AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hampi: ಹಂಪಿಯನ್ನು ಅತ್ಯುತ್ತಮ ಪ್ರವಾಸೋದ್ಯಮ ತಾಣವೆಂದು ಘೋಷಿಸಿದ ಕೇಂದ್ರ

Best Tourism Village: 31 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಸ್ವೀಕರಿಸಿದ 795 ಅರ್ಜಿಗಳಲ್ಲಿ ಹಂಪಿಯನ್ನು ಆಯ್ಕೆ ಮಾಡಲಾಗಿದೆ. ಇದೊಂದು ಹೆಮ್ಮೆಯ ಕ್ಷಣ ಎಂದು ಕರ್ನಾಟಕ ಪ್ರವಾಸೋದ್ಯಮ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಹೇಳಿದ್ದಾರೆ.

Hampi: ಹಂಪಿಯನ್ನು ಅತ್ಯುತ್ತಮ ಪ್ರವಾಸೋದ್ಯಮ ತಾಣವೆಂದು ಘೋಷಿಸಿದ ಕೇಂದ್ರ
ಹಂಪಿ
TV9 Web
| Edited By: |

Updated on:Sep 28, 2023 | 3:03 PM

Share

ಬೆಂಗಳೂರು, ಸೆ.28: ಕರ್ನಾಟಕದ ವಿಶ್ವ ಪಾರಂಪರಿಕ ತಾಣವಾದ ವಿಜಯನಗರ(Vijayanagara) ಸಾಮ್ರಾಜ್ಯದ ಹಂಪಿ (Hampi)ಗೆ ಈಗ ಮತ್ತೊಂದು ಗರಿ ಮೂಡಿದೆ. ಪ್ರವಾಸೋದ್ಯಮ ಸಚಿವಾಲಯವು ಬುಧವಾರ(ಸೆ.27)ದಂದು ಕರ್ನಾಟಕದ ಅಪ್ರತಿಮ ತಾಣವನ್ನು ಭಾರತದ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ-2023 ಎಂದು ಘೋಷಿಸಿದೆ. ಇದಕ್ಕೆ ಪ್ರತಿಕ್ರಿಯಿಸಿದ ಕರ್ನಾಟಕ ಪ್ರವಾಸೋದ್ಯಮ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ‘ಇದೊಂದು ಹೆಮ್ಮೆಯ ಕ್ಷಣ ಎಂದು  ಹೇಳಿದ್ದಾರೆ.

ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಈ ಘೋಷಣೆ ಮಾಡಲಾಗಿದೆ. ಯುನೆಸ್ಕೋ-ರಕ್ಷಿತ ಸೈಟ್, ಸಚಿವಾಲಯದ ಅಡಿಯಲ್ಲಿ ಕೇಂದ್ರೀಯ ನೋಡಲ್ ಏಜೆನ್ಸಿ, ರೂರಲ್ ಟೂರಿಸಂ ಮತ್ತು ರೂರಲ್ ಹೋಂಸ್ಟೇ ಆಯೋಜಿಸಿದ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ಸ್ಪರ್ಧೆ-2023 ಆವೃತ್ತಿಯನ್ನು ಆಯೋಜಿಸಲಾಗಿತ್ತು. ರಾಜ್ಯ ಸರ್ಕಾರದ ಅಧಿಕಾರಿಗಳು ಬುಧವಾರ ನವದೆಹಲಿಯಲ್ಲಿ ಈ ಪ್ರಶಸ್ತಿ ಸ್ವೀಕರಿಸಿದ್ದಾರೆ. ಇನ್ನು ಈ ಘೋಷಣೆಯಿಂದ ಗ್ರಾಮೀಣ ಮೂಲಸೌಕರ್ಯ ಮತ್ತು ಅದರ ಸಂಸ್ಕೃತಿಯನ್ನು ಸುಧಾರಿಸಲು ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಹಣವನ್ನು ಪಡೆಯಲು ಸಹಾಯ ಮಾಡುತ್ತದೆ.

ಇದನ್ನೂ ಓದಿ:ರಾಜ್ಯದ ಈ ಮೂರು ದೇಗುಲಗಳು ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ಸೇರ್ಪಡೆ; ಸಚಿವ ಎಚ್.ಕೆ.ಪಾಟೀಲ್​ ಹೇಳಿದ್ದಿಷ್ಟು

795 ಅರ್ಜಿಗಳ ಫೈಕಿ ಹಂಪಿ ಆಯ್ಕೆ

ಇನ್ನು ಪ್ರವಾಸೋದ್ಯಮ ಸ್ಪರ್ಧೆಯಲ್ಲಿ ಹಂಪಿಯ ಒಂಬತ್ತು ಸ್ತಂಭಗಳನ್ನು ಅತ್ಯುತ್ತಮವಾಗಿ ಪ್ರದರ್ಶಿಸುವ ಮೂಲಕ ಪ್ರವಾಸೋದ್ಯಮ ಗ್ರಾಮವಾಗಿ ಹಂಪಿ ಗುರುತಿಸಲ್ಪಟ್ಟಿದೆ ಎಂದು ಸಚಿವಾಲಯವು ತಿಳಿಸಿದೆ. 31 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಸ್ವೀಕರಿಸಿದ 795 ಅರ್ಜಿಗಳಲ್ಲಿ ಹಂಪಿಯನ್ನು ಆಯ್ಕೆ ಮಾಡಲಾಗಿದೆ. ಇದೊಂದು ಹೆಮ್ಮೆಯ ಕ್ಷಣ ಎಂದು ಕರ್ನಾಟಕ ಪ್ರವಾಸೋದ್ಯಮ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಹೇಳಿದ್ದಾರೆ.

ಇದರೊಂದಿಗೆ, ರಾಜ್ಯ ಸರ್ಕಾರ ಮತ್ತು ಸ್ಥಳೀಯ ಆಡಳಿತವು ಗ್ರಾಮೀಣ ಪ್ರವಾಸೋದ್ಯಮವನ್ನು ಉತ್ತೇಜಿಸಲು , ಜನಪ್ರಿಯಗೊಳಿಸುವ ಕೆಲಸ ಮಾಡಬಹುದು ಎಂದು ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಇದು ಗ್ರಾಮೀಣ ಕಲೆ ಮತ್ತು ಕರಕುಶಲತೆಯನ್ನು ಜನಪ್ರಿಯಗೊಳಿಸಲು ಮತ್ತು ಹಳ್ಳಿಯ ಅನುಭವವನ್ನು ಪಡೆಯಲು ಪ್ರವಾಸಿಗರನ್ನು ಆಕರ್ಷಿಸಲು ಸಹಾಯ ಮಾಡುತ್ತದೆ. ಕೃಷಿ ಮತ್ತು ಗ್ರಾಮೀಣ ಪ್ರವಾಸೋದ್ಯಮವನ್ನು ಉತ್ತೇಜಿಸಲು ಇದು ರಾಜ್ಯಕ್ಕೆ ದೊಡ್ಡ ಉತ್ತೇಜನವಾಗಿದೆ ಎಂದು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಮತ್ತೊಬ್ಬ ಅಧಿಕಾರಿ ಹೇಳಿದರು.

ಇದನ್ನೂ ಓದಿ:World Heritage Day 2022: ಭಾರತದ 5 ಪ್ರಮುಖ ವಿಶ್ವ ಪಾರಂಪರಿಕ ತಾಣಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ

ಏತನ್ಮಧ್ಯೆ, ವಿಶ್ವ ಪ್ರವಾಸೋದ್ಯಮ ದಿನಾಚರಣೆ ಮತ್ತು ಸ್ವಚ್ಛತಾ ಪಖವಾಡ (ಸ್ವಚ್ಛತೆ ಪಾಕ್ಷಿಕ) ಮತ್ತು ಸ್ವಚ್ಛತಾ ಹಿ ಸೇವಾ ಅಭಿಯಾನದ ಅಂಗವಾಗಿ ಇಲಾಖೆಯು ಒಂಬತ್ತು ಸ್ಥಳಗಳಲ್ಲಿ ಸ್ವಚ್ಛತೆ ಮತ್ತು ಜಾಗೃತಿ ಅಭಿಯಾನವನ್ನು ಕೈಗೊಂಡಿತು- ನಂದಿ ಗ್ರಾಮದ ಭೋಗನಂದೀಶ್ವರ ದೇವಸ್ಥಾನ, ಹಂಪಿ, ಪಟ್ಟದಕಲ್ಲು, ಬೇಲೂರು, ಶೃಂಗೇರಿ, ಸೋಮನಾಥಪುರ, ಮೇಲುಕೋಟೆ ಮತ್ತು ಶ್ರೀರಂಗಪಟ್ಟಣ. ಇಲಾಖೆಯು ಎಲೆಕ್ಟ್ರಿಕ್ ಬೈಕ್ ರ್ಯಾಲಿಯನ್ನು ಸಹ ಆಯೋಜಿಸಿದ್ದು, ವರ್ಷದ ಥೀಮ್-ಗ್ರೀನ್ ಇನ್ವೆಸ್ಟ್ಮೆಂಟ್ ಅನ್ನು ಒತ್ತಿಹೇಳಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:01 pm, Thu, 28 September 23

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್