AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕರ್ತವ್ಯಲೋಪ; ಹಲಸೂರು ಠಾಣೆ ಇನ್ಸ್​ಪೆಕ್ಟರ್​ ಅಮಾನತು

ಈ ಹಿಂದೆ ಡಿ.ಜೆ.ಹಳ್ಳಿ ಠಾಣೆ ಇನ್ಸ್​​ಪೆಕ್ಟರ್ ಆಗಿದ್ದ ವೇಳೆ ಗಾಂಜಾ ಸೀಜ್‌ ಮಾಡಿದ್ದ ವಾಹನವನ್ನು ಅಕ್ರಮವಾಗಿ ಬಿಟ್ಟಿದ್ದು, ಈ ಮೂಲಕ ಗಾಂಜಾ ಜಪ್ತಿ ಕೇಸ್‌ನಲ್ಲಿ ಆರೋಪಿಗಳ ಜೊತೆ ಶಾಮೀಲಾಗಿದ್ದ ಆರೋಪ ಕೇಳಿಬಂದಿತ್ತು. ಈ ಸಂಬಂಧ ಇನ್ಸ್​​ಪೆಕ್ಟರ್​​​ ಪ್ರಕಾಶ್‌ ವಿರುದ್ಧ ದೂರು ದಾಖಲಾಗಿತ್ತು.

ಬೆಂಗಳೂರು: ಕರ್ತವ್ಯಲೋಪ; ಹಲಸೂರು ಠಾಣೆ ಇನ್ಸ್​ಪೆಕ್ಟರ್​ ಅಮಾನತು
ಸಾಂದರ್ಭಿಕ ಚಿತ್ರ
Shivaprasad B
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 17, 2023 | 8:40 PM

Share

ಬೆಂಗಳೂರು, ಅ.17: ಕರ್ತವ್ಯಲೋಪ ಹಿನ್ನೆಲೆ ಹಲಸೂರು ಪೊಲೀಸ್​ ಠಾಣೆ(Halasuru police Station) ಇನ್ಸ್​ಪೆಕ್ಟರ್ ಪ್ರಕಾಶ್‌ ಎಂಬುವವರನ್ನು​ ಅಮಾನತು ಮಾಡಲಾಗಿದೆ. ಈ ಹಿಂದೆ ಡಿ.ಜೆ.ಹಳ್ಳಿ ಠಾಣೆ ಇನ್ಸ್​​ಪೆಕ್ಟರ್ ಆಗಿದ್ದ ವೇಳೆ ಗಾಂಜಾ ಸೀಜ್‌ ಮಾಡಿದ್ದ ವಾಹನವನ್ನು ಅಕ್ರಮವಾಗಿ ಬಿಟ್ಟಿದ್ದು, ಈ ಮೂಲಕ ಗಾಂಜಾ ಜಪ್ತಿ ಕೇಸ್‌ನಲ್ಲಿ ಆರೋಪಿಗಳ ಜೊತೆ ಶಾಮೀಲಾಗಿದ್ದ ಆರೋಪ ಕೇಳಿಬಂದಿತ್ತು. ಈ ಸಂಬಂಧ ಇನ್ಸ್​​ಪೆಕ್ಟರ್​​​ ಪ್ರಕಾಶ್‌ ವಿರುದ್ಧ ದೂರು ದಾಖಲಾಗಿತ್ತು. ಜೊತೆಗೆ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್‌ ತನಿಖೆಗೆ ಆದೇಶಿಸಿದ್ದರು. ಇದೀಗ ಆಂತರಿಕ ತನಿಖೆಯಲ್ಲಿ ಕರ್ತವ್ಯಲೋಪ ಸಾಬೀತು ಆದ ಹಿನ್ನೆಲೆ ಅಮಾನತು ಮಾಡಲಾಗಿದೆ.

ಇನ್ನು ನಿನ್ನೆಯಷ್ಟೇ  ಮಹಿಳೆಯರಿಗೆ ಸಾರಿಗೆ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿರುವ ಶಕ್ತಿ ಯೋಜನೆಯ ಉಚಿತ ಟಿಕೆಟ್​ಗಳನ್ನು ಬಿಎಂಟಿಸಿ ಬಸ್ ಕಂಡೆಕ್ಟರ್ ಹರಿದು ಬಿಸಾಡುವ ಮೂಲಕ ಸರ್ಕಾರಕ್ಕೆ ನಷ್ಟ ಉಂಟು ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಹಿನ್ನಲೆ ತನಿಖೆ ನಡೆಸಿದ ಅಧಿಕಾರಿಗಳು ಕಂಡಕ್ಟರ್​ನನ್ನು ಅಮಾನತು ಮಾಡಿದ್ದರು. ಹೌದು, ಪ್ರಕಾಶ್ ಅರ್ಜುನ್ ಕೊಟ್ಯಾಳ ಎಂಬುವವರು ಮೆಜೆಸ್ಟಿಕ್​​​​ನಿಂದ ತಾವರಕೆರೆ ಮಾರ್ಗದಲ್ಲಿ ಸಂಚರಿಸುವ ಬಿಎಂಟಿಸಿ ಬಸ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ವೇಳೆ ಈ ಘಟನೆ ಬೆಳಕಿಗೆ ಬಂದಿತ್ತು.

ಇದನ್ನೂ ಓದಿ:ಏರ್ ಇಂಡಿಯಾ ವಿಮಾನ ಸುರಕ್ಷತಾ ಮುಖ್ಯಸ್ಥರ ವಿರುದ್ಧ ಡಿಜಿಸಿಎ ಕ್ರಮ, ಒಂದು ತಿಂಗಳ ಕಾಲ ಅಮಾನತು

ಸಿಸಿಬಿ ಪೊಲೀಸರಿಂದ ವಿದೇಶಿ ಸಿಗರೇಟ್ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ದಾಳಿ

ಬೆಂಗಳೂರು: ವಿದೇಶಿ ಸಿಗರೇಟ್​ಗಳನ್ನು ಮಾರಾಟ ಮಾಡಲು ಅಕ್ರಮವಾಗಿ ದಾಸ್ತಾನು ಮಾಡಿದ್ದ ಗೋಡೌನ್ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಸುಮಾರು 22 ಲಕ್ಷ ಮೌಲ್ಯದ ವಿದೇಶಿ ಸಿಗರೇಟ್​ ಸಹಿತ ಅದನ್ನು ಸಂಗ್ರಹಿಸಿಟ್ಟಿದ್ದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಸಿಟಿ ಮಾರ್ಕೆಟ್ ಬಳಿಯ ಗೋಡೌನ್​ನಲ್ಲಿ ದಾಸ್ತಾನು ಮಾಡಲಾಗಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಲಾಗಿತ್ತು. ಇನ್ನು ಇದನ್ನು ದೆಹಲಿಯಿಂದ ಕೊರಿಯರ್ ಮೂಲಕ ತರಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಕುರಿತು ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Shivaprasad B
Shivaprasad B
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು