AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕರ್ತವ್ಯಲೋಪ; ಹಲಸೂರು ಠಾಣೆ ಇನ್ಸ್​ಪೆಕ್ಟರ್​ ಅಮಾನತು

ಈ ಹಿಂದೆ ಡಿ.ಜೆ.ಹಳ್ಳಿ ಠಾಣೆ ಇನ್ಸ್​​ಪೆಕ್ಟರ್ ಆಗಿದ್ದ ವೇಳೆ ಗಾಂಜಾ ಸೀಜ್‌ ಮಾಡಿದ್ದ ವಾಹನವನ್ನು ಅಕ್ರಮವಾಗಿ ಬಿಟ್ಟಿದ್ದು, ಈ ಮೂಲಕ ಗಾಂಜಾ ಜಪ್ತಿ ಕೇಸ್‌ನಲ್ಲಿ ಆರೋಪಿಗಳ ಜೊತೆ ಶಾಮೀಲಾಗಿದ್ದ ಆರೋಪ ಕೇಳಿಬಂದಿತ್ತು. ಈ ಸಂಬಂಧ ಇನ್ಸ್​​ಪೆಕ್ಟರ್​​​ ಪ್ರಕಾಶ್‌ ವಿರುದ್ಧ ದೂರು ದಾಖಲಾಗಿತ್ತು.

ಬೆಂಗಳೂರು: ಕರ್ತವ್ಯಲೋಪ; ಹಲಸೂರು ಠಾಣೆ ಇನ್ಸ್​ಪೆಕ್ಟರ್​ ಅಮಾನತು
ಸಾಂದರ್ಭಿಕ ಚಿತ್ರ
Shivaprasad B
| Edited By: |

Updated on: Oct 17, 2023 | 8:40 PM

Share

ಬೆಂಗಳೂರು, ಅ.17: ಕರ್ತವ್ಯಲೋಪ ಹಿನ್ನೆಲೆ ಹಲಸೂರು ಪೊಲೀಸ್​ ಠಾಣೆ(Halasuru police Station) ಇನ್ಸ್​ಪೆಕ್ಟರ್ ಪ್ರಕಾಶ್‌ ಎಂಬುವವರನ್ನು​ ಅಮಾನತು ಮಾಡಲಾಗಿದೆ. ಈ ಹಿಂದೆ ಡಿ.ಜೆ.ಹಳ್ಳಿ ಠಾಣೆ ಇನ್ಸ್​​ಪೆಕ್ಟರ್ ಆಗಿದ್ದ ವೇಳೆ ಗಾಂಜಾ ಸೀಜ್‌ ಮಾಡಿದ್ದ ವಾಹನವನ್ನು ಅಕ್ರಮವಾಗಿ ಬಿಟ್ಟಿದ್ದು, ಈ ಮೂಲಕ ಗಾಂಜಾ ಜಪ್ತಿ ಕೇಸ್‌ನಲ್ಲಿ ಆರೋಪಿಗಳ ಜೊತೆ ಶಾಮೀಲಾಗಿದ್ದ ಆರೋಪ ಕೇಳಿಬಂದಿತ್ತು. ಈ ಸಂಬಂಧ ಇನ್ಸ್​​ಪೆಕ್ಟರ್​​​ ಪ್ರಕಾಶ್‌ ವಿರುದ್ಧ ದೂರು ದಾಖಲಾಗಿತ್ತು. ಜೊತೆಗೆ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್‌ ತನಿಖೆಗೆ ಆದೇಶಿಸಿದ್ದರು. ಇದೀಗ ಆಂತರಿಕ ತನಿಖೆಯಲ್ಲಿ ಕರ್ತವ್ಯಲೋಪ ಸಾಬೀತು ಆದ ಹಿನ್ನೆಲೆ ಅಮಾನತು ಮಾಡಲಾಗಿದೆ.

ಇನ್ನು ನಿನ್ನೆಯಷ್ಟೇ  ಮಹಿಳೆಯರಿಗೆ ಸಾರಿಗೆ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿರುವ ಶಕ್ತಿ ಯೋಜನೆಯ ಉಚಿತ ಟಿಕೆಟ್​ಗಳನ್ನು ಬಿಎಂಟಿಸಿ ಬಸ್ ಕಂಡೆಕ್ಟರ್ ಹರಿದು ಬಿಸಾಡುವ ಮೂಲಕ ಸರ್ಕಾರಕ್ಕೆ ನಷ್ಟ ಉಂಟು ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಹಿನ್ನಲೆ ತನಿಖೆ ನಡೆಸಿದ ಅಧಿಕಾರಿಗಳು ಕಂಡಕ್ಟರ್​ನನ್ನು ಅಮಾನತು ಮಾಡಿದ್ದರು. ಹೌದು, ಪ್ರಕಾಶ್ ಅರ್ಜುನ್ ಕೊಟ್ಯಾಳ ಎಂಬುವವರು ಮೆಜೆಸ್ಟಿಕ್​​​​ನಿಂದ ತಾವರಕೆರೆ ಮಾರ್ಗದಲ್ಲಿ ಸಂಚರಿಸುವ ಬಿಎಂಟಿಸಿ ಬಸ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ವೇಳೆ ಈ ಘಟನೆ ಬೆಳಕಿಗೆ ಬಂದಿತ್ತು.

ಇದನ್ನೂ ಓದಿ:ಏರ್ ಇಂಡಿಯಾ ವಿಮಾನ ಸುರಕ್ಷತಾ ಮುಖ್ಯಸ್ಥರ ವಿರುದ್ಧ ಡಿಜಿಸಿಎ ಕ್ರಮ, ಒಂದು ತಿಂಗಳ ಕಾಲ ಅಮಾನತು

ಸಿಸಿಬಿ ಪೊಲೀಸರಿಂದ ವಿದೇಶಿ ಸಿಗರೇಟ್ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ದಾಳಿ

ಬೆಂಗಳೂರು: ವಿದೇಶಿ ಸಿಗರೇಟ್​ಗಳನ್ನು ಮಾರಾಟ ಮಾಡಲು ಅಕ್ರಮವಾಗಿ ದಾಸ್ತಾನು ಮಾಡಿದ್ದ ಗೋಡೌನ್ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಸುಮಾರು 22 ಲಕ್ಷ ಮೌಲ್ಯದ ವಿದೇಶಿ ಸಿಗರೇಟ್​ ಸಹಿತ ಅದನ್ನು ಸಂಗ್ರಹಿಸಿಟ್ಟಿದ್ದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಸಿಟಿ ಮಾರ್ಕೆಟ್ ಬಳಿಯ ಗೋಡೌನ್​ನಲ್ಲಿ ದಾಸ್ತಾನು ಮಾಡಲಾಗಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಲಾಗಿತ್ತು. ಇನ್ನು ಇದನ್ನು ದೆಹಲಿಯಿಂದ ಕೊರಿಯರ್ ಮೂಲಕ ತರಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಕುರಿತು ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ