ಬೆಂಗಳೂರು: ವಿಮಾನದಲ್ಲಿ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಸಹಪ್ರಯಾಣಿಕನಿಂದ ಕಿರುಕುಳ; ದೂರು ದಾಖಲು

ಲುಪ್ತಾನ್ಸ ಏರ್ಲೈನ್ಸ್​​ನ LH 0754 ವಿಮಾನ ಪ್ರಾಂಕ್​ಫರ್ಟ್​​​ನಿಂದ ಬೆಂಗಳೂರಿಗೆ ಬರುತ್ತಿತ್ತು. ಈ ವಿಮಾನದಲ್ಲಿ ಆಂದ್ರಪ್ರದೇಶದ ತಿರುಪತಿ ಮೂಲದ ಮಹಿಳೆ ಬೆಂಗಳೂರಿಗೆ ಬರುತ್ತಿದ್ದರು. ವಿಮಾನದಲ್ಲಿ ಮಹಿಳೆ ಮಲಗಿದ್ದ ವೇಳೆ, ಪಕ್ಕದ ಸೀಟ್​ನಲ್ಲಿ ಕೂತಿದ್ದ ಸಹಪ್ರಯಾಣಿಕ ಅಸಭ್ಯವಾಗಿ ವರ್ತಿಸಿದ್ದಾನೆ.

ಬೆಂಗಳೂರು: ವಿಮಾನದಲ್ಲಿ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಸಹಪ್ರಯಾಣಿಕನಿಂದ ಕಿರುಕುಳ; ದೂರು ದಾಖಲು
ಬೆಂಗಳೂರು ಅಂತರಾಷ್ಟ್ರೀಯ ವಿಮಾನ
Edited By: ವಿವೇಕ ಬಿರಾದಾರ

Updated on: Nov 08, 2023 | 12:44 PM

ದೇವನಹಳ್ಳಿ ನ.08: ವಿಮಾನದಲ್ಲಿ (Airplane) ಸಹಪ್ರಯಾಣಿಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಂಗನಾಥ (50) ಕಿರುಕುಳ ನೀಡಿದ ಸಹಪ್ರಯಾಣಿಕ. ಸೋಮವಾರ (ನ.06) ರಂದು ರಾತ್ರಿ ಲುಪ್ತಾನ್ಸ ಏರ್ಲೈನ್ಸ್​​ನ LH 0754 ವಿಮಾನ ಪ್ರಾಂಕ್​ಫರ್ಟ್​​​ನಿಂದ ಬೆಂಗಳೂರಿಗೆ ಬರುತ್ತಿತ್ತು.

ಈ ವಿಮಾನದಲ್ಲಿ ಆಂದ್ರಪ್ರದೇಶದ ತಿರುಪತಿ ಮೂಲದ ಮಹಿಳೆ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಮಹಿಹಿಳೆ ವಿಮಾನದ ಸೀಟ್​ ನಂ 38ಕೆಯಲ್ಲಿ ಕುಳಿತು ಪ್ರಯಾಣ ಮಾಡುತ್ತಿದ್ದರು. ಪ್ರಯಾಣ ಪ್ರಾರಂಭವಾದ ನಾಲ್ಕು ಗಂಟೆ ನಂತರ ಮಹಿಳೆ ನಿದ್ರೆಗೆ ಜಾರಿದ್ದಾರೆ. ರಾತ್ರಿ ಸುಮಾರು 11:45ಕ್ಕೆ ಮಹಿಳೆ ಎಚ್ಚರಗೊಂಡಾಗ ಸೀಟ್​ ನಂ 38ಜೆನಲ್ಲಿ ಕುಳಿತಿದ್ದ ರಂಗನಾಥ್​ ಅವರ ಖಾಸಗಿ ಅಂಗವನ್ನು ಮುಟ್ಟುತ್ತಿದ್ದನು.

ಇದನ್ನೂ ಓದಿ: ಬೆಂಗಳೂರಿನಿಂದ ಮ್ಯೂನಿಚ್‌ಗೆ ನೇರ ವಿಮಾನ ಸೇವೆ ಆರಂಭಿಸಿದ ಲುಫ್ಥಾನ್ಸ

ಆಗ ಮಹಿಳೆ ಆತನ ಕೈಯನ್ನು ತೆಗೆದು ಮತ್ತೆ ನಿದ್ರೆಗೆ ಜಾರಿದರು. ಬಳಿಕ ಮಧ್ಯರಾತ್ರಿ 12:00 ಗಂಟೆಗೆ ಮಹಿಳೆಗೆ ಎಚ್ಚರವಾದಾಗ ರಂಗನಾಥ ಮತ್ತೆ ಆಕೆಯ ಖಾಸಗಿ ಅಂಗವನ್ನು ಮುಟ್ಟುತ್ತಿದ್ದನು. ಈ ವೇಳೆ ಮಹಿಳೆ ರಂಗನಾಥ್​ ಕೈಯನ್ನು ಎಳೆದು ವಿಮಾನ ಸಿಬ್ಬಂದಿಗಳನ್ನು ಕರೆದು ವಿಷಯ ತಿಳಿಸಿದ್ದಾರೆ. ಬಳಿಕ ಮಹಿಳೆ ಬೇರೆ ಸೀಟಿನಲ್ಲಿ ಹೋಗಿ ಕುಳಿತರು. ವಿಮಾನದಲ್ಲಿ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ರಂಗನಾಥ್ ವಿರುದ್ಧ ದೂರು ದಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us