AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್​ ಪಾರ್ಕಿಂಗ್​ ವಿಚಾರವಾಗಿ ಯುವತಿಗೆ ಕಿರುಕುಳ: ದೂರು ದಾಖಲಿಸಿಕೊಳ್ಳಲು ಪೊಲೀಸರ ಹಿಂದೇಟು

ಮನೆ ಮುಂದೆ ಕಾರ್​ ನಿಲ್ಲಿಸಿದ್ದಕ್ಕೆ ಯುವತಿಗೆ ಓರ್ವ ವ್ಯಕ್ತಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕಿರುಕುಳ ಕೊಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ ಯುವತಿ ಸ್ನೇಹಿತರು ಸಾಕ್ಷಿ ಸಮೇತ ಸಂಜಯನಗರ ಪೊಲೀಸ್​ ಠಾಣೆಗೆ ದೂರು ನೀಡಲು ಹೋಗಿದ್ದರು. ಮುಂದೇನಾಯ್ತು ಈ ಸ್ಟೋರಿ ಓದಿ...

ಕಾರ್​ ಪಾರ್ಕಿಂಗ್​ ವಿಚಾರವಾಗಿ ಯುವತಿಗೆ ಕಿರುಕುಳ: ದೂರು ದಾಖಲಿಸಿಕೊಳ್ಳಲು ಪೊಲೀಸರ ಹಿಂದೇಟು
ಸಂಜಯನಗರ ಪೊಲೀಸ್​ ಠಾಣೆ
Jagadisha B
| Edited By: |

Updated on:Dec 01, 2023 | 11:47 AM

Share

ಬೆಂಗಳೂರು ಡಿ.01: ಯುವತಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕಿರುಕುಳ ಕೊಟ್ಟ ವ್ಯಕ್ತಿಯ ವಿರುದ್ಧ ಸಂಜಯನಗರ ಪೊಲೀಸರು (Police) ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿರುವ ಆರೋಪ ಕೇಳಿಬಂದಿದೆ. ಸಂಜಯ್ ನಗರ ಪೊಲೀಸ್​ ಠಾಣಾ ವ್ಯಾಪ್ತಿಯ ಮನೆಯೊಂದರ ಮುಂದೆ ಓರ್ವ ಯುವತಿ ಕಾರ್ ಪಾರ್ಕಿಂಗ್ ಮಾಡಿದ್ದರು. ಈ ಸಂಬಂಧ ಮನೆಯ ಸದಸ್ಯ ಯುವತಿಗೆ (Youth) ಮನಬಂದಂತೆ ನಿಂದಿಸಿದ್ದಾನೆ. ಈ ವೇಳೆ ಯುವತಿ ಸ್ನೇಹಿತರು (Friends) ಆತನಿಗೆ ಸಮಾಧಾನ ಮಾಡಿದರೂ, ಸುಮ್ಮನಾಗದ ವ್ಯಕ್ತಿ ಬಾಯಿಗೆ ಬಂದಂತೆ ಬೈದಾಡಿದ್ದಾನೆ.

ಈ ದೃಶ್ಯವನ್ನು ಯುವತಿಯ ಸ್ನೇಹಿತರು ಮೊಬೈಲ್​ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಬಳಿಕ ಯುವತಿಗೆ ಕಿರುಕುಳ ಕೊಟ್ಟ ವ್ಯಕ್ತಿಯ ವಿರುದ್ಧ ಸಾಕ್ಷಿ ಸಮೇತ ದೂರು ಕೊಡಲು ಸಂಜಯನಗರ ಪೊಲೀಸ್​ ಠಾಣೆಗೆ ಹೋಗಿದ್ದಾರೆ. ಆದರೆ ಪೊಲೀಸ್​ ಅಧಿಕಾರಿಗಳು ದೂರು ಸ್ವೀಕರಿಸಿಲ್ಲ. ಸಂಜಯ್ ನಗರ ಪೊಲೀಸರ ಕಾರ್ಯವೈಕರಿಗೆ ಯುವತಿ ಸ್ನೇಹಿತರು ಅಸಮಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಮಹಿಳೆಯರ 13 ಸಾವಿರ ನಗ್ನ ಚಿತ್ರಗಳನ್ನು ಸಂಗ್ರಹಿಸಿಟ್ಟಿದ್ದ ಆರೋಪಿ ಅರೆಸ್ಟ್

ಯುವತಿ ಸ್ನೇಹಿತ ಎಕ್ಸ್​ (ಟ್ವಿಟರ್​)ನಲ್ಲಿ ತಾನು ಸೆರೆ ಹಿಡಿದ ವಿಡಿಯೋ ಪೋಸ್ಟ್​ ಮಾಡಿ, ವಿಡಿಯೋ ಸಮೇತ ಹೋಗಿ ದೂರು ಕೊಟ್ಟರು ಕ್ರಮ ಕೈಗೊಳ್ಳಲು ಪೊಲೀಸರು ಹಿಂದೇಟು ಹಾಕುತ್ತಾರೆ. ಹೀಗಾದರೆ ಬೆಂಗಳೂರಿನಲ್ಲಿ ಯುವತಿಯರು ಬದುಕುವುದು ಹೇಗೆ? ಎಂದು ಕಿರುಕುಳಕ್ಕೆ ಒಳಗಾಗಿರುವ ಯುವತಿ ಸ್ನೇಹಿತ ಬರೆದುಕೊಂಡಿದ್ದಾರೆ. ಮತ್ತು ಬೆಂಗಳೂರು ನಗರ ಕಮಿಷನರ್ ಅವರಿ​ಗೆ ಟ್ಯಾಗ್ ಮಾಡಿದ್ದಾರೆ.

 ಟ್ವೀಟ್​ ಮಾಡಿದ ಮೂರೇ ಗಂಟೆಯಲ್ಲಿ ಎಚ್ಚೆತ್ತ ಖಾಕಿ

ನಗರ ಪೊಲೀಸ್ ಕಮಿಷನರ್ ಅವರಿಗೆ ಟ್ವೀಟ್​ ಮೂಲಕ ಯುವತಿ ಸ್ನೇಹಿತ ದೂರು ನೀಡುತ್ತಿದ್ದಂತೆ ಸಂಜಯನಗರ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ನಗರ ಆಯುಕ್ತ ಬಿ ದಯಾನಂದ್​​ ಅವರು ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಕಮಿಷನರ್​ ಬಿ ದಯಾನಂದ್​ ಅವರ ಸೂಚನೆ ಮೇರೆಗೆ ಸಂಜಯನಗರ ಪೊಲೀಸರು ಯುವತಿಗೆ ನಿಂದಿಸಿದ್ದ ವ್ಯಕ್ತಿ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:15 am, Fri, 1 December 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ