AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್​ ಪಾರ್ಕಿಂಗ್​ ವಿಚಾರವಾಗಿ ಯುವತಿಗೆ ಕಿರುಕುಳ: ದೂರು ದಾಖಲಿಸಿಕೊಳ್ಳಲು ಪೊಲೀಸರ ಹಿಂದೇಟು

ಮನೆ ಮುಂದೆ ಕಾರ್​ ನಿಲ್ಲಿಸಿದ್ದಕ್ಕೆ ಯುವತಿಗೆ ಓರ್ವ ವ್ಯಕ್ತಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕಿರುಕುಳ ಕೊಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ ಯುವತಿ ಸ್ನೇಹಿತರು ಸಾಕ್ಷಿ ಸಮೇತ ಸಂಜಯನಗರ ಪೊಲೀಸ್​ ಠಾಣೆಗೆ ದೂರು ನೀಡಲು ಹೋಗಿದ್ದರು. ಮುಂದೇನಾಯ್ತು ಈ ಸ್ಟೋರಿ ಓದಿ...

ಕಾರ್​ ಪಾರ್ಕಿಂಗ್​ ವಿಚಾರವಾಗಿ ಯುವತಿಗೆ ಕಿರುಕುಳ: ದೂರು ದಾಖಲಿಸಿಕೊಳ್ಳಲು ಪೊಲೀಸರ ಹಿಂದೇಟು
ಸಂಜಯನಗರ ಪೊಲೀಸ್​ ಠಾಣೆ
Jagadisha B
| Edited By: ವಿವೇಕ ಬಿರಾದಾರ|

Updated on:Dec 01, 2023 | 11:47 AM

Share

ಬೆಂಗಳೂರು ಡಿ.01: ಯುವತಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕಿರುಕುಳ ಕೊಟ್ಟ ವ್ಯಕ್ತಿಯ ವಿರುದ್ಧ ಸಂಜಯನಗರ ಪೊಲೀಸರು (Police) ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿರುವ ಆರೋಪ ಕೇಳಿಬಂದಿದೆ. ಸಂಜಯ್ ನಗರ ಪೊಲೀಸ್​ ಠಾಣಾ ವ್ಯಾಪ್ತಿಯ ಮನೆಯೊಂದರ ಮುಂದೆ ಓರ್ವ ಯುವತಿ ಕಾರ್ ಪಾರ್ಕಿಂಗ್ ಮಾಡಿದ್ದರು. ಈ ಸಂಬಂಧ ಮನೆಯ ಸದಸ್ಯ ಯುವತಿಗೆ (Youth) ಮನಬಂದಂತೆ ನಿಂದಿಸಿದ್ದಾನೆ. ಈ ವೇಳೆ ಯುವತಿ ಸ್ನೇಹಿತರು (Friends) ಆತನಿಗೆ ಸಮಾಧಾನ ಮಾಡಿದರೂ, ಸುಮ್ಮನಾಗದ ವ್ಯಕ್ತಿ ಬಾಯಿಗೆ ಬಂದಂತೆ ಬೈದಾಡಿದ್ದಾನೆ.

ಈ ದೃಶ್ಯವನ್ನು ಯುವತಿಯ ಸ್ನೇಹಿತರು ಮೊಬೈಲ್​ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಬಳಿಕ ಯುವತಿಗೆ ಕಿರುಕುಳ ಕೊಟ್ಟ ವ್ಯಕ್ತಿಯ ವಿರುದ್ಧ ಸಾಕ್ಷಿ ಸಮೇತ ದೂರು ಕೊಡಲು ಸಂಜಯನಗರ ಪೊಲೀಸ್​ ಠಾಣೆಗೆ ಹೋಗಿದ್ದಾರೆ. ಆದರೆ ಪೊಲೀಸ್​ ಅಧಿಕಾರಿಗಳು ದೂರು ಸ್ವೀಕರಿಸಿಲ್ಲ. ಸಂಜಯ್ ನಗರ ಪೊಲೀಸರ ಕಾರ್ಯವೈಕರಿಗೆ ಯುವತಿ ಸ್ನೇಹಿತರು ಅಸಮಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಮಹಿಳೆಯರ 13 ಸಾವಿರ ನಗ್ನ ಚಿತ್ರಗಳನ್ನು ಸಂಗ್ರಹಿಸಿಟ್ಟಿದ್ದ ಆರೋಪಿ ಅರೆಸ್ಟ್

ಯುವತಿ ಸ್ನೇಹಿತ ಎಕ್ಸ್​ (ಟ್ವಿಟರ್​)ನಲ್ಲಿ ತಾನು ಸೆರೆ ಹಿಡಿದ ವಿಡಿಯೋ ಪೋಸ್ಟ್​ ಮಾಡಿ, ವಿಡಿಯೋ ಸಮೇತ ಹೋಗಿ ದೂರು ಕೊಟ್ಟರು ಕ್ರಮ ಕೈಗೊಳ್ಳಲು ಪೊಲೀಸರು ಹಿಂದೇಟು ಹಾಕುತ್ತಾರೆ. ಹೀಗಾದರೆ ಬೆಂಗಳೂರಿನಲ್ಲಿ ಯುವತಿಯರು ಬದುಕುವುದು ಹೇಗೆ? ಎಂದು ಕಿರುಕುಳಕ್ಕೆ ಒಳಗಾಗಿರುವ ಯುವತಿ ಸ್ನೇಹಿತ ಬರೆದುಕೊಂಡಿದ್ದಾರೆ. ಮತ್ತು ಬೆಂಗಳೂರು ನಗರ ಕಮಿಷನರ್ ಅವರಿ​ಗೆ ಟ್ಯಾಗ್ ಮಾಡಿದ್ದಾರೆ.

 ಟ್ವೀಟ್​ ಮಾಡಿದ ಮೂರೇ ಗಂಟೆಯಲ್ಲಿ ಎಚ್ಚೆತ್ತ ಖಾಕಿ

ನಗರ ಪೊಲೀಸ್ ಕಮಿಷನರ್ ಅವರಿಗೆ ಟ್ವೀಟ್​ ಮೂಲಕ ಯುವತಿ ಸ್ನೇಹಿತ ದೂರು ನೀಡುತ್ತಿದ್ದಂತೆ ಸಂಜಯನಗರ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ನಗರ ಆಯುಕ್ತ ಬಿ ದಯಾನಂದ್​​ ಅವರು ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಕಮಿಷನರ್​ ಬಿ ದಯಾನಂದ್​ ಅವರ ಸೂಚನೆ ಮೇರೆಗೆ ಸಂಜಯನಗರ ಪೊಲೀಸರು ಯುವತಿಗೆ ನಿಂದಿಸಿದ್ದ ವ್ಯಕ್ತಿ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:15 am, Fri, 1 December 23

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ