AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ಅಧಿಕಾರಿಗಳ ಕಿರುಕುಳವೇ ಸಾವಿಗೆ ಕಾರಣ: ಸಚಿವ ಎಂಟಿಬಿ ನಾಗರಾಜ್ ವಿರುದ್ಧ ಮೃತ ಇನ್ಸ್​ಪೆಕ್ಟರ್​ ನಂದೀಶ್ ಕುಟುಂಬಸ್ಥರ ಆಕ್ರೋಶ!

ವರ್ಗಾವಣೆ ದಂಧೆ, ಹಿರಿಯ ಅಧಿಕಾರಿಗಳ ಕಿರುಕುಳದಿಂದ ಸಾವಾಗಿದೆ ಎಂದು ಮೃತ ಇನ್ಸ್‌ಪೆಕ್ಟರ್‌ ನಂದೀಶ್ ಕುಟುಂಬಸ್ಥರು ಸಚಿವ ಎಂಟಿಬಿ ನಾಗರಾಜ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಹಿರಿಯ ಅಧಿಕಾರಿಗಳ ಕಿರುಕುಳವೇ ಸಾವಿಗೆ ಕಾರಣ: ಸಚಿವ ಎಂಟಿಬಿ ನಾಗರಾಜ್ ವಿರುದ್ಧ ಮೃತ ಇನ್ಸ್​ಪೆಕ್ಟರ್​ ನಂದೀಶ್ ಕುಟುಂಬಸ್ಥರ ಆಕ್ರೋಶ!
ಸಚಿವ ಎಂ ಟಿ ಎಬಿ ನಾಗರಾಜ್
TV9 Web
| Edited By: |

Updated on:Oct 27, 2022 | 9:02 PM

Share

ಬೆಂಗಳೂರು: ವರ್ಗಾವಣೆ ದಂಧೆ, ಹಿರಿಯ ಅಧಿಕಾರಿಗಳ ಕಿರುಕುಳದಿಂದ ಸಾವಾಗಿದೆ ಎಂದು ಮೃತ ಇನ್ಸ್‌ಪೆಕ್ಟರ್‌ ನಂದೀಶ್ ಕುಟುಂಬಸ್ಥರು ಸಚಿವ ಎಂಟಿಬಿ ನಾಗರಾಜ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೆ.ಆರ್​.ಪುರ ಆಸ್ಪತ್ರೆಯಲ್ಲಿ ಅಂತಿಮ ದರ್ಶನ ಪಡೆಯಲು ಹೋದಾಗ ಆಕ್ರೋಶ ವ್ಯಕ್ತಪಡಿಸಲಾಗಿದೆ ಎನ್ನಲಾಗುತ್ತಿದೆ. ಇನ್ನು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ವಿರುದ್ದ ಸಚಿವ ಎಂಟಿಎಬಿ ನಾಗರಾಜ್ ಕಿಡಿ ಕಾರಿದ್ದು, ಏನು ಅಂತಹ ಮಾಡಬಾರದ ತಪ್ಪು ಮಾಡಿರಲಿಲ್ಲಾ. ಒಂದು ನೋಟಿಸ್ ಕೊಟ್ಟು ವಿಚಾರ ಮಾಡಬಹುದು. ಅದಕ್ಕೆ ಒಂದು ದೊಡ್ಡ ತೀರ್ಮಾನ ಮಾಡುವ ಅವಶ್ಯಕತೆ ಇರ್ಲಿಲ್ಲಾ. ಕಮಿಷನರ್ ಸಣ್ಣ ವಿಚಾರವನ್ನು ದೊಡ್ಡದು ಮಾಡಿದ್ದಾರೆ. ಇದನ್ನು ನಾನು ಸುಮ್ಮನೆ ಬಿಡಲ್ಲಾ. ಮಕ್ಕಳಿಲ್ಲದ ಮನೆಗೆ ಈಗ ಯಾರಾಗ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಘಟನೆ ಹಿನ್ನೆಲೆ:

ಸಸ್ಪೆಂಡ್​ ಆಗಿದ್ದ ಇನ್ಸ್​ಪೆಕ್ಟರ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬೆಂಗಳೂರಿನ K.R​.ಪುರ ಠಾಣೆ ಇನ್ಸ್​ಪೆಕ್ಟರ್​ ನಂದೀಶ್​ ಮೃತ ಇನ್ಸ್​ಪೆಕ್ಟರ್. ಹೃದಯಾಘಾತದಿಂದ ಕೆ.ಆರ್​.ಪುರ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಂದೀಶ್‌ ಮೈಸೂರಿನ ಹುಣಸೂರು ಮೂಲದವರು. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ 2019 ರಿಂದ 2020ರವರೆಗೆ ಕಾರ್ಯ ನಿರ್ವಹಿಸಿದ್ದರು. ಕಳೆದ ವಾರವಷ್ಟೇ ಇನ್ಸ್​ಪೆಕ್ಟರ್​ ನಂದೀಶ್ ಸಸ್ಪೆಂಡ್​ ಆಗಿದ್ದರು. ಏರಿಯಾದಲ್ಲಿ ಅವಧಿ ಮೀರಿ ಪಬ್​ ನಡೆಸಲು ಅವಕಾಶ ನೀಡಿದ್ದಕ್ಕೆ ಅಮಾನತು ಮಾಡಿ ಕಮಿಷನರ್ ಪ್ರತಾಪ್ ರೆಡ್ಡಿ ಆದೇಶಿಸಿದ್ದರು.

Published On - 9:00 pm, Thu, 27 October 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್