AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hamsalekha: ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿ ಹೇಳಿಕೆ; ಕ್ಷಮೆ ಕೋರಿದ ಹಂಸಲೇಖ

Hamsalekha: ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ಮಾತನಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ವಿವಾದ ಹುಟ್ಟುಹಾಕಿತ್ತು. ಫೇಸ್ಬುಕ್​ನಲ್ಲಿ ಜನರು ವಿವಿಧ ರೀತಿಯ ಕಮೆಂಟ್​ಗಳನ್ನು ಮಾಡಿ ವಿಡಿಯೋ ಹಂಚಿಕೊಂಡಿದ್ದರು.

Hamsalekha: ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿ ಹೇಳಿಕೆ; ಕ್ಷಮೆ ಕೋರಿದ ಹಂಸಲೇಖ
ಹಂಸಲೇಖ
TV9 Web
| Edited By: |

Updated on:Nov 14, 2021 | 10:57 PM

Share

ಬೆಂಗಳೂರು: ಖ್ಯಾತ ಚಲನಚಿತ್ರ ಸಂಗೀತ ನಿರ್ದೇಶಕ, ಸಿನಿಮಾ ಸಾಹಿತಿ ಹಂಸಲೇಖ ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ವಿವಾದಕ್ಕೀಡಾದ ಘಟನೆ ನಡೆದಿದೆ. ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿರುವ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವಿವಾದಕ್ಕೆ ಆಸ್ಪದ ಮಾಡಿಕೊಟ್ಟಿದೆ. ನೆಟ್ಟಿಗರು ಹಂಸಲೇಖ ಮಾತುಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವರು ವಿಡಿಯೋ ಮುಖಾಂತರ ಕ್ಷಮೆ ಕೇಳಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮ ಒಂದರಲ್ಲಿ ನಾದಬ್ರಹ್ಮ ಹಂಸಲೇಖ ಪೇಜಾವರ ಶ್ರೀಗಳ ವಿರುದ್ಧ ಹೇಳಿಕೆ ನೀಡಿದ್ದರು. ಮೇಲುಜಾತಿ ಹಾಗೂ ಕೀಳುಜಾತಿ, ಜಾತಿತಾರತಮ್ಯ, ಜಾತಿ ಪಿಡುಗು ವಿಚಾರವಾಗಿ ಮಾತನಾಡುತ್ತಾ ಅವಹೇಳನಕಾರಿ ವಾಕ್ಯ ಪ್ರಯೋಗಿಸಿದ್ದರು. ಬಳಿಕ ಅಂಬೇಡ್ಕರ್ ವಿಚಾರವನ್ನು ಕೂಡ ಉಲ್ಲೇಖಿಸಿದ್ದರು. ಇಲ್ಲಿ ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ಮಾತನಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ವಿವಾದ ಹುಟ್ಟುಹಾಕಿತ್ತು. ಫೇಸ್ಬುಕ್​ನಲ್ಲಿ ಜನರು ವಿವಿಧ ರೀತಿಯ ಕಮೆಂಟ್​ಗಳನ್ನು ಮಾಡಿ ವಿಡಿಯೋ ಹಂಚಿಕೊಂಡಿದ್ದರು.

ಈ ವಿವಾದವನ್ನು ಉದ್ದೇಶಿಸಿ ಕ್ಷಮೆ ಕೇಳುವ ಮೂಲಕ ಹಂಸಲೇಖ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಗೊತ್ತಿದೆ. ಎಲ್ಲಾ ಮಾತುಗಳಿಗೂ ಅದು ವೇದಿಕೆಯಲ್ಲ, ತಪ್ಪು. ಆ ವೇದಿಕೆಯಲ್ಲಿ ನುಡಿದರೆ ಮುತ್ತಿನಹಾರದಂತಿರಬೇಕು ಎಂದು ಇರಬೇಕಿತ್ತು. ಆದರೆ, ತಪ್ಪಾಗಿದೆ. ಅಸ್ಪ್ರಶ್ಯತೆ ಎಂಬುದು ನಮ್ಮ ದೇಶಕ್ಕೆ ಅಂಟಿದ ಶಾಪ. ಈ ಅನಿಷ್ಠವನ್ನು ತೊಡೆದು ಹಾಕುವುದಕ್ಕೆ ಪೇಜಾವರರಂಥ ಗುರುಹಿರಿಯರು ಅಪಾರ ಪ್ರಯತ್ನ ನಡೆಸುತ್ತಿದ್ದಾರೆ. ಅದರ ಬಗ್ಗೆ ನನಗೆ ಆ ಬಗ್ಗೆ ಅಪಾರ ಗೌರವವಿದೆ ಎಂದು ಹೇಳಿದ್ದಾರೆ.

ನಾನು ಒಬ್ಬ ಸಂಗೀತಗಾರ. ನಮಗ್ಯಾಕೆ ಟ್ರೋಲು, ಕಂಟ್ರೋಲ್ ಆಗಿರುವುದು ನಮ್ಮ ಕೆಲಸ. ನನಗೆ ಯಾರಿಗೂ ನೋವು ಕೊಡಲು ಇಷ್ಟವಿಲ್ಲ. ನನ್ನ ಸಂಗೀತದಂತೆ ನನ್ನ ಮಾತು, ಬದುಕು ಕೂಡ ಎಲ್ಲರಿಗೂ ಸುಖ ಕೊಡಬೇಕು. ಆದರೆ, ಎಲ್ಲಾ ಅನಿಷ್ಠಗಳನ್ನು ತೊಡೆದು ಹಾಕುವ ದಿಸೆಯಲ್ಲಿ ನನ್ನ ಪಾತ್ರವೂ ಯಾವುದೇ ಮೂಲಕ ಇದ್ದರೆ ಅದನ್ನು ನಾನು ಮಾಡಿಯೇ ಮಾಡ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಸರಾ ಕಳೆ ಹೆಚ್ಚಿಸಿದ ಹಂಸಲೇಖ ಸಂಗೀತ: ಗಾನದ ಮೋಡಿಯಲ್ಲಿ ತೇಲಿದ ಜನರು

ಇದನ್ನೂ ಓದಿ: ಹಂಸಲೇಖ-ರವಿಚಂದ್ರನ್ ದೂರ ಆಗಿದ್ದು ಏಕೆ; ಕ್ರೇಜಿ ಸ್ಟಾರ್​ ಕೊಟ್ರು ಉತ್ತರ

Published On - 10:57 pm, Sun, 14 November 21

Follow Us
Web contact
Web contact

TV9 Kannada

Read More
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!