AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ವಿಮಾನದಲ್ಲಿ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಸಹಪ್ರಯಾಣಿಕನಿಂದ ಕಿರುಕುಳ; ದೂರು ದಾಖಲು

ಲುಪ್ತಾನ್ಸ ಏರ್ಲೈನ್ಸ್​​ನ LH 0754 ವಿಮಾನ ಪ್ರಾಂಕ್​ಫರ್ಟ್​​​ನಿಂದ ಬೆಂಗಳೂರಿಗೆ ಬರುತ್ತಿತ್ತು. ಈ ವಿಮಾನದಲ್ಲಿ ಆಂದ್ರಪ್ರದೇಶದ ತಿರುಪತಿ ಮೂಲದ ಮಹಿಳೆ ಬೆಂಗಳೂರಿಗೆ ಬರುತ್ತಿದ್ದರು. ವಿಮಾನದಲ್ಲಿ ಮಹಿಳೆ ಮಲಗಿದ್ದ ವೇಳೆ, ಪಕ್ಕದ ಸೀಟ್​ನಲ್ಲಿ ಕೂತಿದ್ದ ಸಹಪ್ರಯಾಣಿಕ ಅಸಭ್ಯವಾಗಿ ವರ್ತಿಸಿದ್ದಾನೆ.

ಬೆಂಗಳೂರು: ವಿಮಾನದಲ್ಲಿ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಸಹಪ್ರಯಾಣಿಕನಿಂದ ಕಿರುಕುಳ; ದೂರು ದಾಖಲು
ಬೆಂಗಳೂರು ಅಂತರಾಷ್ಟ್ರೀಯ ವಿಮಾನ
ನವೀನ್ ಕುಮಾರ್ ಟಿ
| Edited By: |

Updated on: Nov 08, 2023 | 12:44 PM

Share

ದೇವನಹಳ್ಳಿ ನ.08: ವಿಮಾನದಲ್ಲಿ (Airplane) ಸಹಪ್ರಯಾಣಿಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಂಗನಾಥ (50) ಕಿರುಕುಳ ನೀಡಿದ ಸಹಪ್ರಯಾಣಿಕ. ಸೋಮವಾರ (ನ.06) ರಂದು ರಾತ್ರಿ ಲುಪ್ತಾನ್ಸ ಏರ್ಲೈನ್ಸ್​​ನ LH 0754 ವಿಮಾನ ಪ್ರಾಂಕ್​ಫರ್ಟ್​​​ನಿಂದ ಬೆಂಗಳೂರಿಗೆ ಬರುತ್ತಿತ್ತು.

ಈ ವಿಮಾನದಲ್ಲಿ ಆಂದ್ರಪ್ರದೇಶದ ತಿರುಪತಿ ಮೂಲದ ಮಹಿಳೆ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಮಹಿಹಿಳೆ ವಿಮಾನದ ಸೀಟ್​ ನಂ 38ಕೆಯಲ್ಲಿ ಕುಳಿತು ಪ್ರಯಾಣ ಮಾಡುತ್ತಿದ್ದರು. ಪ್ರಯಾಣ ಪ್ರಾರಂಭವಾದ ನಾಲ್ಕು ಗಂಟೆ ನಂತರ ಮಹಿಳೆ ನಿದ್ರೆಗೆ ಜಾರಿದ್ದಾರೆ. ರಾತ್ರಿ ಸುಮಾರು 11:45ಕ್ಕೆ ಮಹಿಳೆ ಎಚ್ಚರಗೊಂಡಾಗ ಸೀಟ್​ ನಂ 38ಜೆನಲ್ಲಿ ಕುಳಿತಿದ್ದ ರಂಗನಾಥ್​ ಅವರ ಖಾಸಗಿ ಅಂಗವನ್ನು ಮುಟ್ಟುತ್ತಿದ್ದನು.

ಇದನ್ನೂ ಓದಿ: ಬೆಂಗಳೂರಿನಿಂದ ಮ್ಯೂನಿಚ್‌ಗೆ ನೇರ ವಿಮಾನ ಸೇವೆ ಆರಂಭಿಸಿದ ಲುಫ್ಥಾನ್ಸ

ಆಗ ಮಹಿಳೆ ಆತನ ಕೈಯನ್ನು ತೆಗೆದು ಮತ್ತೆ ನಿದ್ರೆಗೆ ಜಾರಿದರು. ಬಳಿಕ ಮಧ್ಯರಾತ್ರಿ 12:00 ಗಂಟೆಗೆ ಮಹಿಳೆಗೆ ಎಚ್ಚರವಾದಾಗ ರಂಗನಾಥ ಮತ್ತೆ ಆಕೆಯ ಖಾಸಗಿ ಅಂಗವನ್ನು ಮುಟ್ಟುತ್ತಿದ್ದನು. ಈ ವೇಳೆ ಮಹಿಳೆ ರಂಗನಾಥ್​ ಕೈಯನ್ನು ಎಳೆದು ವಿಮಾನ ಸಿಬ್ಬಂದಿಗಳನ್ನು ಕರೆದು ವಿಷಯ ತಿಳಿಸಿದ್ದಾರೆ. ಬಳಿಕ ಮಹಿಳೆ ಬೇರೆ ಸೀಟಿನಲ್ಲಿ ಹೋಗಿ ಕುಳಿತರು. ವಿಮಾನದಲ್ಲಿ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ರಂಗನಾಥ್ ವಿರುದ್ಧ ದೂರು ದಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ