ಬೆಂಗಳೂರು: ವಿಮಾನದಲ್ಲಿ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಸಹಪ್ರಯಾಣಿಕನಿಂದ ಕಿರುಕುಳ; ದೂರು ದಾಖಲು

ಲುಪ್ತಾನ್ಸ ಏರ್ಲೈನ್ಸ್​​ನ LH 0754 ವಿಮಾನ ಪ್ರಾಂಕ್​ಫರ್ಟ್​​​ನಿಂದ ಬೆಂಗಳೂರಿಗೆ ಬರುತ್ತಿತ್ತು. ಈ ವಿಮಾನದಲ್ಲಿ ಆಂದ್ರಪ್ರದೇಶದ ತಿರುಪತಿ ಮೂಲದ ಮಹಿಳೆ ಬೆಂಗಳೂರಿಗೆ ಬರುತ್ತಿದ್ದರು. ವಿಮಾನದಲ್ಲಿ ಮಹಿಳೆ ಮಲಗಿದ್ದ ವೇಳೆ, ಪಕ್ಕದ ಸೀಟ್​ನಲ್ಲಿ ಕೂತಿದ್ದ ಸಹಪ್ರಯಾಣಿಕ ಅಸಭ್ಯವಾಗಿ ವರ್ತಿಸಿದ್ದಾನೆ.

ಬೆಂಗಳೂರು: ವಿಮಾನದಲ್ಲಿ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಸಹಪ್ರಯಾಣಿಕನಿಂದ ಕಿರುಕುಳ; ದೂರು ದಾಖಲು
ಬೆಂಗಳೂರು ಅಂತರಾಷ್ಟ್ರೀಯ ವಿಮಾನ
Follow us
| Updated By: ವಿವೇಕ ಬಿರಾದಾರ

Updated on: Nov 08, 2023 | 12:44 PM

ದೇವನಹಳ್ಳಿ ನ.08: ವಿಮಾನದಲ್ಲಿ (Airplane) ಸಹಪ್ರಯಾಣಿಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಂಗನಾಥ (50) ಕಿರುಕುಳ ನೀಡಿದ ಸಹಪ್ರಯಾಣಿಕ. ಸೋಮವಾರ (ನ.06) ರಂದು ರಾತ್ರಿ ಲುಪ್ತಾನ್ಸ ಏರ್ಲೈನ್ಸ್​​ನ LH 0754 ವಿಮಾನ ಪ್ರಾಂಕ್​ಫರ್ಟ್​​​ನಿಂದ ಬೆಂಗಳೂರಿಗೆ ಬರುತ್ತಿತ್ತು.

ಈ ವಿಮಾನದಲ್ಲಿ ಆಂದ್ರಪ್ರದೇಶದ ತಿರುಪತಿ ಮೂಲದ ಮಹಿಳೆ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಮಹಿಹಿಳೆ ವಿಮಾನದ ಸೀಟ್​ ನಂ 38ಕೆಯಲ್ಲಿ ಕುಳಿತು ಪ್ರಯಾಣ ಮಾಡುತ್ತಿದ್ದರು. ಪ್ರಯಾಣ ಪ್ರಾರಂಭವಾದ ನಾಲ್ಕು ಗಂಟೆ ನಂತರ ಮಹಿಳೆ ನಿದ್ರೆಗೆ ಜಾರಿದ್ದಾರೆ. ರಾತ್ರಿ ಸುಮಾರು 11:45ಕ್ಕೆ ಮಹಿಳೆ ಎಚ್ಚರಗೊಂಡಾಗ ಸೀಟ್​ ನಂ 38ಜೆನಲ್ಲಿ ಕುಳಿತಿದ್ದ ರಂಗನಾಥ್​ ಅವರ ಖಾಸಗಿ ಅಂಗವನ್ನು ಮುಟ್ಟುತ್ತಿದ್ದನು.

ಇದನ್ನೂ ಓದಿ: ಬೆಂಗಳೂರಿನಿಂದ ಮ್ಯೂನಿಚ್‌ಗೆ ನೇರ ವಿಮಾನ ಸೇವೆ ಆರಂಭಿಸಿದ ಲುಫ್ಥಾನ್ಸ

ಆಗ ಮಹಿಳೆ ಆತನ ಕೈಯನ್ನು ತೆಗೆದು ಮತ್ತೆ ನಿದ್ರೆಗೆ ಜಾರಿದರು. ಬಳಿಕ ಮಧ್ಯರಾತ್ರಿ 12:00 ಗಂಟೆಗೆ ಮಹಿಳೆಗೆ ಎಚ್ಚರವಾದಾಗ ರಂಗನಾಥ ಮತ್ತೆ ಆಕೆಯ ಖಾಸಗಿ ಅಂಗವನ್ನು ಮುಟ್ಟುತ್ತಿದ್ದನು. ಈ ವೇಳೆ ಮಹಿಳೆ ರಂಗನಾಥ್​ ಕೈಯನ್ನು ಎಳೆದು ವಿಮಾನ ಸಿಬ್ಬಂದಿಗಳನ್ನು ಕರೆದು ವಿಷಯ ತಿಳಿಸಿದ್ದಾರೆ. ಬಳಿಕ ಮಹಿಳೆ ಬೇರೆ ಸೀಟಿನಲ್ಲಿ ಹೋಗಿ ಕುಳಿತರು. ವಿಮಾನದಲ್ಲಿ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ರಂಗನಾಥ್ ವಿರುದ್ಧ ದೂರು ದಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್