AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಪ್ಪು ಭಾವಚಿತ್ರ ಇದ್ದ ಬ್ಯಾನರ್ ಹರಿದು ಹಾಕಿದ ಪುನೀತ್ ಕೆರೆಹಳ್ಳಿ ವಶಕ್ಕೆ ಪಡೆದ ಪೊಲೀಸ್

ಶಿವಮೊಗ್ಗದಲ್ಲಿನ ಸಾವರ್ಕರ್ ಭಾವಚಿತ್ರದ ವಿವಾದ ಹಿನ್ನಲೆ ಪ್ರತಿಕಾರವಾಗಿ ಕಾಂಗ್ರೆಸ್ ಅಳವಡಿಸಿದ್ದ ಟಿಪ್ಪು ಭಾವ ಚಿತ್ರವನ್ನು ಪುನೀತ್ ಹರಿದಿದ್ದ. ಸದ್ಯ ಪ್ರಕರಣ ಸಂಬಂಧ ಪೊಲೀಸರು, ಚಿಕ್ಕಪ್ಪನ ಮನೆಯಲ್ಲಿ ಸತ್ಯನಾರಾಯಣ ಪೂಜೆಯಲ್ಲಿ ಭಾಗಿಯಾಗಿದ್ದ ಪುನೀತ್ ಮತ್ತು ಸ್ನೇಹಿತರನ್ನು ವಶಕ್ಕೆ ಪಡೆದಿದ್ದಾರೆ.

ಟಿಪ್ಪು ಭಾವಚಿತ್ರ ಇದ್ದ ಬ್ಯಾನರ್ ಹರಿದು ಹಾಕಿದ ಪುನೀತ್ ಕೆರೆಹಳ್ಳಿ ವಶಕ್ಕೆ ಪಡೆದ ಪೊಲೀಸ್
ಪುನೀತ್ ಕೆರೆಹಳ್ಳಿ ವಶಕ್ಕೆ ಪಡೆದ ಪೊಲೀಸ್
TV9 Web
| Edited By: |

Updated on:Aug 14, 2022 | 3:03 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಟಿಪ್ಪು ಸುಲ್ತಾನ್(Tipu Sulthan) ಭಾವ ಚಿತ್ರ ಇದ್ದ ಬ್ಯಾನರ್ ಹರಿದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೀಣ್ಯದ ನಾಗಸಂದ್ರದಲ್ಲಿ ಹಲಸೂರು ಗೇಟ್ ಠಾಣೆ ಪೊಲೀಸರು ಪುನೀತ್ ವಶಕ್ಕೆ ಪಡೆದಿದ್ದಾರೆ.

ಆಗಸ್ಟ್ 13ರ ರಾತ್ರಿ ನಗರದ ಕೆ.ಆರ್.ವೃತ್ತದಲ್ಲಿ ಹಾಕಿದ್ದ ಕಾಂಗ್ರೆಸ್ನ ಟಿಪ್ಪು ಬ್ಯಾನರ್ ಹರಿದು ಪುನೀತ್ ಕೆರೆಹಳ್ಳಿ ದರ್ಪ ಮೆರೆದಿದ್ದ. ಅಲ್ಲದೆ ಕೃತ್ಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಲೈವ್ ಮಾಡಿದ್ದ. ಈ ಬಗ್ಗೆ ಕಾಂಗ್ರೆಸ್ ಮುಖಂಡ ಮಂಜುನಾಥ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಶಿವಮೊಗ್ಗದಲ್ಲಿನ ಸಾವರ್ಕರ್ ಭಾವಚಿತ್ರದ ವಿವಾದ ಹಿನ್ನಲೆ ಪ್ರತಿಕಾರವಾಗಿ ಕಾಂಗ್ರೆಸ್ ಅಳವಡಿಸಿದ್ದ ಟಿಪ್ಪು ಭಾವ ಚಿತ್ರವನ್ನು ಪುನೀತ್ ಹರಿದಿದ್ದ. ಸದ್ಯ ಪ್ರಕರಣ ಸಂಬಂಧ ಪೊಲೀಸರು, ಚಿಕ್ಕಪ್ಪನ ಮನೆಯಲ್ಲಿ ಸತ್ಯನಾರಾಯಣ ಪೂಜೆಯಲ್ಲಿ ಭಾಗಿಯಾಗಿದ್ದ ಪುನೀತ್ ಮತ್ತು ಸ್ನೇಹಿತರನ್ನು ವಶಕ್ಕೆ ಪಡೆದಿದ್ದಾರೆ.

ಪುನೀತ್ ಕೆರೆಹಳ್ಳಿ, ಅನಂತ್ ರಾವ್, ಕಿರಣ್ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಠಾಣೆಗೆ ಕರೆತಂದು ಬಂಧನ ಪ್ರಕ್ರಿಯೆ ಮುಗಿಸಿದ್ದಾರೆ. ಇಂದು ಸಂಜೆಯ ನಂತರ ನ್ಯಾಯಾಧೀಶರ ನಿವಾಸಕ್ಕೆ ಬಂಧಿತರನ್ನು ಕರೆ ತರಲಾಗುತ್ತೆ.

ಇದನ್ನೂ ಓದಿ: ಟಿಪ್ಪು ಭಾವಚಿತ್ರ ಇದ್ದ ಬ್ಯಾನರ್ ಹರಿದುಹಾಕಿದ ಪುನೀತ್ ಕೆರೆಹಳ್ಳಿ ಆ್ಯಂಡ್ ಟೀಂ; ಹೋರಾಟದ ಎಚ್ಚರಿಕೆ ನೀಡಿದ ಡಿಕೆಶಿ

ಸಾವರ್ಕರ್ ಮತ್ತು ಟಿಪ್ಪು ಸುಲ್ತಾನ್ ನಡುವೆ ಹೋಲಿಕೆ ಸರಿಯಲ್ಲ

ಇನ್ನು ಮತ್ತೊಂದು ಕಡೆ ಬ್ಯಾನರ್ಗಳ ಬಗ್ಗೆ ಆಕ್ಷೇಪ ಇದ್ದರೆ ದೂರು ಸಲ್ಲಿಸಬೇಕು ಎಂದು ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ದಾರೆ. ಯಾರೂ ಸೌಹಾರ್ದತೆ ಹಾಳುಮಾಡುವ ಕೆಲಸ ಮಾಡಬಾರದು. ಸಾವರ್ಕರ್ ಮತ್ತು ಟಿಪ್ಪು ಸುಲ್ತಾನ್ ನಡುವೆ ಹೋಲಿಕೆ ಸರಿಯಲ್ಲ ಎಂದರು. ಇದೇ ವೇಳೆ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ಮೈದಾನ ಪಾಲಿಕೆಗೆ ಸೇರಿರುವ ಜಾಗ. ಗಣೇಶ ಪ್ರತಿಷ್ಠಾಪನೆ ಬಗ್ಗೆ ಪಾಲಿಕೆ ನಿರ್ಧಾರ ಕೈಗೊಳ್ಳುತ್ತೆ ಎಂದರು.

Published On - 2:44 pm, Sun, 14 August 22

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?