AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್​ ಪಾರ್ಕಿಂಗ್​ ವಿಚಾರವಾಗಿ ಯುವತಿಗೆ ಕಿರುಕುಳ: ದೂರು ದಾಖಲಿಸಿಕೊಳ್ಳಲು ಪೊಲೀಸರ ಹಿಂದೇಟು

ಮನೆ ಮುಂದೆ ಕಾರ್​ ನಿಲ್ಲಿಸಿದ್ದಕ್ಕೆ ಯುವತಿಗೆ ಓರ್ವ ವ್ಯಕ್ತಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕಿರುಕುಳ ಕೊಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ ಯುವತಿ ಸ್ನೇಹಿತರು ಸಾಕ್ಷಿ ಸಮೇತ ಸಂಜಯನಗರ ಪೊಲೀಸ್​ ಠಾಣೆಗೆ ದೂರು ನೀಡಲು ಹೋಗಿದ್ದರು. ಮುಂದೇನಾಯ್ತು ಈ ಸ್ಟೋರಿ ಓದಿ...

ಕಾರ್​ ಪಾರ್ಕಿಂಗ್​ ವಿಚಾರವಾಗಿ ಯುವತಿಗೆ ಕಿರುಕುಳ: ದೂರು ದಾಖಲಿಸಿಕೊಳ್ಳಲು ಪೊಲೀಸರ ಹಿಂದೇಟು
ಸಂಜಯನಗರ ಪೊಲೀಸ್​ ಠಾಣೆ
ಜಗದೀಶ ಬಿ.
| Edited By: ವಿವೇಕ ಬಿರಾದಾರ|

Updated on:Dec 01, 2023 | 11:47 AM

Share

ಬೆಂಗಳೂರು ಡಿ.01: ಯುವತಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕಿರುಕುಳ ಕೊಟ್ಟ ವ್ಯಕ್ತಿಯ ವಿರುದ್ಧ ಸಂಜಯನಗರ ಪೊಲೀಸರು (Police) ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿರುವ ಆರೋಪ ಕೇಳಿಬಂದಿದೆ. ಸಂಜಯ್ ನಗರ ಪೊಲೀಸ್​ ಠಾಣಾ ವ್ಯಾಪ್ತಿಯ ಮನೆಯೊಂದರ ಮುಂದೆ ಓರ್ವ ಯುವತಿ ಕಾರ್ ಪಾರ್ಕಿಂಗ್ ಮಾಡಿದ್ದರು. ಈ ಸಂಬಂಧ ಮನೆಯ ಸದಸ್ಯ ಯುವತಿಗೆ (Youth) ಮನಬಂದಂತೆ ನಿಂದಿಸಿದ್ದಾನೆ. ಈ ವೇಳೆ ಯುವತಿ ಸ್ನೇಹಿತರು (Friends) ಆತನಿಗೆ ಸಮಾಧಾನ ಮಾಡಿದರೂ, ಸುಮ್ಮನಾಗದ ವ್ಯಕ್ತಿ ಬಾಯಿಗೆ ಬಂದಂತೆ ಬೈದಾಡಿದ್ದಾನೆ.

ಈ ದೃಶ್ಯವನ್ನು ಯುವತಿಯ ಸ್ನೇಹಿತರು ಮೊಬೈಲ್​ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಬಳಿಕ ಯುವತಿಗೆ ಕಿರುಕುಳ ಕೊಟ್ಟ ವ್ಯಕ್ತಿಯ ವಿರುದ್ಧ ಸಾಕ್ಷಿ ಸಮೇತ ದೂರು ಕೊಡಲು ಸಂಜಯನಗರ ಪೊಲೀಸ್​ ಠಾಣೆಗೆ ಹೋಗಿದ್ದಾರೆ. ಆದರೆ ಪೊಲೀಸ್​ ಅಧಿಕಾರಿಗಳು ದೂರು ಸ್ವೀಕರಿಸಿಲ್ಲ. ಸಂಜಯ್ ನಗರ ಪೊಲೀಸರ ಕಾರ್ಯವೈಕರಿಗೆ ಯುವತಿ ಸ್ನೇಹಿತರು ಅಸಮಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಮಹಿಳೆಯರ 13 ಸಾವಿರ ನಗ್ನ ಚಿತ್ರಗಳನ್ನು ಸಂಗ್ರಹಿಸಿಟ್ಟಿದ್ದ ಆರೋಪಿ ಅರೆಸ್ಟ್

ಯುವತಿ ಸ್ನೇಹಿತ ಎಕ್ಸ್​ (ಟ್ವಿಟರ್​)ನಲ್ಲಿ ತಾನು ಸೆರೆ ಹಿಡಿದ ವಿಡಿಯೋ ಪೋಸ್ಟ್​ ಮಾಡಿ, ವಿಡಿಯೋ ಸಮೇತ ಹೋಗಿ ದೂರು ಕೊಟ್ಟರು ಕ್ರಮ ಕೈಗೊಳ್ಳಲು ಪೊಲೀಸರು ಹಿಂದೇಟು ಹಾಕುತ್ತಾರೆ. ಹೀಗಾದರೆ ಬೆಂಗಳೂರಿನಲ್ಲಿ ಯುವತಿಯರು ಬದುಕುವುದು ಹೇಗೆ? ಎಂದು ಕಿರುಕುಳಕ್ಕೆ ಒಳಗಾಗಿರುವ ಯುವತಿ ಸ್ನೇಹಿತ ಬರೆದುಕೊಂಡಿದ್ದಾರೆ. ಮತ್ತು ಬೆಂಗಳೂರು ನಗರ ಕಮಿಷನರ್ ಅವರಿ​ಗೆ ಟ್ಯಾಗ್ ಮಾಡಿದ್ದಾರೆ.

 ಟ್ವೀಟ್​ ಮಾಡಿದ ಮೂರೇ ಗಂಟೆಯಲ್ಲಿ ಎಚ್ಚೆತ್ತ ಖಾಕಿ

ನಗರ ಪೊಲೀಸ್ ಕಮಿಷನರ್ ಅವರಿಗೆ ಟ್ವೀಟ್​ ಮೂಲಕ ಯುವತಿ ಸ್ನೇಹಿತ ದೂರು ನೀಡುತ್ತಿದ್ದಂತೆ ಸಂಜಯನಗರ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ನಗರ ಆಯುಕ್ತ ಬಿ ದಯಾನಂದ್​​ ಅವರು ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಕಮಿಷನರ್​ ಬಿ ದಯಾನಂದ್​ ಅವರ ಸೂಚನೆ ಮೇರೆಗೆ ಸಂಜಯನಗರ ಪೊಲೀಸರು ಯುವತಿಗೆ ನಿಂದಿಸಿದ್ದ ವ್ಯಕ್ತಿ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:15 am, Fri, 1 December 23

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!