AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್​ ಪಾರ್ಕಿಂಗ್​ ವಿಚಾರವಾಗಿ ಯುವತಿಗೆ ಕಿರುಕುಳ: ದೂರು ದಾಖಲಿಸಿಕೊಳ್ಳಲು ಪೊಲೀಸರ ಹಿಂದೇಟು

ಮನೆ ಮುಂದೆ ಕಾರ್​ ನಿಲ್ಲಿಸಿದ್ದಕ್ಕೆ ಯುವತಿಗೆ ಓರ್ವ ವ್ಯಕ್ತಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕಿರುಕುಳ ಕೊಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ ಯುವತಿ ಸ್ನೇಹಿತರು ಸಾಕ್ಷಿ ಸಮೇತ ಸಂಜಯನಗರ ಪೊಲೀಸ್​ ಠಾಣೆಗೆ ದೂರು ನೀಡಲು ಹೋಗಿದ್ದರು. ಮುಂದೇನಾಯ್ತು ಈ ಸ್ಟೋರಿ ಓದಿ...

ಕಾರ್​ ಪಾರ್ಕಿಂಗ್​ ವಿಚಾರವಾಗಿ ಯುವತಿಗೆ ಕಿರುಕುಳ: ದೂರು ದಾಖಲಿಸಿಕೊಳ್ಳಲು ಪೊಲೀಸರ ಹಿಂದೇಟು
ಸಂಜಯನಗರ ಪೊಲೀಸ್​ ಠಾಣೆ
Follow us
Jagadisha B
| Updated By: ವಿವೇಕ ಬಿರಾದಾರ

Updated on:Dec 01, 2023 | 11:47 AM

ಬೆಂಗಳೂರು ಡಿ.01: ಯುವತಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕಿರುಕುಳ ಕೊಟ್ಟ ವ್ಯಕ್ತಿಯ ವಿರುದ್ಧ ಸಂಜಯನಗರ ಪೊಲೀಸರು (Police) ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿರುವ ಆರೋಪ ಕೇಳಿಬಂದಿದೆ. ಸಂಜಯ್ ನಗರ ಪೊಲೀಸ್​ ಠಾಣಾ ವ್ಯಾಪ್ತಿಯ ಮನೆಯೊಂದರ ಮುಂದೆ ಓರ್ವ ಯುವತಿ ಕಾರ್ ಪಾರ್ಕಿಂಗ್ ಮಾಡಿದ್ದರು. ಈ ಸಂಬಂಧ ಮನೆಯ ಸದಸ್ಯ ಯುವತಿಗೆ (Youth) ಮನಬಂದಂತೆ ನಿಂದಿಸಿದ್ದಾನೆ. ಈ ವೇಳೆ ಯುವತಿ ಸ್ನೇಹಿತರು (Friends) ಆತನಿಗೆ ಸಮಾಧಾನ ಮಾಡಿದರೂ, ಸುಮ್ಮನಾಗದ ವ್ಯಕ್ತಿ ಬಾಯಿಗೆ ಬಂದಂತೆ ಬೈದಾಡಿದ್ದಾನೆ.

ಈ ದೃಶ್ಯವನ್ನು ಯುವತಿಯ ಸ್ನೇಹಿತರು ಮೊಬೈಲ್​ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಬಳಿಕ ಯುವತಿಗೆ ಕಿರುಕುಳ ಕೊಟ್ಟ ವ್ಯಕ್ತಿಯ ವಿರುದ್ಧ ಸಾಕ್ಷಿ ಸಮೇತ ದೂರು ಕೊಡಲು ಸಂಜಯನಗರ ಪೊಲೀಸ್​ ಠಾಣೆಗೆ ಹೋಗಿದ್ದಾರೆ. ಆದರೆ ಪೊಲೀಸ್​ ಅಧಿಕಾರಿಗಳು ದೂರು ಸ್ವೀಕರಿಸಿಲ್ಲ. ಸಂಜಯ್ ನಗರ ಪೊಲೀಸರ ಕಾರ್ಯವೈಕರಿಗೆ ಯುವತಿ ಸ್ನೇಹಿತರು ಅಸಮಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಮಹಿಳೆಯರ 13 ಸಾವಿರ ನಗ್ನ ಚಿತ್ರಗಳನ್ನು ಸಂಗ್ರಹಿಸಿಟ್ಟಿದ್ದ ಆರೋಪಿ ಅರೆಸ್ಟ್

ಯುವತಿ ಸ್ನೇಹಿತ ಎಕ್ಸ್​ (ಟ್ವಿಟರ್​)ನಲ್ಲಿ ತಾನು ಸೆರೆ ಹಿಡಿದ ವಿಡಿಯೋ ಪೋಸ್ಟ್​ ಮಾಡಿ, ವಿಡಿಯೋ ಸಮೇತ ಹೋಗಿ ದೂರು ಕೊಟ್ಟರು ಕ್ರಮ ಕೈಗೊಳ್ಳಲು ಪೊಲೀಸರು ಹಿಂದೇಟು ಹಾಕುತ್ತಾರೆ. ಹೀಗಾದರೆ ಬೆಂಗಳೂರಿನಲ್ಲಿ ಯುವತಿಯರು ಬದುಕುವುದು ಹೇಗೆ? ಎಂದು ಕಿರುಕುಳಕ್ಕೆ ಒಳಗಾಗಿರುವ ಯುವತಿ ಸ್ನೇಹಿತ ಬರೆದುಕೊಂಡಿದ್ದಾರೆ. ಮತ್ತು ಬೆಂಗಳೂರು ನಗರ ಕಮಿಷನರ್ ಅವರಿ​ಗೆ ಟ್ಯಾಗ್ ಮಾಡಿದ್ದಾರೆ.

 ಟ್ವೀಟ್​ ಮಾಡಿದ ಮೂರೇ ಗಂಟೆಯಲ್ಲಿ ಎಚ್ಚೆತ್ತ ಖಾಕಿ

ನಗರ ಪೊಲೀಸ್ ಕಮಿಷನರ್ ಅವರಿಗೆ ಟ್ವೀಟ್​ ಮೂಲಕ ಯುವತಿ ಸ್ನೇಹಿತ ದೂರು ನೀಡುತ್ತಿದ್ದಂತೆ ಸಂಜಯನಗರ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ನಗರ ಆಯುಕ್ತ ಬಿ ದಯಾನಂದ್​​ ಅವರು ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಕಮಿಷನರ್​ ಬಿ ದಯಾನಂದ್​ ಅವರ ಸೂಚನೆ ಮೇರೆಗೆ ಸಂಜಯನಗರ ಪೊಲೀಸರು ಯುವತಿಗೆ ನಿಂದಿಸಿದ್ದ ವ್ಯಕ್ತಿ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:15 am, Fri, 1 December 23

ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್
ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್
ಐತಿಹಾಸಿಕ ಪ್ರವಾಸಿತಾಣ ನಂದಿಗಿರಿಧಾಮ ಫುಲ್ ಟ್ರಾಫಿಕ್ ಜಾಮ್..!
ಐತಿಹಾಸಿಕ ಪ್ರವಾಸಿತಾಣ ನಂದಿಗಿರಿಧಾಮ ಫುಲ್ ಟ್ರಾಫಿಕ್ ಜಾಮ್..!
ಕೇವಲ 180 ಮೀಟರ್​​ ದೂರಕ್ಕೆ ಓಲಾ ಬೈಕ್ ಬುಕ್ ಮಾಡಿದ ಯುವತಿ
ಕೇವಲ 180 ಮೀಟರ್​​ ದೂರಕ್ಕೆ ಓಲಾ ಬೈಕ್ ಬುಕ್ ಮಾಡಿದ ಯುವತಿ