AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಪ್ಪು ಭಾವಚಿತ್ರ ಇದ್ದ ಬ್ಯಾನರ್ ಹರಿದು ಹಾಕಿದ ಪುನೀತ್ ಕೆರೆಹಳ್ಳಿ ವಶಕ್ಕೆ ಪಡೆದ ಪೊಲೀಸ್

ಶಿವಮೊಗ್ಗದಲ್ಲಿನ ಸಾವರ್ಕರ್ ಭಾವಚಿತ್ರದ ವಿವಾದ ಹಿನ್ನಲೆ ಪ್ರತಿಕಾರವಾಗಿ ಕಾಂಗ್ರೆಸ್ ಅಳವಡಿಸಿದ್ದ ಟಿಪ್ಪು ಭಾವ ಚಿತ್ರವನ್ನು ಪುನೀತ್ ಹರಿದಿದ್ದ. ಸದ್ಯ ಪ್ರಕರಣ ಸಂಬಂಧ ಪೊಲೀಸರು, ಚಿಕ್ಕಪ್ಪನ ಮನೆಯಲ್ಲಿ ಸತ್ಯನಾರಾಯಣ ಪೂಜೆಯಲ್ಲಿ ಭಾಗಿಯಾಗಿದ್ದ ಪುನೀತ್ ಮತ್ತು ಸ್ನೇಹಿತರನ್ನು ವಶಕ್ಕೆ ಪಡೆದಿದ್ದಾರೆ.

ಟಿಪ್ಪು ಭಾವಚಿತ್ರ ಇದ್ದ ಬ್ಯಾನರ್ ಹರಿದು ಹಾಕಿದ ಪುನೀತ್ ಕೆರೆಹಳ್ಳಿ ವಶಕ್ಕೆ ಪಡೆದ ಪೊಲೀಸ್
ಪುನೀತ್ ಕೆರೆಹಳ್ಳಿ ವಶಕ್ಕೆ ಪಡೆದ ಪೊಲೀಸ್
TV9 Web
| Edited By: ಆಯೇಷಾ ಬಾನು|

Updated on:Aug 14, 2022 | 3:03 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಟಿಪ್ಪು ಸುಲ್ತಾನ್(Tipu Sulthan) ಭಾವ ಚಿತ್ರ ಇದ್ದ ಬ್ಯಾನರ್ ಹರಿದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೀಣ್ಯದ ನಾಗಸಂದ್ರದಲ್ಲಿ ಹಲಸೂರು ಗೇಟ್ ಠಾಣೆ ಪೊಲೀಸರು ಪುನೀತ್ ವಶಕ್ಕೆ ಪಡೆದಿದ್ದಾರೆ.

ಆಗಸ್ಟ್ 13ರ ರಾತ್ರಿ ನಗರದ ಕೆ.ಆರ್.ವೃತ್ತದಲ್ಲಿ ಹಾಕಿದ್ದ ಕಾಂಗ್ರೆಸ್ನ ಟಿಪ್ಪು ಬ್ಯಾನರ್ ಹರಿದು ಪುನೀತ್ ಕೆರೆಹಳ್ಳಿ ದರ್ಪ ಮೆರೆದಿದ್ದ. ಅಲ್ಲದೆ ಕೃತ್ಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಲೈವ್ ಮಾಡಿದ್ದ. ಈ ಬಗ್ಗೆ ಕಾಂಗ್ರೆಸ್ ಮುಖಂಡ ಮಂಜುನಾಥ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಶಿವಮೊಗ್ಗದಲ್ಲಿನ ಸಾವರ್ಕರ್ ಭಾವಚಿತ್ರದ ವಿವಾದ ಹಿನ್ನಲೆ ಪ್ರತಿಕಾರವಾಗಿ ಕಾಂಗ್ರೆಸ್ ಅಳವಡಿಸಿದ್ದ ಟಿಪ್ಪು ಭಾವ ಚಿತ್ರವನ್ನು ಪುನೀತ್ ಹರಿದಿದ್ದ. ಸದ್ಯ ಪ್ರಕರಣ ಸಂಬಂಧ ಪೊಲೀಸರು, ಚಿಕ್ಕಪ್ಪನ ಮನೆಯಲ್ಲಿ ಸತ್ಯನಾರಾಯಣ ಪೂಜೆಯಲ್ಲಿ ಭಾಗಿಯಾಗಿದ್ದ ಪುನೀತ್ ಮತ್ತು ಸ್ನೇಹಿತರನ್ನು ವಶಕ್ಕೆ ಪಡೆದಿದ್ದಾರೆ.

ಪುನೀತ್ ಕೆರೆಹಳ್ಳಿ, ಅನಂತ್ ರಾವ್, ಕಿರಣ್ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಠಾಣೆಗೆ ಕರೆತಂದು ಬಂಧನ ಪ್ರಕ್ರಿಯೆ ಮುಗಿಸಿದ್ದಾರೆ. ಇಂದು ಸಂಜೆಯ ನಂತರ ನ್ಯಾಯಾಧೀಶರ ನಿವಾಸಕ್ಕೆ ಬಂಧಿತರನ್ನು ಕರೆ ತರಲಾಗುತ್ತೆ.

ಇದನ್ನೂ ಓದಿ: ಟಿಪ್ಪು ಭಾವಚಿತ್ರ ಇದ್ದ ಬ್ಯಾನರ್ ಹರಿದುಹಾಕಿದ ಪುನೀತ್ ಕೆರೆಹಳ್ಳಿ ಆ್ಯಂಡ್ ಟೀಂ; ಹೋರಾಟದ ಎಚ್ಚರಿಕೆ ನೀಡಿದ ಡಿಕೆಶಿ

ಸಾವರ್ಕರ್ ಮತ್ತು ಟಿಪ್ಪು ಸುಲ್ತಾನ್ ನಡುವೆ ಹೋಲಿಕೆ ಸರಿಯಲ್ಲ

ಇನ್ನು ಮತ್ತೊಂದು ಕಡೆ ಬ್ಯಾನರ್ಗಳ ಬಗ್ಗೆ ಆಕ್ಷೇಪ ಇದ್ದರೆ ದೂರು ಸಲ್ಲಿಸಬೇಕು ಎಂದು ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ದಾರೆ. ಯಾರೂ ಸೌಹಾರ್ದತೆ ಹಾಳುಮಾಡುವ ಕೆಲಸ ಮಾಡಬಾರದು. ಸಾವರ್ಕರ್ ಮತ್ತು ಟಿಪ್ಪು ಸುಲ್ತಾನ್ ನಡುವೆ ಹೋಲಿಕೆ ಸರಿಯಲ್ಲ ಎಂದರು. ಇದೇ ವೇಳೆ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ಮೈದಾನ ಪಾಲಿಕೆಗೆ ಸೇರಿರುವ ಜಾಗ. ಗಣೇಶ ಪ್ರತಿಷ್ಠಾಪನೆ ಬಗ್ಗೆ ಪಾಲಿಕೆ ನಿರ್ಧಾರ ಕೈಗೊಳ್ಳುತ್ತೆ ಎಂದರು.

Published On - 2:44 pm, Sun, 14 August 22

Follow Us
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ