AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಡ್ರಗ್ಸ್​ ಪಾರ್ಟಿ ಕೇಸ್: ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ ಸಿದ್ಧಾರ್ಥ ಕಪೂರ್

ಎಷ್ಟು ಜನರ ವಿಚಾರಣೆ ಮಾಡಿದರೂ ಡ್ರಗ್ಸ್ ಸುಳಿವು ಮಾತ್ರ ನಿಗೂಢವಾಗಿದೆ. ಈಗಾಗಲೇ ಡ್ರಗ್ಸ್​​ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 90 ಜನರಿಗೆ ನೋಟಿಸ್ ನೀಡಲಾಗಿದೆ.

ಬೆಂಗಳೂರಿನಲ್ಲಿ ಡ್ರಗ್ಸ್​ ಪಾರ್ಟಿ ಕೇಸ್: ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ ಸಿದ್ಧಾರ್ಥ ಕಪೂರ್
ಸಂಗ್ರಹ ಚಿತ್ರ
TV9 Web
| Edited By: |

Updated on:Aug 07, 2022 | 2:52 PM

Share

ಬೆಂಗಳೂರು: ನಗರದ ದಿ ಪಾರ್ಕ್​ ಹೋಟೆಲ್ ಡ್ರಗ್ಸ್​ ಪಾರ್ಟಿ (Drugs Party) ಕೇಸ್ ಸಂಬಂಧ ಡಿಜೆ ಸಿದ್ಧಾರ್ಥ ಕಪೂರ್ ವಿಚಾರಣೆಗೆ ಮತ್ತೆ ನೋಟಿಸ್ ಜಾರಿ ಮಾಡಲಾಗಿದೆ. ವಿಚಾರಣೆಗೆ ಹಾಜರಾಗಲು ಸಿದ್ಧಾರ್ಥ ಕಾಲಾವಕಾಶ ಕೇಳಿದ್ದಾರೆ. ಆ.15ರ ನಂತರ ವಿಚಾರಣೆಗೆ ಹಾಜರಾಗುವುದಾಗಿ ಸಿದ್ಧಾರ್ಥ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹಲಸೂರು ಪೊಲೀಸರು 2ನೇ ಬಾರಿ ವಿಚಾರಣೆಗೆ ಕರೆದಿದ್ದರು. ಡ್ರಗ್ಸ್ ತಂದವರು ಯಾರು ಎನ್ನುವುದನ್ನು ಪತ್ತೆ ಮಾಡಲು ಪೊಲೀಸರು ವಿಚಾರಣೆಗಾಗಿ ಕರೆ ಕಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಎಷ್ಟು ಜನರ ವಿಚಾರಣೆ ಮಾಡಿದರೂ ಡ್ರಗ್ಸ್ ಬಂದಿದ್ದು ಹೇಗೆ ಎನ್ನುವುದರ ಸುಳಿವು ಮಾತ್ರ ಸಿಗುತ್ತಿಲ್ಲ. ಈಗಾಗಲೇ ಡ್ರಗ್ಸ್​​ ಪಾರ್ಟಿ ಪ್ರಕರಣದಕ್ಕೆ ಸಂಬಂಧ ಸುಮಾರು 90 ಜನರಿಗೆ ನೋಟಿಸ್ ನೀಡಲಾಗಿದೆ. ಅದರಲ್ಲಿ ಕೇವಲ 30 ಮಂದಿಯಿಂದ ಮಾತ್ರ ಉತ್ತರ ಪಡೆಯಲಾಗಿದೆ. ಉಳಿದವರು ಪೊಲೀಸ್ ನೋಟಿಸ್​ ನಿರ್ಲಕ್ಷಿಸಿದ್ದಾರೆ. ಹೀಗಾಗಿ ಉತ್ತರ ಕೊಡದವರನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನ ಪಡುತ್ತಿದ್ದಾರೆ. ಅವರನ್ನು ವಿಚಾರಣೆಗೆ ಒಳಪಡಿಸಿ ತನಿಖೆ ನಡೆಸಲು ಹಲಸೂರು ಪೊಲೀಸರು ಮುಂದಾಗಿದ್ದಾರೆ.

ಇದನ್ನೂ ಓದಿ: Siddhanth Kapoor: ಬೆಂಗಳೂರು ಡ್ರಗ್ಸ್​ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಶ್ರದ್ಧಾ ಕಪೂರ್​ ಅಣ್ಣ ಸಿದ್ಧಾಂತ್​ ಕಪೂರ್​ ಹಿನ್ನೆಲೆ ಏನು?

ಬೆಂಗಳೂರು ಡ್ರಗ್ಸ್​ ಪಾರ್ಟಿಯಲ್ಲಿ ಸಿಕ್ಕಿಬಿದ್ದಿರುವ ಸಿದ್ಧಾಂತ್​ ಕಪೂರ್​ ಅವರದ್ದು ಫಿಲ್ಮಿ ಹಿನ್ನೆಲೆಯ ಕುಟುಂಬ. ಅವರ ತಂದೆ ಶಕ್ತಿ ಕಪೂರ್​ ಅವರು ಬಾಲಿವುಡ್​ನಲ್ಲಿ ಜನಪ್ರಿಯ ನಟ. ಚಿತ್ರರಂಗದಲ್ಲಿ ಶಕ್ತಿ ಕಪೂರ್​ ಅವರ ಅನುಭವ ಅಪಾರ. ಸಿದ್ಧಾಂತ್​ ಅವರ ಸಹೋದರಿ ಶ್ರದ್ಧಾ ಕಪೂರ್​ ಅವರು ಈಗಾಗಲೇ ಹಿಂದಿ ಚಿತ್ರರಂಗದಲ್ಲಿ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತುಪಡಿಸಿದ್ದಾರೆ. ಬಣ್ಣದ ಲೋಕದಲ್ಲಿ ಸಿದ್ಧಾಂತ್​ ಕಪೂರ್​ ಕೂಡ ಸಕ್ರಿಯರಾಗಿದ್ದಾರೆ. ಅದರ ನಡುವೆ ಅವರು ಡ್ರಗ್ಸ್​ ಸಹವಾಸ ಮಾಡಿರುವುದರಿಂದ ಸಂಕಷ್ಟ ಎದುರಾಗಿದೆ.

ಡ್ರಗ್ಸ್ ಪಾರ್ಟಿ ಆಯೋಜನೆ ಆರೋಪದಡಿ ಪೊಲೀಸ್​ ದಾಳಿ

ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದ ಆರೋಪದಡಿ ದಿ ಪಾರ್ಕ್​ ಫೈವ್​ಸ್ಟಾರ್​ ಹೋಟೆಲ್ (The Park Five Star Hotel)  ಮೇಲೆ ಹಲಸೂರು ಪೊಲೀಸರಿಂದ (ಜೂನ್​ 13ರಂದು) ದಾಳಿ ಮಾಡಲಾಗಿತ್ತು. ಹಲಸೂರು ಬಳಿಯ GT ಮಾಲ್ ಬಳಿಯ ಪಾರ್ಕ್ ಹೋಟೆಲ್​ನ ಪಾರ್ಟಿಯಲ್ಲಿ ನಟಿ ಶ್ರದ್ಧಾ ಕಪೂರ್ ಸಹೋದರ ನಟ ಸಿದ್ಧಾಂತ್​ ಕಪೂರ್ (Bollywood Actor) ಭಾಗಿ ಶಂಕೆ ವ್ಯಕ್ತವಾಗಿತ್ತು. ರಾತ್ರಿ 12 ಗಂಟೆಗೆ ಹೋಟೆಲ್ ಮೇಲೆ ಪೊಲೀಸರು ದಾಳಿ ಮಾಡಿದ್ದು, ಹೋಟೆಲ್​ನಲ್ಲಿ ದೊಡ್ಡ ಪ್ರಮಾಣದ ಡ್ರಗ್ಸ್ ಪಾರ್ಟಿ  ಆಯೋಜನೆ ಮಾಡಲಾಗಿತ್ತು ಎನ್ನಲಾಗಿದೆ.

ಇದನ್ನೂ ಓದಿ: Siddhanth Kapoor: ಬೆಂಗಳೂರಿನಲ್ಲಿ ಡ್ರಗ್ಸ್​ ಪಾರ್ಟಿ ಪ್ರಕರಣ; ನಟಿ ಶ್ರದ್ಧಾ ಕಪೂರ್​ ಸೋದರ ಸಿದ್ಧಾಂತ್​ಗೆ ನೋಟಿಸ್ ಸಾಧ್ಯತೆ

ಹಲಸೂರು ಇನ್ಸ್​ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ 25ಕ್ಕೂ ಅಧಿಕ ಪೊಲೀಸರಿಂದ ಹೋಟೆಲ್ ಮೇಲೆ ದಾಳಿ ಮಾಡಲಾಗಿತ್ತು. ಪಾರ್ಟಿಯಲ್ಲಿದ್ದ 50ಕ್ಕೂ ಅಧಿಕ ಜನರಿಗೆ ಮೆಡಿಕಲ್ ಟೆಸ್ಟ್ ಮಾಡಲು ಮೂರು ಟಿಟಿ ವಾಹನಗಳಲ್ಲಿ ಪೊಲೀಸರು ಆಸ್ಪತ್ರೆಗೆ ಕರೆದೊಯ್ದರು. ಪಾರ್ಟಿಯಲ್ಲಿ ಐವರು ಡ್ರಗ್ಸ್ ಸೇವನೆ ಮಾಡಿರುವುದು ಧೃಡಪಟ್ಟಿದ್ದು, ಐವರನ್ನ ವಶಕ್ಕೆ ಪಡೆದು ಎನ್‌ಡಿ ಪಿಎಸ್ ಆಕ್ಟ್ ಅಡಿ  ಹಲಸೂರು ಠಾಣೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 2:52 pm, Sun, 7 August 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ