಬ ಮನುಷ್ಯನನ್ನು ಪ್ರೀತಿಸಿದಾಗ ಇದು ಸಾಧ್ಯವಾಗುತ್ತದೆ. ಯಾವ ಮಣ್ಣಿನಲ್ಲಿ ಹುಟ್ಟಿರುತ್ತೇವೋ ಆ ದೇಶದ ಮೇಲೆ ಪ್ರೀತಿ ಭಕ್ತಿ ಇರಬೇಕು ಎಂದು ಕಿವಿ ಮಾತು ಹೇಳಿದ್ದಾರೆ.

Read more at: https://kannada.oneindia.com/news/bengaluru/all-religions-preach-humanity-bommai-wishes-haj-yatra-2022-257929.html

Read more at: https://kannada.oneindia.com/news/bengaluru/all-religions-preach-humanity-bommai-wishes-haj-yatra-2022-257929.html

Published On - 9:57 pm, Wed, 8 June 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ